ಭಕ್ತಂಗೆ ಹೆಣ್ಣುಬೇಡ, ಹೊನ್ನುಬೇಡ, ಮಣ್ಣುಬೇಡವೆಂದು ಹೇಳಿ,
ತಾ ಮುಟ್ಟುವನ್ನಬರ ಆ ಬೋಧೆಯ ಹುಸಿಯೆಂದ.
ತಾ ಮುಟ್ಟದೆ ತನ್ನ ಮುಟ್ಟಿಪ್ಪ ಭಕ್ತನ ತಟ್ಟದೆ,
ಕರ್ಮಕ್ಕೆ ಕರ್ಮವನಿತ್ತು ತಾ ವರ್ಮಿಗನಾಗಬಲ್ಲಡೆ,
ಹೊಳೆಯಲ್ಲಿ ಹಾಕಿದ ಸೋರೆಯಂತೆ, ಅನಿಲ ಕೊಂಡೊಯ್ದ ಎಲೆಯಂತೆ,
ಯಾತಕ್ಕೂ ಹೊರಗಾಗಿ ಜಗದಾಸೆಯಿಲ್ಲದಿಪ್ಪ ವೇಷಕ್ಕೆ ಒಳಗಲ್ಲ.
ಆತ ಜಗದೀಶನೆಂಬೆ, ನಿಃಕಳಂಕ ಮಲ್ಲಿಕಾರ್ಜುನಾ.