ಅಥವಾ

ಒಟ್ಟು 63 ಕಡೆಗಳಲ್ಲಿ , 18 ವಚನಕಾರರು , 49 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ. ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ. ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ | ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಮತ್ತಂ, ಗುಹ್ಯಮಂ ತ್ರಯೋದಶಾಂತದೊಳ್ಬೆರಸಿ ಪರಾಪರದೊಳೊಂದಿಸೆ ಹೌಂ ಎಂಬಾದಿಬೀಜಮಾಯ್ತು. ಮರಲ್ದುಂ, ಹ್ ಎಂಬ ಜೀವಮಂ ವರ್ಗಾದಿಯಾದಕಾರದೊಳ್ಮೋಳ್ಮೇಳಿಸಿ ಶಕ್ತಿಸಂಜ್ಞಿತ ಬಿಂದುವಂ ಬೆರಸೆ ಹಂ ಎನಿಸಿತ್ತು. ಬಳಿಕ್ಕಂ, ಶಕ್ತಿಸಂಜ್ಞಿತವಾದ ಸ್ ಎಂಬ ವ್ಯಂಜನಮಂ ಕಲಾಸಂಜ್ಞಿತವಾದ ಕಾರಣದೊಳ್ಪುದುಗೆ ಸ ಎನಿಸಿತ್ತು. ಮತ್ತೆಯುಂ, ವ್ಯಂಜನಶಕ್ತಿ ಬೀಜವಾದ ಸ್ ಎಂಬುದು ಮಾತ್ರಾದಿ ಸಂಜ್ಞಿತಕಾರಮನೊಂದೆ ಎಂದಿನಂತೆ ಸ ಎನಿ[ಸಿ] ತ್ತು. ಬಳಿಕಂ, ವರುಣವರ್ಗದ ನಾಲ್ಕನೆ ಯ ಎಂಬಕ್ಕರವುಂ ಮೂರನೆಯ ಸ್ವರಮನಸ್ಥಿ ಸಂಜ್ಞಿತಮಾದ ಶ್ ಎಂಬಕ್ಕರದೊಡನೆ ಕೂಡಿಸೆ ಶಿ ಎನಿಸಿತ್ತು. ಸೋಮಾಂತ ಸಂಜ್ಞಿತವಾದ ವಕಾರಮಂ ದ್ವಿಕಲಾಸಂಜ್ಞಿತವಾದಾಕಾರಮ ನೊಂದಿಸೆ ವಾ ಎನಿಸಿತ್ತು. ವಾಯುಬೀಜವಾದ ಯ್ ಎಂಬಕ್ಕರವನಾದಿಕಲಾಸಂಜ್ಞಿತ- ಮಾದಕಾರದೊಡನೆ ಕೂಡಿಸೆ ಯ ಎನಿಸಿತ್ತಿಂತು `ಹೌಂ ಹಂ ಸ ಸದಾಶಿವಾಯ' ಎಂಬಷ್ಟಾಕ್ಷರಮಂತ್ರಮಂ ನಿರವಿಸಿದೆಯಯ್ಯಾ, ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
``ಮೂರ್ಖತ್ವೇನ ಸಕ್ವೀಯಾನಿ ಕರ್ಮಾಣಿ ಚ ದಿನೇ ದಿನೇ|| ಯಃ ಕರೋತಿ ಸ ಮೂಢಸ್ತು ಶತಜನ್ಮವಿಮೋಚಕಃ||' ಎಂಬವನು ಕರ್ಮಿಯಯ್ಯಾ. ``ಜಗತ್ಸತ್ಯಂ ಮತ್ವಾ ಜಗ್ಕ ನಿರತಃ ಕರ್ಮಕುಶಲಃ| ತೃತೀಯೇನ ಪ್ರಾಪ್ತಿಃ ಪರಮ ಸುಪದಂ ಶಾಂಕರಿ ಶಿವೇ||' ಎಂಬವನು ಮುಮುಕ್ಷು ಕಂಡಯ್ಯಾ. ``ಪ್ರಪಂಚಂ ಸ್ವಪ್ನವನ್ಮತ್ವಾ ಧ್ಯಾನಕರ್ಮಪರಾಯಣಃ| ದಿಜನ್ಮತಾಂ ಸ ಮೋಕ್ಷಂ ಚ ಪ್ರಯಾತಿ ಗಿರಿನಂದನೇ||' ಎಂಬವನು ಅಭ್ಯಾಸಿ ಕಂಡಯ್ಯಾ. ``ವ್ಯವಹಾರಾನ್ಸಮಸ್ತಾಂಶ್ಚ ಉಪೇಕ್ಷ್ಯ ಪರಮೇಶ್ವರಿ| ವಿವೇಕತತ್ಪರೋಭೂತ್ವಾ ಏಕಜನ್ಮವಿಮೋಚಕಃ||' ಎಂಬವನು ಅನುಭಾವಿ ನೋಡಯ್ಯಾ. ``ಅದೃಷ್ಟಾ ್ಯ ವಿಶ್ವವಿಕೃತಿಂ ಸ್ವಾತ್ಮಜ್ಞಾನೇನ ಯೋ ನರಃ| ಭಾತಿ ತಸ್ಯ ಮಹಾದೇವಿ ವಿದೇಹಂ ವಪುರೀರಿತಂ||' ಎಂಬವನು ಆರೂಢ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಬಳಿಕ ಕ್ರಿ....ತನ್ನ ಶಿಷ್ಯನ ಕರೆದೆಲೆ ಮಗನೆ ನಿನ್ನ ಪ್ರಾ[ಣ]ಲಿಂಗವಿದು ತಾನೆ, ತತ್ವಾತೀತಮಾದ ಪರವಸ್ತುವಿದು ತಾನೆ, ಹರಿಬ್ರಹ್ಮರರಸಿ ಕಾಣದ ನಿಜತತ್ವವಿದ ನಿನ್ನು ನಿಮಿ...ರ್ಧಮಾದರೂ ನಿನ್ನ ಶರೀರದಿಂ ವಿಯೋಗಮಾಗದಂತೆ ಸಾವಧಾನದಿಂ ಧರಿಸು, ತ್ರಿಕಾಲಂ ತಪ್ಪದರ್ಚಿಸುತ್ತಿರು, ಲಿಂಗಾರ್ಪಿತವಲ್ಲ ದೇನೊಂದನು ಸ್ವೀಕರಿಸದಿರು, ಸಕಲಭೋಗಮೋಕ್ಷಂಗಳೆಲ್ಲಾ...ಸಾರಿದವೆಂದು ನಂಬು, ಸರ್ವ ಕ್ಲೇಶಮಂ ಬಿಡು, ನಿತ್ಯಸುಖಿಯಾಗು, ಸತ್ಯಮಿದೆಂಬಿವು ಮೊದ ಲಾದ ಶಿವಕ್ರಿಯೆಗಳ ನುಪದೇಶಂಗೆಯುಂತು ಪೇಳ ವೀರಶೈವದೀಕ್ಷೆಯಾದೊಡೆ ಆಜ್ಞಾದೀಕ್ಷೆ ಉಪ[ಮಾ]ದೀಕ್ಷೆ, ಸ್ವಸ್ಥಿಕಾರೋಹಣ, ಕಳಶಾಬ್ಥಿಷೇಕ, ವಿಭೂತಿಯ ಪಟ್ಟ, ಲಿಂಗಾಯತ, ಲಿಂಗಸ್ವಾಯತಮೆಂದು ಸಪ್ತವಿಧಮಾಗಿಹುದವರಲ್ಲಿ ಶ್ರೀಗುರು ತನ್ನಾಜ್ಞೆಯನೆ ಶಿಷ್ಯನಲ್ಲಿ ಪ್ರತಿಪಾದಿಸೊದೆ ಆಜ್ಞಾದೀಕ್ಷೆ ಎನಿಸೂದು. ಪುರಾತನ ಸಮಯಾಚಾರಕ್ಕೆ ಸದೃಶಮಾಗಿ ಮಾಡೂದೆ ಉಪಮಾದೀಕ್ಷೆ ಎನಿಸೂದು. ಸ್ವಸ್ತಿಕಮೆಂಬ ಮಂಡಲದ ಮೇಲೆ ಶಿಷ್ಯನಂ ಕುಳ್ಳಿರಿಸಿ ಮಂತ್ರ ನ್ಯಾಸಾದಿಗಳಂ ಮಾಡಿ ಮಂತ್ರಶರೀರಿ ಎನಿಸೂದೆ ಸ್ವಸ್ತಿಕಾರೋಣವೆನಿಸೂದು. ಪಂಚಕಳಶೋದಕಂಗಳಿಂ ಶಿಷ್ಯಂಗೆ ಸ್ನಪನಂಗೆಯ್ವುದೆ ಕಳಶಾಬ್ಥಿಷೇಕವೆನಿ ಸೂದು. ಆಗಮೋಕ್ತಸ್ಥಾನಂಗಳಲ್ಲಿ ತತ್ತನ್ಮಂತ್ರಂಗಳಿಂ ಶ್ರೀವಿಭೂತಿ ಧಾರಣಂ ಗೆಯ್ವುದೆ ವಿಭೂತಿಯ ಪಟ್ಟವೆನಿಸೂದು. ಆಚಾರ್ಯಂ ತಾನೂ ಶಿಷ್ಯಂಗೆ ಕೊಡಲುತಕ್ಕ ಲಿಂಗವನರ್ಚಿಸಿ ಶಿಷ್ಯನಂ ನೋಡಿಸೊದೆ ಲಿಂಗಾಯತವೆನಿಸೂದು. ಆ ಶ್ರೀಗುರುವಿತ್ತ ಲಿಂಗವನೆ ಶಿಷ್ಯನು ಸಾವಧಾನದಿಂದುತ್ತಮಾಂಗಾದಿ ಸ್ಥಾನಂಗಳಲ್ಲಿ ಧರಿಸೂದೆ ಲಿಂಗಸ್ವಾಯತವೆನಿಸೂದು. ಇಂತು ಶಾಸ್ತ್ರೋಕ್ತ ಕ್ರಮದಿಂ ಸಾಂಗಿಕಮಾದ ಶಿವದೀಕ್ಷೆಯಿಂ ಲಿಂಗಾಂಗಸಂಬಂದ್ಥಿಯಾದ ವೀರಶೈವನು ಮಾಳ್ಪ ಶಿವಲಿಂಗ ಪೂಜಾಕ್ರಮವೆಂತೆಂದೊಡೆ :ಶ್ರೇಷ್ಠರುಗಳಾ ವಾವುದನಾಚರಿಸುವರದನೆ ಲೋಕದವರನುವರ್ತಿಪುದರಿಂ, ಜಗಕ್ಕುಪದೇಶ ಮಪ್ಪಂತೆ ತಾನು ನಿತ್ಯನಿರ್ಮಲನಾದರೂ ಮಂತ್ರನ್ಯಾಸಾ... [ಸಾಂಸ್ಥಿಕಮಾಗಿ] ಶಿವಲಿಂಗಾರ್ಚನೆಯಂ ಮಾಡುವಲ್ಲಿ ಮೊದಲು...ಳತನುಲಿಂಗುಪದೇಶಮಂ ಮಾಳ್ಪುದು. ಪದಿನೆಂಟುಕುಲ ಪ್ರವರ್ತನೆಯನಳಿದು, ಶರಣರ ಕುಲ ವನೊ.... ಶಿವಪೂಜೋಪಚಾರವೆ ತನಗೆ ಸಂಸಾರವೆನಲದುವೆ ನಿಸ್ಸಂಸಾರ ದೀಕ್ಷೆ ತ್ರಿಮಲ ಭವದೊಳು...ಲಿಂಗಾಂಗಸಮರಸವ ಮಾಳ್ಪುದೆ ತತ್ವದೀಕ್ಷೆ. ಲಿಂಗಾಂಗಸ್ವಯ ಲಿಂಗ ನೀನೆಂದು ತಿಳುಪುವದೆ ಅ...ಹವು ಹಿಂಗದಾ ಸಚ್ಚಿದಾನಂದಬ್ರಹ್ಮಾತ್ಮಕ ತಾನೆನಲ ದುಸತ್ಯಶುದ್ಧೀದಕ್ಷೆ. ಯೀ ಸಪ್ತಕವ....ಯದೆಹುದೆ ಏಕಾಗ್ರಚಿತ್ತದೀಕ್ಷೆ. ವ್ರತನಿಯಮಂ[ಗಳಲ್ಲಿ]....ಯ ಕರಣಭಾವಾರ್ಪಿತಗಳಂ ಸರ್ವಕಾಲದೊಳು ಇಷ್ಟ ಪ್ರಾಣವಾಸ ಲಿಂಗಂ.....ದಿರ್ಪುದೆ ....ದೀಕ್ಷೆಯೆನಿಪುದು. ಆದಿಮಧ್ಯಾವ ಸಾನರಹಿತ ಶಿವ ತಾನೆ ನಲ....ಚ್ಚಿ ಬೇರ್ಪಡಿಸದಿರವೆ ಸದ್ಯೋನ್ಮುಕ್ತಿದೀಕ್ಷೆ. ಈ ಏಳನು ಭಾವಕುಪದೇಶ ಮಂ....(ಅಪೂರ್ಣ)
--------------
ಶಾಂತವೀರೇಶ್ವರ
ಬಳಿಕ್ಕ, ಭೂತಾಂತಮನುದ್ಧರಿಸಿ ತ್ರಯೋದಶಾಂತ ಸ್ವರದೊಳದಂ ಬೆರಸಿ ಕಾರ್ಯಕಾರಣಮನೊಂದಿಸೆ ಹೌಂ ಎಂಬ ಮೊದಲ ಬೀಜವಾಯ್ತು. ಮತ್ತವಿೂ ಶವರ್ಗದ ಮೊದಲಕ್ಕರಮಾದ ಶಕಾರವ್ಯಂಜನದೊಳ್ತ್ರಿ ಕಲೆ- ಯೆನಿಪಿಕಾರಮಂ ಕೂಡೆ ಶಿ ಯೆನಿಸಲ್ ಸೋಮಸಂಜ್ಞ ಕುಬೇರವರ್ಗದ ಕಡೆಯ ವಕಾರಮಂ ದ್ವಿಕಲೆವೆಸರ ಆಕಾರದೊಡವೆರಸೆ ವಾಯೆಂದಾಯ್ತು. ಮತ್ತಂ, ಸೋಮವರ್ಗದಾದಿಯ ಯ್‍ಕಾರ ವ್ಯಂಜನಮನಾದಿ ಸ್ವರದೊಳ್ಕೂಡೆ ಯ ಎಂದೆನಿಸಿತ್ತು. ವರುಣವರ್ಗದ ಕಡೆಯ ನ್ ಎಂಬ ವ್ಯಂಜನಮನಾದಿ ಸ್ವರದೊಳ್ಕೂಡೆ ನ ಎಂದೆನಿಸಿತ್ತು. ವಾಯುವರ್ಗದ ಕಡೆಯ ಮ್ ಎಂಬ ವ್ಯಂಜನದೊಳ್ ಸ್ವರಾದಿಯಂ ಕೂಡೆ ಮ ಎಂದೆನಿಸಿತ್ತು. ಈ ಹೌಂ `ಸ ಶಿವಾಯ ನಮಃ' ಎಂಬೀ ಷಡಕ್ಷರವೆ ಅಬ್ಥಿವ್ಯದ್ಧಿಯೆಂಬ ಮಂತ್ರವೆಂದರಿಪಿದೆಯಯ್ಯಾ, ಪರಮಶಿವಲಿಂಗ ಪ್ರಮಥಾಂತರಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕೆಯುಂ, ವಾಂತವೆ ಸೂಕ್ಷ ್ಮ ರುದ್ರಸಂಜ್ಞಿತವಾದಿಕಾರದೊಳ್ಬೆರೆಯೇ ಶಿ ಯೆನಿಸಿತ್ತು. ಲಾಂತವೆ ಅನಂತಾಖ್ಯ ರುದ್ರಸಂಜ್ಞಿತವಾದಾಕಾರದೋಳ್ಕೂದೆ ವಾ ಯೆನಿಸಿತ್ತು. ಮರುದ್ವಾಚ್ಯವಾದ ಮಾಂತವೆ ಯ ಯೆನಿಸಿತ್ತೀ ಮೂರಕ್ಕಾದಿಯಾದ ನಮಃ ಎಂಬ ಹೃದಯಪಲ್ಲವಂಗೂಡಿ ಪಂಚಾಕ್ಷರಮೆನಿಸಲದು `ತಾರಾಧ್ಯೇಯಂ ಷಡಕ್ಷರಂ' ಎಂದು ನಿರ್ವಚಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮರಲ್ದುಂ ಬ ವಾಙ್ಮಯೀ ಭ ಜಯೆ ಮ ಸುಮುಖಿ ಯ ಈಶ್ವರಿ ರ ರೇವತಿ ಲ ಮಾಧವಿ ಇಂತೀ ಮಹಾಲಿಂಗದ ಶಕ್ತಿಯಧಃಕಂಜಸಂಜ್ಞಿತವಾದ ಸ್ವಾದ್ಥಿಷ್ಠಾನಚಕ್ರದ ಷಟ್ಕೋಷ್ಠದಳ ನ್ಯಸ್ತ ಷಡ್ರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಓಂಕಾರ ಬಿಂದು ಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿಯಃ ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ ನಮಂತಿ ಋಷಯೋ ದೇವಾ ನಮಂತ್ಯಪ್ಸರಸಾಂಗಣಾಃ ನಮಂತಿ ದೇವಾ ದೇವೇಶಂ `ನ' ಕಾರಾಯ ನಮೋ ನಮಃ ಮಹಾದೇವಂ ಮಹಾತ್ಮಾನಂ ಮಹಾಜ್ಞಾನಪರಾಯಣಂ ಮಹಾಪಾಪ ಹರಂ ನಿತ್ಯಂ `ಮ' ಕಾರಾಯ ನಮೋ ನಮಃ ಶಿವಂ ಶಾಂತಧರಂ ದೇವಂ ಲೋಕಾನುಗ್ರಹ ಕಾರಣಂ ಶಿವಮೇಕಂ ಪರಬ್ರಹ್ಮ `ಶಿ'ಕಾರಾಯ ನಮೋ ನಮಃ ವಾಹನಂ ವೈಷಭೋ ಯಸ್ಯ ವಾಸುಕಿಃ ಕಂಠಭೂಷಣಂ ವಾಮಶಕ್ತಿಧರಂ ದೇವಂ `ವ'ಕಾರಾಯ ನಮೋ ನಮಃ ಯತ್ರ ಯತ್ರ ಸ್ಥಿತೋ ದೇವಃ ಸರ್ವವ್ಯಾಪಿ ಮಹೇಶ್ವರಃ ಯೋ ಗುರುಃ ಸರ್ವದೇವಾನಾಂ `ಯ'ಕಾರಾಯ ನಮೋ ನಮಃ ವೇದ: ನಕಾರಾಯ ಮಕಾರಾಯ ಶಿಕಾರಾಯ ತಥೈವ ಚ ವಕಾರಾಯ ಯಕಾರಾಯ ಓಂಕಾರಾಯ ನಮೋ ನಮಃ ವೇದಮಾತಾ ಚ ಗಾಯಿತ್ರೀ ಮಂತ್ರಮಾತಾ ಷಡಕ್ಷರೀ ಸರ್ವದೇವಪಿತಾ ಶಂಭುಃ ಭರ್ಗೋ ದೇವಸ್ಯ ದ್ಥೀಮಹಿ ಷಡಕ್ಷರಮಿದಂ ಪುಣ್ಯಂ ಯಃ ಪಠೀತ್ ಶಿವಸನ್ನಿಧೌ ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೆ ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎನ್ನದಿರ್ದಡೆ ಭವಬಂಧನ ಇಹಪರ ಸಂಸಾರಾದಿ ಪ್ರಪಂಚಬಂಧನ ಬಿಡದು. ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದಡೆ ಮೋಕ್ಷಸಿದ್ಧಿ. ಸಾಕ್ಷಿ: ಷಡಕ್ಷರಜಪಾನ್ನಾಸ್ತಿ ಸರ್ವೇಷಾಂ ಬಂಧನಂ ತಥಾ ತನ್ಮಂತ್ರಂ ಚ ಜಪನ್ ಭಕ್ತ್ಯಾ ಸದ್ಯೋ ಮುಕ್ತೋ ನ ಸಂಶಯಃ ಎಂಬುದಾಗಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯ ಬಂದು ಮೋಕ್ಷ ತಾನೇ ಓಂ ನಮಃ ಶಿವಾಯ.
--------------
ಉರಿಲಿಂಗಪೆದ್ದಿ
ಮಾತನು ಮನೆಯ ಮಾಡಿ ಪತಿ (ಸತಿರಿ) ಯ ನೆಲೆಗೊಳಿಸಿ ಭ್ರಾಂತಿನ ಕದವನಿಕ್ಕಿ ಸೂತಕವಳಿದ ಸುಯಿದಾನಿ, ಇದನರಿದು ಮರೆದವರ ಕೂಡಲಚೆನ್ನಸಂಗನೆಂಬೆ
--------------
ಚನ್ನಬಸವಣ್ಣ
ಹೋಗುವ ಬನ್ನಿರಯ್ಯ ; ಶಕ್ತಿಪಾತವಾದ ಶಿವಯೋಗೀಶ್ವರರು ಶಿವಭಕ್ತರು ಹೋಗುವ ಬನ್ನಿರಯ್ಯ. ಸುಕ್ಷೇತ್ರದಲ್ಲಿರ್ಪ ಮಹಲಿಂಗದರುಶನಕೆ ಹೋಗುವ ಬನ್ನಿರಯ್ಯ. ಜೀವಸಂಚಾರವೆಂಬ ಪ್ರಾಕೃತವೆನಿಸುವ ಅಧೋಕುಂಡಲಿಸ್ವರೂಪಮಾದ ಅಹಂ ಎಂಬ ಹೆಬ್ಬಟ್ಟೆಯಂ ಬಿಟ್ಟು, ಸಜ್ಜೀವವೆಂಬ ವೈಕೃತವೆನಿಸುವ ಮಧ್ಯಕುಂಡಲಿಸ್ವರೂಪಮಾದ ಸೋಹಮೆಂಬ ಸಣ್ಣಬಟ್ಟೆಯ ಹಿಡಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ಕೇವಲ ಶಿವಯೋಗವೆಂಬ ಏಕವೆನಿಸುವ ಊಧ್ರ್ವಕುಂಡಲಿಸ್ವರೂಪಮಾದ ಓಂ ಎಂಬ ನುಸುಳುಗಂಡಿಯಂ ನುಸಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ದ್ವಯಮಂಡಲವ ಭ್ರೂಮಧ್ಯವೆಂಬ ಮಹಾಮೇರುವ ಮಧ್ಯದಲ್ಲಿ ಏಕಮಂಡಲಾಕಾರ ಮಾಡಿ, ಆ ಕಮಲಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಮಹಾಲಿಂಗದಲ್ಲಿ ಜೀವಪರಮರಿಬ್ಬರನೇಕಾರ್ಥವಂ ಮಾಡಿ, ಶಾಂಭವೀಮುದ್ರಾನುಸಂಧಾನದಿಂದೆ ಅಧೋಮುಖಕಮಲವೆಲ್ಲ ಊಧ್ರ್ವಮುಖವಾಗಿ, ಆ ಮಹಾಲಿಂಗವ ನೋಡುತಿರಲು ಆ ಕಮಲಸೂತ್ರವಿಡಿದಿಹ ಷಡಾಧಾರಚಕ್ರಂಗಳ ಊಧ್ರ್ವಮುಖವಾಗಿ ಆ ಕಮಲದಲ್ಲಿ ಅಡಗಿ, ಆ ಕಮಲದ ಎಸಳು ಐವತ್ತೆರಡಾಗಿ ಎಸೆವುತಿರ್ಪವು. ಪರಿಪೂರ್ಣ ಜ್ಞಾನದೃಷ್ಟಿಯಿಂ ಆ ಮಹಾಲಿಂಗಮಂ ನಿರೀಕ್ಷಿಸಲು ಆ ಕಮಲದಲ್ಲಿ ಮಹಾಲಿಂಗಸ್ವರೂಪಮಾಗಿ ಸಕಲ ಕರಣೇಂದ್ರಿಯಂಗಳು ಆ ಮಹಾಲಿಂಗದಲ್ಲಿಯೆ ಅಡಗಿ, ಸುನಾದಬ್ರಹ್ಮವೆಂಬ ಇಷ್ಟವೆ ಮಹಾಲಿಂಗವೆಂದರಿದು ನೋಡುತ್ತಿರಲು, ಜ್ಯೋತಿರ್ಮಯವಾಗಿ ಕಾಣಿಸುತಿಪ್ಪುದು. ಅದೇ ಜೀವಪರಮರೈಕ್ಯವು ; ಅದೇ ಲಿಂಗಾಂಗಸಂಬಂಧವು. ಆ ಮಹಾಲಿಂಗದ ಕಿರಣಂಗಳೆ ಕರಣಂಗಳಾಗಿ ಆ ಕಮಲವು ಅಧೋಮುಖವಾಗಿ ಆ ಮಹಾಲಿಂಗವು ತನ್ನ ನಿಜನಿವಾಸವೆನಿಸುವ `ಅಂತರೇಣ ತಾಲುಕೇ' ಎಂಬ ಶ್ರುತಿ ಪ್ರಮಾಣದಿ ತಾಲುಮೂಲದ್ವಾದಶಾಂತವೆಂಬ ಬ್ರಹ್ಮರಂಧ್ರದ ಮಧ್ಯದಲ್ಲಿ ಪ್ರಕಾಶಿಸುತ್ತಿರ್ಪುದೊಂದು ಶಿವಚಕ್ರವು. ಆ ಶಿವಚಕ್ರವೆ ಶಿವಲೋಕವೆನಿಸುವುದು. ಆ ಶಿವಲೋಕವೆ ಶಾಂಭವಲೋಕವೆನಿಸುವುದು. ಶಾಂಭವಲೋಕವೆ ಶಾಂಭವಚಕ್ರವೆನಿಸುವುದು. ಆ ಶಾಂಭವಚಕ್ರದಲ್ಲಿ ಆಧಾರವಾದಿ ಪಶ್ಚಿಮಾಂತ್ಯವಾದ ನವಚಕ್ರಂಗಳು ಸಂಬಂಧವಾಗಿರುತಿರ್ಪವು. ಅದು ಹೇಗೆಂದೊಡೆ ; ಆ ಶಾಂಭವಚಕ್ರಮಧ್ಯದ ಚತುರ್ದಳಾಗ್ರದಲ್ಲಿ ಅಗ್ನಿಮಂಡಲದಲ್ಲಿ ಅಷ್ಟದಳ ಇರ್ಪುವು. ಆ ಅಷ್ಟದಳ ಚತುರ್ದಳದಲ್ಲಿ `ವಶಷಸ' ಎಂಬ ನಾಲ್ಕಕ್ಷರಯುಕ್ತವಾದ ಆಧಾರಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ನ' ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ತಾರಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಗ್ನಿಮಂಡಲದ ಚತುರ್ದಳದ ಈಶಾನ್ಯ ದಳದಲ್ಲಿ `ಬ ಭ ಮ ಯ ರ ಲ' ಎಂಬ ಆರಕ್ಷರಯುಕ್ತವಾದ ಸ್ವಾದ್ಥಿಷ್ಠಾನಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಮ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದಂಡಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳಾಗ್ರದಲ್ಲಿ ಸೂರ್ಯಮಂಡಲವಿರ್ಪುದು. ಆ ಸೂರ್ಯಮಂಡಲದಲ್ಲಿ `ಡಢಣ ತಥದಧನ ಪಫ' ಎಂಬ ದಶಾಕ್ಷರಯುಕ್ತವಾದ ಮಣಿಪೂರಕಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಶಿ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಕುಂಡಲಾಕೃತಿಯಲ್ಲಿ ಸಂಬಂಧವಾಗಿರ್ಪುದು. `ಕಖಗಘಙ ಚಛಜಝಞ ಟಠ' ಎಂಬ ದ್ವಾದಶಾಕ್ಷರಯುಕ್ತವಾದ ಅನಾಹತಚಕ್ರವು ಸೂರ್ಯಮಂಡಲದಲ್ಲಿ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ವ'ಕಾರವು ಆ ಮಹಾಲಿಂಗಸ್ವರೂಪವಾದಪ್ರಣವದ ಅರ್ಧಚಂದ್ರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳದಮಧ್ಯದಲ್ಲಿ ಚಂದ್ರಮಂಡಲವಿರ್ಪುದು. ಆ ಚಂದ್ರಮಂಡಲದಲ್ಲಿ- `ಅ ಆ ಇ ಈ ಉ ಊ ಋ Iೂ ಲೃ ಲೂೃ ಏ ಐ ಓ ಔ ಅಂ ಅಃ' ಎಂಬ ಷೋಡಶಾಕ್ಷರಯುಕ್ತವಾದ ವಿಶುದ್ಧಿಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಯ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಮಹಾಲಿಂಗಕ್ಕೆ ಪೀಠಮಾಗಿರ್ದ ಬಿಂದುಯುಕ್ತಮಾದ ಪ್ರಣವವು ಆ ಮಹಾಲಿಂಗದ ಮುಂದಿರ್ದ `ಹಂ ಳಂ ಹಂ ಕ್ಷಂ' ಎಂಬ ಚುತವರ್ಣಾಕ್ಷರಯುಕ್ತವಾದ ಆಜ್ಞಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಓಂಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಜ್ಯೋತಿರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಚತುರ್ದಳವು ತ್ರಿದಳದಲ್ಲಿ ಕ್ಷ ಉ ಸ ಎಂಬ ತ್ರಯಕ್ಷರಯುಕ್ತವಾದ ಶಿಖಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ಕ್ಷ' ಕಾರವು ಆ ಮಹಾಲಿಂಗಸ್ವರೂಪವಾದ ಕುಂಡಲಾಕೃತಿ ಅರ್ಧಚಂದ್ರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಆ ಚತುರ್ದಳದ ಮಧ್ಯದಲ್ಲಿ ಬಟುವೆ ಏಕದಳವೆನಿಸಿಕೊಂಬುದು. ಆ ಏಕದಳದಲ್ಲಿ ಪಶ್ಚಿಮಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಹ್ರಾಂ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿ ಜ್ಯೋತಿರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಹೀಂಗೆ ಅಷ್ಟಚಕ್ರಂಗಳ ತನ್ನೊಳಗೆ ಗಬ್ರ್ಥೀಕರಿಸಿಕೊಂಡು ಬೆಳಗುತ್ತಿರ್ಪುದೊಂದು ಬ್ರಹ್ಮರಂಧ್ರಚಕ್ರವು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಹ್ರೀಂ ಕಾರಗಳು. ಆ ಹರದನಹಳ್ಳಿಯ ಪ್ರಭುಲಿಂಗಗುರುಸ್ವಾಮಿಯ ಶಿಷ್ಯರು ನಿಜಾನಂದ ಗುರುಚೆನ್ನಯ್ಯನವರು. ಆ ನಿಜಾನಂದ ಗುರುವಿನ [ಶಿಷ್ಯರು] ಗುರುಸಿದ್ಧವೀರೇಶ್ವರದೇವರು. ಆ ಸಿದ್ಧವೀರೇಶ್ವರದೇವರ ಕರಕಮಲದಲ್ಲಿ ಉದಯವಾದ ಬಾಲಸಂಗಯ್ಯನು ನಾನು. ಆ ನಿರಂಜನ ಗುರುವೆ ತಮ್ಮ ಕೃಪೆಯಿಂದ ತಮ್ಮಂತರಂಗದಲ್ಲಿರ್ದ ಅತಿರಹಸ್ಯವಾದ ಶಾಂಭವಶಿವಯೋಗವೆಂಬ ಮಹಾಜ್ಞಾನೋಪದೇಶಮಂ ಹರಗುರು ವಾಕ್ಯಪ್ರಮಾಣಿನಿಂ ಎನ್ನ ಹೃದಯಕಮಲದಲ್ಲಿ ಕರತಳಾಮಳಕದಂತೆ ತೋರಿ, ಆ ಹೃದಯಕಮಲಕರ್ಣಿಕಾಮಧ್ಯದಲ್ಲಿರ್ಪ ನಿರಂಜನಗುರುವೆ ನಿರಂಜನಮಹಾಲಿಂಗವೆಂದರಿದು ಆ ನಿರಂಜನಮಹಾಲಿಂಗವೆ ಕರಸ್ಥಲದಲ್ಲಿರ್ಪ ಸುನಾದಬ್ರಹ್ಮವೆಂಬ ಇಷ್ಟಲಿಂಗವೆಂದರಿದು, ಆ ಕರಸ್ಥಲದಲ್ಲಿರ್ಪ ಇಷ್ಟಲಿಂಗವೆ ತಾನೆಂದರಿದು ``ಮಂತ್ರಮಧ್ಯೇ ಭವೇತ್‍ಲಿಂಗಂ ಲಿಂಗಮಧ್ಯೇ ಭವೇತ್‍ಮಂತ್ರಂ | ಮಂತ್ರಲಿಂಗದ್ವಯಾದೇಕಂ ಇಷ್ಟಲಿಂಗಂತು ಶಾಂಕರಿ ||' ಎಂದುದಾಗಿ, ಎನ್ನ ಹೃತ್ಕಮಲಕರ್ಣಿಕಾಮಧ್ಯದಲ್ಲಿ ಶಾಂಭವೀಮುದ್ರಾನುಸಂಧಾನದಿಂದ ಆ ಲಿಂಗವೆ ಮಂತ್ರ, ಮಂತ್ರವೆ ಲಿಂಗವೆಂದರಿದು ಓಂ ಓಂ ಎಂದು ಶಿವಸಮಾದ್ಥಿಯ ಜಪಮಂ ಜಪಿಸುತ್ತ ಜ್ಯೋತಿರ್ಲಿಂಗಮಂ ಕೇಳುತ, ಜ್ಯೋತಿರ್ಲಿಂಗದೊಳು ಮುಳುಗಾಡುತ್ತಿರ್ದೆನಯ್ಯಾ ಬಸವಣ್ಣಪ್ರಿಯ ಚೆನ್ನಸಂಗಯ್ಯನೆಂಬ ಗುರುವಿನ ಕೃಪೆಯಿಂದ, ನಿಮ್ಮ ಶರಣರ ಪಡುಗ ಪಾದರಕ್ಷೆಯ ಹಿಡಿವುದಕ್ಕೆ ಯೋಗ್ಯನಾದೆನಯ್ಯ ನಿಮ್ಮ ಕೃಪೆಯಿಂದ.
--------------
ಭಿಕ್ಷದ ಸಂಗಯ್ಯ
ನ ಎಂಬಕ್ಷರದ ಭೇದ ಜನನ ನಾಸ್ತಿಯಾದ ವಿವರ. ಮ ಎಂಬಕ್ಷರದ ಭೇದ ಮರಣ ನಾಸ್ತಿಯಾದ ವಿವರ. ಶಿ ಎಂಬಕ್ಷರದ ಭೇದ ಸ್ವೀಕರಣೆ ನಾಸ್ತಿಯಾದ ವಿವರ. ವ ಎಂಬಕ್ಷರದ ಭೇದ ವಕಾರ ನಾಸ್ತಿಯಾಗಿ ಸಾಕಾರವಳಿದ ಭೇದ. ಯ ಎಂಬಕ್ಷರದ ಭೇದ ತತ್ವಮಸಿಯೆಂಬ ಬ್ಥಿತ್ತಿಯ ಮೆಟ್ಟದೆ ಉತ್ಪತ್ಯ ಸ್ಥಿತಿ ಲಯವೆಂಬ ತ್ರಿವಿಧವ ಮುಟ್ಟದೆ ಅದು ನಿಶ್ಚಯವಾದಲ್ಲಿ ಪಂಚಾಕ್ಷರಿಯ ಭೇದ. ಇಂತೀ ಭೇದಂಗಳಲ್ಲಿ ಜಪಧ್ಯಾನವ ಧ್ಯಾನಿಸಿ ಇಷ್ಟ ಕಾಮ್ಯ ಮೋಕ್ಷಂಗಳೆಂಬ ಮೂರಂಗುಲವನರಿವುದು. ಸದೃಷ್ಟ ತನ್ನಷ್ಟವೆಂಬ ಉಭಯದ ಅಂಗುಲವ ಕಂಡು ಚತುರ್ವಿಧಫಲಪದಂಗಳಲ್ಲಿ ಭಾವಿಸಿ ಕಲ್ಪಿಸದಿಪ್ಪುದು ಜಪಧ್ಯಾನ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಇಂತಷ್ಪಾಕ್ಷರಮಂತ್ರ ನಿರೂಪಣಾನಂತರದಲ್ಲಿ ನವಾಕ್ಷರ ಮಂತ್ರಮಂ ಪೇಳ್ವೆನೆಂತೆನೆ ಭೂತಾಂತ ಸಂಜ್ಞಿತ ಹಕಾರಮನುದ್ಧರಿಸಿ ಸ್ವರ ತ್ರಯೋದಶಾಂತದೊಡನೆ ಕೂಡಲ್ ಹೌ ಎನಿಸಿತ್ತು. ಸಂಜ್ಞಿತವಾದಕಾರದೊಡನೆ ಕೂಡೆ ಹ ಎನಿಸಿತ್ತು. ಹೌ ಹ ಎಂಬಿವೆರಡು ಶಕ್ತಿ ಸಂಜ್ಞಿತವಾದ ಬಿಂದುವಂ ಬೆರಸೆ ಹೌಂ ಹಂ ಎಂದೆನಿಸಿದವು. ಶಕ್ತಿ ಸಂಜ್ಞಿತವಾದ ಸ್ ಎಂಬ ವ್ಯಂಜನಂ ಮಾತ್ರಾಸಂಜ್ಞಿತವಾದ ಕಾರಮನೊಂದೆ ಸ ಎನಿಸಿ- ತೇಳನೆಯ ವರ್ಗಾಂತ್ಯಾಕ್ಷರವಾದ ವ್ ಎಂಬುದಂ ಪಿಂಪೇಳ್ದ ಸಕಾರದ ಪೂರ್ವದೊಳಿಡೆ ಸ್ವ ಎನಿಸಿತ್ತು. ವಾಯುವರ್ಗದ ಕಡೆಯ ಮ್ ಎಂಬುದನಾದಿಭೂತ ಸಂಜ್ಞಿತಮಾದಾಕಾಶ ವರ್ಗಾಂತ್ಯವಾದಕಾರದೊಡನೆ ಕೂಡೆ ಮ ಎನಿಸಿತ್ತು. ಲಯ ವರ್ಗದಾದಿಯ ಕ್ಷಕಾರಮಂ ವರುಣವರ್ಗದಾದಿಯ ತಕಾರಮುಮನುದ್ಧರಿಸಿ ಯವೆರಡರ ನಡುವೆ ಯಾಂತವಾದಾ ರ್ ಎಂಬ ವ್ಯಂಜನಮನಾದಿಬೀಜ ಸಂಜ್ಞಿತವಾದಕಾರದೊಡನೆ ಕೂಡೆ ರ ಎನಿಸಿತಿಂತು ಕ್ಷ ರ ತ ಎನಿಸಿದವು. ಸಪ್ತಮವರ್ಗದಾದಿಯಾದ ಯ್ ಎಂಬಕ್ಕರವನಾದಿಸಂಜ್ಞಿತವಾದ ಕಾರದೊಡನೆ ಕೂಡೆ ಯ ಎನಿಸಿತ್ತಾರನೆಯ ವಾಯುವರ್ಗಾಂತವಾದ ಮ್ ಎಂಬಕ್ಕರ ಮನಾದಿಸಂಜ್ಞಿತವಾದ ಕಾರದೊಡನೆ ಬೆರಸೆ ಮ ಎನಿಸಿ, ಒಂಬತುಮಮಂ ಬಿಂದು ನಾದಸಂಜ್ಞಿತವಾದ ಸೊನ್ನೆಯಂ ಕೂಡಿಸೆ, `ಹೌಂ ಹಂ ಸ್ವಂ ಮಂ ಕ್ಷಂ ರಂ ತಂ ಯಂ ಮಂ' ಎಂಬೀ ನವಾಕ್ಷರ ಮಂತ್ರ ಸರ್ವಸಿದ್ಧಿಪ್ರದ ಶಾಂತಿಕಮಂತ್ರವೆಂದು ನಿರೂಪಿಸಿದೆಯಯ್ಯಾ, ಪರಶಿವಲಿಂಗೇಶ್ವರ ನವಲಿಂಗ ಭಾಸ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕಮೀ ಚಕ್ರಸ್ಥ ವರ್ನಂಗಳ್ಗೆ ವರ್ಗಭೇದಮುಂಟದೆಂತೆನೆ- ಸ್ಥಿತಿವರ್ಗ ಸೃಷ್ಟಿವರ್ಗ ಸಂಹಾರವರ್ಗಂಗಳೆಂಬೀ ವರ್ಗಂಗಳವರಲ್ಲಿ ಮೊದಲ ಸ್ಥಿತಿವರ್ಗವೊಂದರೊಳಗೆ ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಂಗಳಕ್ಕುಮಿವಕ್ಕೆ ವಿವರಂ. ಪೂರ್ವಾದೀಶಾನಾಂತಮಾಗಿ ಅಗ್ನಿ ಚಂದ್ರ ಸೂರ್ಯಮಂಡಲದಳ ನ್ಯಸ್ತಾಕ್ಷರಗಳೆಲ್ಲಂ ಸ್ಥಿತಿವರ್ಗ- ವಿವರೊಳ್ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಗಳೆಂದು ತ್ರಿವಿಧಮಪ್ಪವರಲ್ಲಿ ಮೊದಲಗ್ನಿಮಂಡಲದೆಂಟು ದಳಂಗಳಲ್ಲಿಯ ಸ ಷ ಶ ವ ಲ ರ ಯ ಮ ಗಳೆಂಬಿವೆಂಟು ಸಾತ್ವಿಕಂಗಳೆನಿಪ- ವದರಾಚೆಯ ಚಂದ್ರಮಂಡಲದ ದಳೋಪದಳಂಗಳಲ್ಲಿ ಪೂರ್ವಾದೀಶಾನಾಂತಮಾಗಿ ನ್ಯಸ್ತವಾದ ಅ ಆ ಇ ಈ ಉ ಊ ಒ ಓ ಏ ಐ ಓ ಔ ಅಂ ಆಃ ಎಂಬೀ ಪದಿನಾರೆ ರಾಜಸಂಜ್ಞೆಂಗಳೆನಿಪ ವದರಾಚೆಯ ಸೂರ್ಯಮಂಡಲದ ಮೂವತ್ತೆರಡು ದಳಂಗಳೊಳಗ- ಣೆಂಟಕ್ಕರಂಗಳಗ್ನಿ ಮಂಡಲದೆಂಟುದಳಂಗಳಲ್ಲಿ ನ್ಯಸ್ತವಾಗಿರ್ದಪವವರ, ಶೂನ್ಯದಳಂಗಳೆಂಟಂ ಬಿಟ್ಟುಳಿದಿರ್ಪತ್ತು ನಾಲ್ಕು ದಳಂಗಳಲಿ ನ್ಯಸ್ತವಾದ ಕಖಗಘಙ ಚಛರುsುಜಞ ಟಠಡಢಣ ತಥದಧನ ಪಫಬಭಂಗಳೆಂಬಿರ್ಪತ್ತನಾಲ್ಕೆ ತಾಮಸಂಗಳೆನಿಪವೀ ವರ್ಗತ್ರಯಂ ಸ್ಥಿತಿವರ್ಗಗತವಾದುದೀ ಮೂರ್ಮೂರ್ವರ್ಗಾಕ್ಷರಂಗಳ ಸಂಜ್ಞೆಯಿಂದೆ ಮಂತ್ರಗಳನುದ್ಧರಿಪು ದಿನ್ನುಂ ಶುದ್ಧಪ್ರಸಾದ ಮೂಲಪ್ರಸಾದ ತತ್ವಪ್ರಸಾದ ಆದಿಪ್ರಸಾದ ಆತ್ಮಪ್ರಸಾದಂಗಳೆಂಬ ಪಂಚಪ್ರಸಾದ ಮಂತ್ರಗಳನೀ ಚಕ್ರಸ್ಥಾಕ್ಷರ ಸ್ಥಿತಿವರ್ಗದಿಂದುದ್ಧರಿಸಿ ಭಾವಿಪುದೆಂದೆಯಯ್ಯಾ, ಪರಮ ಶಿವಲಿಂಗೇಶ್ವರ ಸುಧಾಕರ ಶೇಖರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ, ಹಲವು ಪ್ರಾಣಿಯ ಕೊಂದು, ನಲಿನಲಿದಾಡುವ. ತನ್ನ ಮನೆಯಲೊಂದು ಶಿಶು ಸತ್ತಡೆ ಅದಕ್ಕೆ ಮರುಗುವಂತೆ ಅವಕೇಕೆ ಮರುಗ ? ಅದೆಂತೆಂದಡೆ 'ಸ್ವಾತ್ಮಾನಮಿತರಂ ಚೇತಿ ಭಿನ್ನತಾ ನೈವ ದೃಶ್ಯತಾಂ ಸರ್ವಂ ಚಿಜ್ಜ್ಯೋತಿರೇವೇತಿ ಯಃ ಪಶ್ಯತಿ ಸ ಪಶ್ಯತಿ' ಎಂದುದಾಗಿ, ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು ಜೀವಹಿಂಸೆ ಮಾಡುವ ಮಾದಿಗರನೇನೆಂಬೆನಯ್ಯಾ ?
--------------
ಅಕ್ಕಮಹಾದೇವಿ
ಇನ್ನಷ್ಟು ... -->