ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕಾದಶ ರುದ್ರರು ಹೊರಗಾದ, ಈರೇಳು ಲೋಕ ಹದಿನಾಲ್ಕು ಭುವನ ಯುಗಜುಗಂಗಳಲ್ಲಿ ಒಳಗಾಗಿ ತಿರುಗುವುದೊಂದು ಶಕ್ತಿಯ ಭೇದ. ದಶಾವತಾರವಾಗಿ ಕಾಲಕರ್ಮಂಗಳಲ್ಲಿ ಓಲಾಡುತ್ತಿಪ್ಪುದು ಒಂದು ಶಕ್ತಿಯ ಭೇದ. ಉಂಟು ಇಲ್ಲಾ ಎಂದು ನಿಶ್ಚಿಂತಕ್ಕೆ ಹೋರುವುದೊಂದು ಶಕ್ತಿಯ ಭೇದ. ಇಂತೀ ತ್ರಿವಿಧಶಕ್ತಿಯ ಆದಿ ಆಧಾರವನರಿದು ಕರ್ಮವ ಕರ್ಮದಿಂದ ಕಂಡು, ಧರ್ಮವ ಧರ್ಮದಿಂದ ಅರಿದು, ಜ್ಞಾನವ ಜ್ಞಾನದಿಂದ ವಿಚಾರಿಸಿ, ಇಂತೀ ತ್ರಿಗುಣದಲ್ಲಿ ತ್ರಿಗುಣಾತ್ಮಕನಾಗಿ, ದರ್ಪಣದಿಂದ ಒಪ್ಪಂಗಳನರಿವಂತೆ ಅರಿವು ಕುರುಹಿನಲ್ಲಿ ನಿಂದು, ಕುರುಹು ಅರಿವನವಗವಿಸಿದಲ್ಲಿ ತ್ತøಮೂರ್ತಿ ನಷ್ಟವೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಪೃಥ್ವಿ ಅಪ್ಪು ತೇಜ ವಾಯು ಆಕಾಶ ಪಂಚಭೌತಿಕಕ್ಕೆ ಮುನ್ನವೆ ವಿಷ್ಣುಮಯ ಹುಟ್ಟಿದ ಠಾವುದು ಕಾಲಾಂಧರ ಕಲ್ಪಿತಕ್ಕೆ ಮುನ್ನವೆ ಬ್ರಹ್ಮನ ಉತ್ಪತ್ಯದ ನೆಲೆ ಯಾವುದು? ರೂಪು ನಿರೂಪಿಗೆ ಮುನ್ನವೆ ರುದ್ರನ ಲೀಲಾಭಾವವಾದಠಾವಾವುದು? ಇಂತಿವೆಲ್ಲವು ಅನಾದಿ ವಸ್ತು ಆದಿಶಕ್ತಿಯ ಈ ಈಚೆಯಿಂದಾದ ದೇವವರ್ಗ ಸಂತತಿ. ಯುಗಜುಗಂಗಳಲ್ಲಿ ಪರಿಭ್ರಮಣಕ್ಕೆ ತಿರುಗುವುದಕ್ಕೆ ಒಡಲಾಯಿತ್ತು. ಇಂತೀ ಭೇದಂಗಳನರಿತು ಘನಕಿರಿದಿಂಗೆ ತೆರಪುಂಟೆ ಅಯ್ಯಾ? ಸೂರಾಳ ವಿರಾಳ ನಿರಾಳಕ್ಕೆ ಮುನ್ನವೆ ಅಭೇದ್ಯ ಅಗೋಚರಮಯ ಲೋಕಕ್ಕೆ ಸದಾಶಿವಮೂರ್ತಿಲಿಂಗವೊಂದೆಯಲ್ಲದೆ ಹಲವು ಇಲ್ಲಾ ಎಂದೆ.
--------------
ಅರಿವಿನ ಮಾರಿತಂದೆ
-->