ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಿಕ್ಷಕ್ಕೆ ಬಂದಾ ಚರಮೂರ್ತಿಗಳ ಕಂಡು ಕುಕ್ಷಿಯಲ್ಲಿ ಮರಗುವ ಯಕ್ಕಲನರಕಿಗಳಿಗೆತ್ತಣ ಉಪದೇಶವಯ್ಯಾ? ಸುತ್ತಿರ್ದ ಪ್ರಪಂಚಕ್ಕೆ ಸವೆದು ಕರ್ತುಗಳಿಗೆ ಅರೆಕಾಸು ಸವೆಯದೆ ನಾವು ನಿತ್ಯಭಕ್ತರೆಂದರೆ ಒತ್ತಿ ಹಾಕುವರು ಬಾಯಲ್ಲಿ ಹುಡಿಯಯ್ಯಾ ಯಮನವರು ಗುರುನಿರಂಜನ ಚನ್ನಬಸವಲಿಂಗಕ್ಕೆ ದೂರವಾದ ದುರ್ಮುಖಿಗಳೆಂದು.
--------------
ದೇಶಿಕೇಂದ್ರ ಸಂಗನಬಸವಯ್ಯ
ಹಿಂದಣ ಜನ್ಮದಲ್ಲಿ ಹಲು ಸುಕೃತಂಗಳಂ ಮಾಡಿಕೊಂಡ ದೆಸೆಯಿಂದ ನೀವು ಹುಟ್ಟಿದಿರಯ್ಯ. ನೀವು ಮುಂದಕ್ಕೆ ಶಿವಭಕ್ತಿ ದೊಡ್ಡಿತ್ತೆಂದು ನಂಬಲರಿಯದೆ ಭ್ರಮಿತರಾಗಿ ಘನತರಸುಖವಂ ನೀಗಿ ಭಕ್ತಿಪಾಶದೆಶೆಯೊಳು ಇರಲೊಲ್ಲದೆ ಹಿಂದಣ ಅರಿಕೆಯಂ ಮರೆದು ಮುಂದಣ ಅರಿಕೆಯಂ ತೊರೆದು ಕಂಡ ಕಂಡ ಹಂದಿಯೊಳಾಡಿ ನರಕವ ತಿಂಬಂತೆ ಬೆಂದ ಸಂಸಾರವೆಂಬ ಹೃದಯಕೂಪದೊಳು ಮುಳುಗಾಡುವ ಲೋಕದ ಮಂದಿಯಂತೆ ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದೆಂಬ ಭಿನ್ನಭಾವದೊಳು ಮನಸಂದು, ಹೆಂಡರಿಗಾಗಬೇಕು ಮಕ್ಕಳಿಗಾಗಬೇಕೆಂಬ ಭಂಡ ಮೂಕೊರೆಯ ಮೂಳಹೊಲೆಯರಿರಾ, ನೀವು ಕೇಳಿರೋ. ನೀವು ಶಿವಭಕ್ತರ ಬಸುರಲ್ಲಿ ಹುಟ್ಟಿ ಫಲವೇನು? ಮಾತಿಂಗೆ ಲಿಂಗವ ಕಟ್ಟಿದಿರಿ, ವರ್ತನೆಗೊಬ್ಬ ಗುರುವೆಂಬಿರಿ. ಆ ಗುರು ತೋರಿದ ಚರಲಿಂಗಕ್ಕೆ ಬೋನವಿಲ್ಲ, ಆಚಾರವಿಲ್ಲ. ಕೀಳು ದೈವದ ಬೆನ್ನೊಳು ಹರಿದಾಡುವ ನರಕಿಯ ಯಮನವರು ಕೊಂಡೊಯ್ದು ನಡುವಿಂಗೆ ಗಿರಿಕಿಯನಿಕ್ಕಿ ಮೆಟ್ಟಿ ಮೆಟ್ಟಿ ಬಿಗುವಾಗ ಹಲುಗಿರಿಕೊಂಡು ಹೋಗುವ ಮಾನವರು ಜಗದರಿಕೆಯಲ್ಲಿ, ನರಕದಲ್ಲಿ ಬೀಳುವದ ಕಂಡು ನಗುತಿರ್ದ ಎನ್ನೊಡೆಯನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಜ್ಞಾನವನಂತರಂಗಕಿತ್ತು, ಕ್ರೀಯವ ಬಹಿರಂಗಕಿತ್ತು, ಸರ್ವಾಚಾರಸಂಪತ್ತಿನೊಳಗಿರಿಸಿದ ಕ್ರಿಯಾಘನಗುರುವಿನ ತೆಗೆದುಹಾಕಿ ನಾವು ಲಿಂಗಜಂಗಮಸನ್ನಿಹಿತರೆಂದಡೆ ಆ ನಾಲಿಗೆ ಕೀಳದಿಹರೆ ಕಾಲನವರು ? ಆ ಮಹಾಗುರುವಿನ ಸದ್ಭಾವಲಿಂಗವನರ್ಚಿಸುವಲ್ಲಿ ಖಂಡಿಸದಿಹರೆಯಮನವರು? ಆ ಗುರುಜ್ಞಾನ ಭಸಿತವನು ಧರಿಸಿದಲ್ಲಿ ಚರ್ಮವ ಹೆರಜಿ ಬಿಸಾಟರೆ ಅಂತಕನವರು? ಆ ಗುರುಕಟಾಕ್ಷಮಣಿಯ ಧರಿಸಿದಲ್ಲಿ ಕಡಿಕಡಿದು ಕಡೆಗಿಡರೆ ಯಮನವರು ? ಆ ಆದಿಯ ಗುರುನಾಮಾಮೃತವ ಸೇವಿಸುವರ ಹೃದಯವನಿರಿದು ಕೆಡಹದಿಹರೆ ದಂಡಧರನವರು ? ಆ ಅವಿರಳ ಗುರುವಿನ ಪರಮಾನಂದ ಪಾದೋದಕವ ಕೊಂಬ ಮಾನವರ ಬಾಧಿಸರೆ ಕೀನಾಶನವರು ? ಆ ಮಹಾಜ್ಞಾನಿ ಗುರುವಿನ ಮಹದಾನಂದಪ್ರಸಾದವ ಸೇವಿಸುವ ಭಾವವನು ಶೋಕಾಗ್ನಿಯಿಂದೆ ನೋಯಿಸದಿಹರೆ ನಿರಯಪತಿಯವರು ? ಇದು ಕಾರಣ ಗುರುವ ಜರಿದು ನೆರೆದು ಮಾಡುವ ಮಾಟವೆಲ್ಲ ವೈತರಣಿಯಕೂಟ ಇದಕ್ಕೆ ನೀವೇ ಸಾಕ್ಷಿ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
-->