ದೃಷ್ಟವಪ್ಪ ಗುರುಕರುಣದಲ್ಲಿ ಇಷ್ಟಂಗವ
ಸಂಬಂಧಿಸಿಕೊಟ್ಟ ಬಳಿಕ ಮರಳಿ ಯೋಗವುಂಟೆ?
ಸರ್ವಯೋಗಕ್ಕೆ ಶಿವಯೋಗ ಮಹಾಯೋಗವೆಂದರಿದ ಬಳಿಕ,
ಮತ್ತೆ ಕಿರಿದು ಯೋಗವೆಂದು ಪಾದೋದಕ ಪ್ರಸಾದಕ್ಕೆ ಹೊರಗಾಗಿ
ಗುರುವಾಜ್ಞೆಯ ಮೀರಿದ ಗುರುದ್ರೋಹಿಗಳ ಎನ್ನತ್ತ ತೋರದಿರಯ್ಯ,
ನಿಮ್ಮ ಧರ್ಮ.
ದೀಕ್ಷಾತ್ರಯದಲ್ಲಿ ಸಂಪನ್ನರಾಗಿ, ಪ್ರಸಾದದ್ಲ ಲೋಲುಪ್ತರಾಗಿ,
ಜಂಗಮವೆ ಂಗವೆಂಬವರ ಎನಗೊಮ್ಮೆ ತೋರಯ್ಯ,
ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ.