ದೇವರ ನೆನೆದು ಮುಕ್ತರಾದೆವೆಂಬ
ಯುಕ್ತಿಶೂನ್ಯರ ಮಾತ ಕೇಳಲಾಗದು.
ಅದೇನು ಕಾರಣವೆಂದಡೆ:
ದೇವರ ನೆನೆವಂಗೆ ದೇವರುಂಟೆ?
ದೂರ ದೂರದಲ್ಲಿದ್ದವರ ನೆನೆವರಲ್ಲದೆ
ಸಮೀಪದಲ್ಲಿದ್ದವರ ನೆನೆವವರಿಲ್ಲ.
ಇದನರಿದು ನೀನೆನ್ನೊಳಗಡಗಿ
ನಾ ನಿನ್ನ ನೆನೆಯಲಿಲ್ಲ;
ನೀನೆನಗೆ ಮುಕ್ತಿಯನೀಯಲಿಲ್ಲ.
ನೀನಾನೆಂದೆನಲಿಲ್ಲ ಮಹಾಲಿಂಗ ಗಜೇಶ್ವರಾ.