ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಗುರುಲಿಂಗದಲ್ಲಿ ಪೂಜೆಯ ಮಾಡಿ,ಜಂಗಮಲಿಂಗದಲ್ಲಿ ಉದಾಸೀನವ ಮಾಡಿದಡೆಗುರುಲಿಂಗದ ಪೂಜಕರಿಗೆ ಶಿವದೂತರ ದಂಡನೆಎಂಬುದ ಮಾಡಿದೆಯಯ್ಯಾ.ಲೋಕದ ಕರ್ಮಿಗಳಿಗೆ ಯಮದೂತರ ದಂಡನೆಎಂಬುದ ಮಾಡಿದೆಯಯ್ಯಾ.ಭಕ್ತಿಯನರಿಯರು, ಯುಕ್ತಿಯನರಿಯರುಕೂಡಲಚೆನ್ನಸಂಗಮದೇವಾ
ಅಕ್ಷರವ ಬಲ್ಲೆನೆಂ(ವೆಂ?)ದು ಅಹಂಕಾರವೆಡೆಗೊಂಡು, ಲೆಕ್ಕಗೊಳ್ಳರಯ್ಯಾ.ಗುರು ಹಿರಿಯರು ತೋರಿದ ಉಪದೇಶದಿಂದ;ವಾಗದ್ವೈತವನೆ ಕಲಿತು ವಾದಿಪರಲ್ಲದೆಆಗು_ಹೋಗೆಂಬುದನರಿಯರು.ಭಕ್ತಿಯನರಿಯರು ಯುಕ್ತಿಯನರಿಯರು, [ಮುಕ್ತಿಯನರಿಯರು]ಮತ್ತೂ ವಾದಕೆಳಸುವರು.ಹೋದರು ಗುಹೇಶ್ವರಾ ಸಲೆ ಕೊಂಡಮಾರಿಗೆ.