ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ಯತಿಯತ್ವವ ಪಡೆದೆನೆಂಬೋ ಮನುಜನೇ, ನೀ ಕೇಳು : ನಿನ್ನ 1ಯತಿಯತ್ವ1ದ ಬಗೆ ಎಂತೆಲಾ ? ಬರಿದೆ ದ್ರವ್ಯಕ್ಕೆ ಆಶೆಮಾಡಿ, ಪರರ ಕಾರ್ಪಣ್ಯದಿಂದ ಕಾಡಿ ಬೇಡಿ, ದ್ರವ್ಯವ ಗಳಿಸಿಕೊಂಡು, ಜನರ ಕಟ್ಟಿಕೊಂಡು ಬಡಿವಾರದಿಂದ ತಿರುಗಿದ ಬಳಿಕ, ನಿನಗೆ ಯತಿಯತ್ವವು ಎಲ್ಲೈತೆಲಾ ? ಅದು ಎಂತೆಂದರೆ, ಯತಿಯತ್ವವ ಪೇಳುವೆನು ಕೇಳೆಲಾ : ಯತಿ ನೀನಾದ ಬಳಿಕ ತನುವಿನ ಹಂಗು ಹರಿಯಬೇಕು ; ಮನವ ಘನಲಿಂಗಕ್ಕೆ ಕಟ್ಟಿಹಾಕಬೇಕು ; ಧನವ ಸ್ವಪ್ನದಲ್ಲಿ ಮುಟ್ಟಲಾಗದು ; ಅನ್ನದ ಆಸೆಯ ಬಿಡಬೇಕು ; ಚಿನ್ಮಯನಾಗಿ ನಡೆಯಬೇಕು ; ಚಿಂತೆಯ ಮರೆತು ವೈರಾಗ್ಯದಿಂದಿರಬೇಕು ; ಕಾಮದ ಹಂಗ ಕಳೆಯಬೇಕು ; ಕರ್ಮೇಂದ್ರಿಯಂಗಳ ಸುಡಬೇಕು ; ಲಿಂಗದಲ್ಲಿ ಕರುಣ ಇರಬೇಕು. ಸ್ಫಟಿಕದಂತೆ ನಿರ್ಮಳ ಕಾಯನಾಗಿ, ನಿಶ್ಚಿಂತನಾಗಿ, ಮೋಕ್ಷವ ಕಂಡಡೆ ಯತಿವರನೆಂದು ನಮೋ ಎಂಬುವೆನಯ್ಯಾ ! ಬರಿದೆ ಯತಿ ಎನಿಸಿಕೊಂಡು ಕೋಪಾಟೋಪದೊಳು ಬಿದ್ದು ಹೊರಳಾಡುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
-->