ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಧಾರಚಕ್ರದಲ್ಲಿ ನಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಬ್ರಹ್ಮನು ಉತ್ತರಖಂಡಣೆಯೆಂಬ ವೇದವನುಚ್ಚರಿಸುತ್ತಿಹನು. ಸ್ವಾದ್ಥಿಷ್ಠಾನಚಕ್ರದಲ್ಲಿ ಮಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ವಿಷ್ಣು ಪ್ರೌಢಲಕ್ಷಿತವೆಂಬ ವೇದವನುಚ್ಚರಿಸುತ್ತಿಹನು. ಮಣಿಪೂರಕಚಕ್ರದಲ್ಲಿ ಶಿಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ರುದ್ರನು ಋಗ್ವೇದವನುಚ್ಚರಿಸುತ್ತಿಹನು. ಅನಾಹತಚಕ್ರದಲ್ಲಿ ವಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಈಶ್ವರನು ಯಜುರ್ವೇದವನುಚ್ಚರಿಸುತ್ತಿಹನು. ವಿಶುದ್ಧಿಚಕ್ರದಲ್ಲಿ ಯಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಸದಾಶಿವ ಸಾಮವೇದವನುಚ್ಚರಿಸುತ್ತಿಹನು. ಆಜ್ಞಾಚಕ್ರದಲ್ಲಿ ಒಂಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಉಪಮಾತೀತನು ಅಥರ್ವಣವೇದವನುಚ್ಚರಿಸುತ್ತಿಹನು. ಬ್ರಹ್ಮರಂಧ್ರದಲ್ಲಿ ಅಕಾರ ಉಕಾರ ಮಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಪ್ರಕೃತಿ ವಿಕೃತಿಗಳು ಗಾಯತ್ರಿಯನುಚ್ಚರಿಸುತ್ತಿಹವು. ಇಂತಿವೆಲ್ಲವನರಿದು ಮರದು, ನಿಜಲಿಂಗ ನಿಜಮಂತ್ರಂಗಳಲ್ಲಿ ಪರವಶವಾಗಿರ್ದೆನು ಕಾಣಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಹರಿ ಬ್ರಹ್ಮ ಕಾಲ ಕಾಮ ದಕ್ಷಾದಿಗಳ ದೇವರೆಂದು ಗಟ್ಟಿಯತನದೊಳು ಬೊಗಳುವ ಮಿಟ್ಟೆಯಭಂಡರು ನೀವು ಕೇಳಿರೊ. ಅವರ ಹುಟ್ಟನರಿಯಿರಿ, ಹೊಂದನರಿಯಿರಿ. ಅವರ ಹುಟ್ಟು ಕೇಳಿರಣ್ಣಾ ! ಏನೇನೂ ಇಲ್ಲದಂದು, ಶೂನ್ಯ ನಿಃಶೂನ್ಯಕ್ಕೆ ನಿಲುಕದ ಘನವು ಕೋಟಿಚಂದ್ರಸೂರ್ಯರ ಬೆಳಗಾಗಿ ಬೆಳಗುತ್ತಿಪ್ಪಲ್ಲಿ , ಒಂಕಾರವೆಂಬ ನಿರಕ್ಷರ ಹುಟ್ಟಿತ್ತು . ಒಂಕಾರದಿಂದ ನಕಾರ, ಮಕಾರ, ಶಿಕಾರ, ವಕಾರ, ಯಕಾರವೆಂಬ ಪಂಚಾಕ್ಷರ ಹುಟ್ಟಿದವು. ಆ ಪಂಚಾಕ್ಷರಿಗೆ ಪರಾಶಕ್ತಿ ರೂಪಾದಳು. ಆ ಪಂಚಾಕ್ಷರಕ್ಕೂ ಪರಾಶಕ್ತಿಗೂ ಇಬ್ಬರಿಗೂ ಸದಾಶಿವನಾದ. ಆ ಸದಾಶಿವಂಗೆ ಜ್ಞಾನಶಕ್ತಿಯಾದಳು. ಆ ಸದಾಶಿವಂಗೆ ಜ್ಞಾನಶಕ್ತಿಯರಿಬ್ಬರಿಗೂ ಶಿವನಾದ. ಆ ಶಿವಂಗೆ ಇಚ್ಛಾಶಕ್ತಿಯಾದಳು. ಆ ಶಿವಂಗೂ ಇಚ್ಛಾಶಕ್ತಿಗೂ ಇಬ್ಬರಿಗೂ ರುದ್ರನಾದ. ಆ ರುದ್ರಂಗೆ ಕ್ರಿಯಾಶಕ್ತಿಯಾದಳು. ಆ ರುದ್ರಂಗೂ ಕ್ರಿಯಾಶಕ್ತಿಗೂ ಇಬ್ಬರಿಗೂ ವಿಷ್ಣುವಾದ. ಆ ವಿಷ್ಣು ಪಡೆದ ಸತಿ ಲಕ್ಷಿ ್ಮೀಯು. ಆ ವಿಷ್ಣುವಿಂಗೂ ಮಹಾಲಕ್ಷಿ ್ಮೀಗೂ ಇವರಿಬ್ಬರಿಗೂ ಬ್ರಹ್ಮನಾದ. ಆ ಬ್ರಹ್ಮಂಗೆ ಸರಸ್ವತಿಯ ಕೊಟ್ಟು, ಬರೆವ ಸೇವೆಯ ಕೊಟ್ಟ. ಬ್ರಹ್ಮಂಗೂ ಸರಸ್ವತಿಗೂ ಇಬ್ಬರಿಗೂ ಮನುಮುನಿದೇವರ್ಕಳಾದರು. ಆ ಮನುಮುನಿದೇವರ್ಕಳಿಗೆ ಸಕಲ ಸಚರಾಚರವಾಯಿತ್ತು . ಇಹಲೋಕಕ್ಕೆ ನರರು ಆಗಬೇಕೆಂದು ಬ್ರಹ್ಮನು ಹೋಗಿ, ಹರನಿಗೆ ಬಿನ್ನಹಂ ಮಾಡಲು, ಹರನು ಪರಮಜ್ಞಾನದಿಂದ ನೋಡಿ, ತನ್ನ ಶರೀರದಿಂದಲೆ ನಾಲ್ಕು ಜಾತಿಯ ಪುಟ್ಟಿಸಿ ಇಹಲೋಕಕ್ಕೆ ಕಳುಹಿಸಿದನು. ಆ ಶಿವನ ಶರೀರದಲ್ಲಿ ಪುಟ್ಟಿದವರು ಶಿವನನ್ನೇ ಅರ್ಚಿಸಿ, ಶಿವನನ್ನೇ ಪೂಜಿಸಿ, ಶಿವನನ್ನೇ ಭಾವಿಸಿ, ಶಿವನೊಳಗಾದರು. ಅದರಿಂದಾದ ಭವಬಾಧೆಗಳು ತಾವು ತಮ್ಮ ಹುಟ್ಟನರಿಯದೆ, ಹುಟ್ಟಿಸುವಾತ ಬ್ರಹ್ಮ , ರಕ್ಷಿಸುವಾತ ವಿಷ್ಣು , ಶಿಕ್ಷಿಸುವಾತ ರುದ್ರನೆಂದು ಹೇಳಿದರು. ಈ ಭ್ರಷ್ಟರ ಮಾತ ಕೇಳಿ ಕೆಟ್ಟಿತ್ತು ಜಗವೆಲ್ಲ . ಆಗ ಶಿವನು ಕೊಟ್ಟು ಕಳುಹಿದ ಮಾಯೆಗೆ ಮರವೆಂಬ ಪಾಶ. ಅವಳು ಕಟ್ಟಿ ಕೆಡಹಿದಳು ಮೂರುಜಗವೆಲ್ಲವನು. ಇವಳ ಕಟ್ಟಿಗೊಳಗಾದ ಭ್ರಷ್ಟರೆತ್ತಬಲ್ಲರೋ ನಿಮ್ಮ ಶರಣರ ಸುದ್ದಿಯ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?
--------------
ಹಡಪದ ಅಪ್ಪಣ್ಣ
-->