ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುಟ್ಟಿದ ಮಕ್ಕಳು ಪ್ರಬುದ್ಧರಾದಲ್ಲದೆ ಲಿಂಗಸ್ವಾಯತವ ಮಾಡಬಾರದೆಂಬ ಯುಕ್ತಿಶೂನ್ಯರ ನೋಡಿರೇ. ಅಳುಪಿ ತಾಯಿ ತಂದೆ ಅವರೊಡನುಂಡರೆ ಅವರನಚ್ಚ ವ್ರತಗೇಡಿಗಳೆಂಬೆ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ದೇವರ ನೆನೆದು ಮುಕ್ತರಾದೆವೆಂಬ ಯುಕ್ತಿಶೂನ್ಯರ ಮಾತ ಕೇಳಲಾಗದು. ಅದೇನು ಕಾರಣವೆಂದಡೆ: ದೇವರ ನೆನೆವಂಗೆ ದೇವರುಂಟೆ? ದೂರ ದೂರದಲ್ಲಿದ್ದವರ ನೆನೆವರಲ್ಲದೆ ಸಮೀಪದಲ್ಲಿದ್ದವರ ನೆನೆವವರಿಲ್ಲ. ಇದನರಿದು ನೀನೆನ್ನೊಳಗಡಗಿ ನಾ ನಿನ್ನ ನೆನೆಯಲಿಲ್ಲ; ನೀನೆನಗೆ ಮುಕ್ತಿಯನೀಯಲಿಲ್ಲ. ನೀನಾನೆಂದೆನಲಿಲ್ಲ ಮಹಾಲಿಂಗ ಗಜೇಶ್ವರಾ.
--------------
ಗಜೇಶ ಮಸಣಯ್ಯ
-->