ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವಿವಿರಹಿತನಾಗಿ ಭಕ್ತನಾದ ಬಳಿಕ ತನ್ನ ಮನೆಯಲ್ಲಿ ಮಾಡಿದ ಪಾಕವ ಭವಿಗಿಕ್ಕಬಹುದೆ ? ಇಂತಪ್ಪ ಯುಕ್ತಿಶೂನ್ಯರಿಗೆ ಪ್ರಸಾದವಿಲ್ಲ; ಮುಕ್ತಿ ಎಂತಪ್ಪುದೊ ? ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪದು ! ಕೂಡಲಚೆನ್ನಸಂಗಮದೇವಯ್ಯ ನಿಮ್ಮಾ ಪಥವನರಿಯದ ಅನಾಚಾರಿಗಿನ್ನೆಂತಯ್ಯ ?
--------------
ಚನ್ನಬಸವಣ್ಣ
ಭವಿರಹಿತ ಭಕ್ತನಾದ ಬಳಿಕ, ಭಕ್ತಿಭಾಜನದಲ್ಲಿ ಮಾಡಿ ಭವಿಗಿಕ್ಕಲಾಗದಯ್ಯಾ. ಯುಕ್ತಿಶೂನ್ಯರಿಗೆ ಮುಂದೆ ಪ್ರಸಾದ ದೂರ, ಮುಕ್ತಿುಲ್ಲ-ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪದು ಪೃಥ್ವಿಯೊಳಗೆ. ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆ ಅನಾಚಾರಕ್ಕೆಲ್ಲಿಯದೊ 458
--------------
ಬಸವಣ್ಣ
-->