ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡಿ ತಂದು ದಾಸೋಹವ ಮಾಡುವನ್ನಬರ, ಪಂಗುಳನ ಪಯಣದಂತೆ. ಯಾಚಕತ್ವ ಭಕ್ತಂಗುಂಟೆ ? ಭಕ್ತನಾಗಿ ಹುಟ್ಟಿ ಭಕ್ತರ ಬೇಡಿತಂದು ಮಾಡಿ ಮುಕ್ತಿಯನರಸಲುಂಟೆ ? ಅದು ಅಮರೇಶ್ವರಲಿಂಗವ ಮುಟ್ಟದೆ ಇತ್ತಲೆ ಉಳಿಯಿತ್ತು.
--------------
ಆಯ್ದಕ್ಕಿ ಮಾರಯ್ಯ
ಉಪೇಕ್ಷೆಯಿಂದ ಉರಿವ ಬೆಳಗು, ಪವನನ ಪ್ರಾಣಕ್ಕೆ ಒಳಗು. ಸ್ವಯಸಂಪರ್ಕದಿಂದ ಒದಗಿದ ಬೆಳಗು, ಅನಲನ ಆಹುತಿಗೆ ಹೊರಗಾಗಿಪ್ಪುದು. ಇಂತೀ ವಾಗದ್ವೈತದ ಮಾತಿನ ಮಾಲೆ, ಸ್ವಯಾದ್ವೈತವ ಮುಟ್ಟಬಲ್ಲುದೆ? ಸ್ಥಲಜ್ಞಾನ, ಯಾಚಕತ್ವ, ಸ್ಥಲಭರಿತನ ಮುಟ್ಟಬಲ್ಲುದೆ? ಇಂತೀ ಉಭಯದೊಳಗನರಿತು, ಇಷ್ಟಕ್ಕೆ ಕ್ರೀ, ಭಾವಕ್ಕೆ ಜ್ಞಾನ ಸಂಪೂರ್ಣವಾದಲ್ಲಿ, ನಿಃಕಳಂಕ ಮಲ್ಲಿಕಾರ್ಜುನ ತಾನು ತಾನೆ.
--------------
ಮೋಳಿಗೆ ಮಾರಯ್ಯ
ಕಲ್ಲ ತಾಗಿದ ಕಠಿಣಸರದಂತೆ, ವಲ್ಲಭನೊಲ್ಲದ ಸತಿಯಂತೆ, ಬಲ್ಲವರು ಹೇಳಿದ ಮಾತ, ಕಲ್ಲೆದೆಯವ ಕಾಣದಂತೆ, ಮಾತು ಮನಸ್ಸು ಸಿಕ್ಕಿ, ಭವವ್ಯಾಕುಲದಲ್ಲಿ ಅದೇತರ ಪೂಜೆ ? ಅದೇತರ ಅರ್ಪಿತ ? ಅದೇತರ ಯಾಚಕತ್ವ ? ಅವ ನೇತಿಗಳೆದಲ್ಲಿ , ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವನರಿದುದು.
--------------
ಶಿವಲೆಂಕ ಮಂಚಣ್ಣ
-->