ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛಲಮದವೆಂಬುದು ತಲೆಗೇರಿ ಗುರುಹಿರಿಯರ ನೆಲೆಯನರಿಯದೆ ಮದಿಸಿಪ್ಪರಯ್ಯ. ರೂಪಮದ ತಲೆಗೇರಿ ಮುಂದುಗೊಂಡು ತಮ್ಮ ತನುವಿನ ರೂಪ ಚೆಲ್ವಿಕೆ ನೋಡಿ ಮರುಳಾಗಿ ಚಿದ್ರೂಪನ ನೆನವ ಮರೆದರಯ್ಯಾ. ಯವ್ವನಮದ ತಲೆಗೇರಿ ಮದಸೊಕ್ಕಿದಾನೆಯಂತೆ ಪ್ರಯಾಸಮತ್ತರಾಗಿ ಕಾಮನ ಬಲೆಯೊಳಗೆ ಸಿಲ್ಕಿ ಕಾಮಾರಿನೆನವ ಮರೆದರಯ್ಯಾ. ಧನಮದವೆಂಬುದು ತನುವಿನೊಳು ಇಂಬುಗೊಂಡು ಅರ್ಥಭಾಗ್ಯ ಕಾಡಿ ವ್ಯರ್ಥ ಸತ್ತಿತು ಲೋಕ. ವಿದ್ಯಾಮದವೆಂಬುದು ಬುದ್ಧಿಗೆಡಿಸಿ ನಾ ಬಲ್ಲವ ತಾ ಬಲ್ಲವನೆಂದು ತರ್ಕಿಸಿ ಪ್ರಳಯಕಿಳಿದರು. ರಾಜ್ಯಮದವೆದ್ದು ರಾಜ್ಯವನಾಡಿಸಿ ಬೇಡಿಸಿಕೊಂಡೆನೆಂದು ರಾಜರಾಜರು ಹತವಾದರು. ತಪಮದವೆದ್ದು ನಾ ತಪಸಿ ನಾ ಸಿದ್ಧ ನಾ ಯೋಗಿ ನನಗಾರು ಸರಿಯಿಲ್ಲವೆಂದು ಅಹಂಕಾರಕ್ಕೆ ಗುರಿಯಾಗಿ ಭವಕ್ಕೆ ಬಂದರು ಹಲಬರು. ಇಂತೀ ಅಷ್ಟಮದವೆಂಬ ಭ್ರಾಂತು[ವ] ತೊಲಗಿಸಿ ನಿಭ್ರಾಂತನಾಗಿರಬಲ್ಲರೆ ಶಿವಶರಣನೆಂಬೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಕುಲಮದ ಶೂನ್ಯನೆಂಬೆ ಹುಟ್ಟುಗೆಟ್ಟಿರ್ದನಾಗಿ, ಛಲಮದ ಶೂನ್ಯನೆಂಬೆ ದ್ವೈತಗೆಟ್ಟಿರ್ದನಾಗಿ, ಧನಮದ ಶೂನ್ಯನೆಂಬೆ ಕರಣಪ್ರಕೃತಿ ನಷ್ಟವಾಗಿರ್ದನಾಗಿ, ರೂಪಮದ ಶೂನ್ಯನೆಂಬೆ ದೇಹಭಾವವಳಿದಿರ್ದನಾಗಿ, ಯವ್ವನಮದ ಶೂನ್ಯನೆಂಬೆ ಕಾಮನ ಕಳೆಯಳಿದುಳಿದಿರ್ದನಾಗಿ, ವಿದ್ಯಾಮದ ಶೂನ್ಯನೆಂಬೆ ನಿಜಭಕ್ತಿ ಸುಜ್ಞಾನ ಪರಮವೈರಾಗ್ಯವೇ ಸ್ವಯಮಾಗಿರ್ದನಾಗಿ, ರಾಜಮದ ಶೂನ್ಯನೆಂಬೆ ಚಿದ್ಘನಲಿಂಗಕ್ಕೆ ಚಿತ್ತವನರ್ಪಿಸಿರ್ದನಾಗಿ, ತಪಮದ ಶೂನ್ಯನೆಂಬೆ ತ್ರಿಪುಟಿಗತೀತ ಗುರುನಿರಂಜನ ಚನ್ನಬಸವಲಿಂಗವಾಗಿರ್ದನಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
-->