ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಲಿಂಗದಲ್ಲಿ ಪೂಜೆಯ ಮಾಡಿ, ಜಂಗಮಲಿಂಗದಲ್ಲಿ ಉದಾಸೀನವ ಮಾಡಿದಡೆ ಗುರುಲಿಂಗದ ಪೂಜಕರಿಗೆ ಶಿವದೂತರ ದಂಡನೆ ಎಂಬುದ ಮಾಡಿದೆಯಯ್ಯಾ. ಲೋಕದ ಕರ್ಮಿಗಳಿಗೆ ಯಮದೂತರ ದಂಡನೆ ಎಂಬುದ ಮಾಡಿದೆಯಯ್ಯಾ. ಭಕ್ತಿಯನರಿಯರು, ಯುಕ್ತಿಯನರಿಯರು ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಅಕ್ಷರವ ಬಲ್ಲೆನೆಂ(ವೆಂ?)ದು ಅಹಂಕಾರವೆಡೆಗೊಂಡು, ಲೆಕ್ಕಗೊಳ್ಳರಯ್ಯಾ. ಗುರು ಹಿರಿಯರು ತೋರಿದ ಉಪದೇಶದಿಂದ; ವಾಗದ್ವೈತವನೆ ಕಲಿತು ವಾದಿಪರಲ್ಲದೆ ಆಗು_ಹೋಗೆಂಬುದನರಿಯರು. ಭಕ್ತಿಯನರಿಯರು ಯುಕ್ತಿಯನರಿಯರು, [ಮುಕ್ತಿಯನರಿಯರು] ಮತ್ತೂ ವಾದಕೆಳಸುವರು. ಹೋದರು ಗುಹೇಶ್ವರಾ ಸಲೆ ಕೊಂಡಮಾರಿಗೆ.
--------------
ಅಲ್ಲಮಪ್ರಭುದೇವರು
-->