ಉಪೇಕ್ಷೆಯಿಂದ ಉರಿವ ಬೆಳಗು, ಪವನನ ಪ್ರಾಣಕ್ಕೆ ಒಳಗು.
ಸ್ವಯಸಂಪರ್ಕದಿಂದ ಒದಗಿದ ಬೆಳಗು, ಅನಲನ ಆಹುತಿಗೆ ಹೊರಗಾಗಿಪ್ಪುದು.
ಇಂತೀ ವಾಗದ್ವೈತದ ಮಾತಿನ ಮಾಲೆ, ಸ್ವಯಾದ್ವೈತವ ಮುಟ್ಟಬಲ್ಲುದೆ?
ಸ್ಥಲಜ್ಞಾನ, ಯಾಚಕತ್ವ, ಸ್ಥಲಭರಿತನ ಮುಟ್ಟಬಲ್ಲುದೆ?
ಇಂತೀ ಉಭಯದೊಳಗನರಿತು,
ಇಷ್ಟಕ್ಕೆ ಕ್ರೀ, ಭಾವಕ್ಕೆ ಜ್ಞಾನ ಸಂಪೂರ್ಣವಾದಲ್ಲಿ,
ನಿಃಕಳಂಕ ಮಲ್ಲಿಕಾರ್ಜುನ ತಾನು ತಾನೆ.