ಶಿವ ಶಿವಾ ಆವನಾನೊಬ್ಬನು ಶ್ರೀಮಹಾದೇವನ
ದಿವ್ಯಕಾಂತಿಯಿಂದೊಗೆದ ಶ್ರೀಮಹಾಭಸಿತವ ಬಿಟ್ಟು
ಹಣೆಯಲ್ಲಿ ಗೋಪಿ ಮಲಿನ ಸಾದು ಕಸ್ತೂರಿ ಚಂದನಗಳೆಂಬ
ಮಣ್ಣುಮಸಿಗಳಿಂದ ನೀಳ ಬೊಟ್ಟು ಕಾಗೆವರೆಬೊಟ್ಟು, ಹೂಬೊಟ್ಟು
ಅರ್ಧಚಂದ್ರರೇಖೆ, ಅಂಕುಶದ ರೇಖೆ ಮೊದಲಾದ ಕಾಕುವರೆಗಳ
ವಿಶ್ವಾಸದಿಂದ ಇಡುತಿಪ್ಪ ಪಾತಕರ ಮುಖವ ನೋಡಲಾಗದು.
ಸುಡು ! ಅದು ಅಶುದ್ಧ, ಅದು ಪಾಪದ ರಾಶಿ, ಅದ ನೋಡಿದಡೆ ಮಹಾದೋಷ
ಅದೆಂತೆಂದಡೆ, ಪಾರಾಶರಪುರಾಣದಲ್ಲಿ:
ಊಧ್ರ್ವಪುಂಡ್ರಂ ಚ ಶೂಲಂ ಚ ವರ್ತುಲಂ ಚಾರ್ಧಚಂದ್ರಕಂ
ಲಲಾಟೇ ಧಾರಯಿಷ್ಯಂತಿ ಮನುಷ್ಯಾಃ ಪಾಪಕರ್ಮಿಣಃ
ಮತ್ತಂ ಶಾಂಭವಪುರಾಣದಲ್ಲಿ:
ಅಶುದ್ಧಂಚ ತಥಾ ಪ್ರೋಕ್ತಂ ವರ್ತುಲಂ ಚೋಧ್ರ್ವಪುಂಡ್ರಕಂ
ಅಶುದ್ಧಂ ಚಾರ್ಧಚಂದ್ರಂ ಚ ಕೀರ್ತಿತಂ ತು ಕುಶಾದಿಭಿಃ
ಮತ್ತಂ ಸೂತಸಂಹಿತೆಯಲ್ಲಿ:
ಅಶ್ರೌತಂ ಚೋಧ್ರ್ವಪುಂಡ್ರಂ ತು ಲಲಾಟೇ ಶ್ರದ್ಧಯಾ ಸಹ
ಧಾರಯಿಷ್ಯಂತಿ ಮೋಹೇನ ಪಾಷಂಡೋಪಹತಾ ಜನಾಃ
ಮತ್ತಂ ಮಾನವಪುರಾಣದಲ್ಲಿ:
ಊಧ್ರ್ವಪುಂಡ್ರಂ ಚ ಶೂಲಂ ಚ ವರ್ತುಲಂ ಚಾರ್ಧಚಂದ್ರಕಂ
ತತ್ವನಿಷೆ*ೈರ್ನ ಧಾರ್ಯಂ ಚ ನ ಧಾರ್ಯಂ ವೈದಿಕೈರ್ಜನೈಃ
ಊಧ್ರ್ವಪುಂಡ್ರಂ ಮುಖಂ ದೃಷ್ಟ್ವಾ ವ್ರತಂ ಚಾಂದ್ರಾಯಣಂ ಚರೇತ್
ಮತ್ತಂ ಸ್ಕಂದಪುರಾಣದಲ್ಲಿ:
ಊಧ್ರ್ವಪುಂಡ್ರಂ ದ್ವಿಜಃ ಕುರ್ಯಾತ್ ಲೀಲಯ್ಯಾಪಿ ಕದಾಚನ
ತದಾಕಾರೇಣ ಶಸ್ತ್ರೇಣ ಬಾಧ್ಯತೇ ಯಮಕಿಂಕರೈ ಎಂದುದಾಗಿ,
ಶ್ರೀಮಹಾವಿಭೂತಿಯ ಬಿಟ್ಟು
ವೇದವಿರುದ್ಧವಾದ ಮಟ್ಟಿಮಸಿಗಳ ಹಣೆಯಲ್ಲಿ ಇಡುತಿಪ್ಪ
ಪಂಚಮಹಾಪಾತಕರ ಮುಸುಡ ನೋಡಲಾಗದು ಕಾಣಾ
ಕೂಡಲಚೆನ್ನಸಂಗಮದೇವಾ