ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯೆ ಮಹಾಸಂಚಲವೆಂಬ ಸುಳಿಗಾಳಿಯೊಳು ಸಿಕ್ಕಿದ ತರಗೆಲೆಯಂತೆ, ತಳಹಳಗೊಳ್ಳುತ್ತಿದಿತೀ ಜಗವೆಲ್ಲವು ಎನಗಿನ್ನೆಂತೊ, ಎನಗಿನ್ನೆಂತಯ್ಯಾ. ಬಲ್ಲೆನೆಂಬವರ ಬಾಯ ಟೊಣೆಯಿತ್ತು ಮಾಯೆ. ಆಗಮಿಕರ ಮೂಗ ಕೊಯ್ಯಿತ್ತು ಮಾಯೆ. ಅನುಭಾವಿಗಳೆಲ್ಲರೂ ಮನವಿಕಾರಕ್ಕೆ ಒಳಗಾದರು. ಅರಿದೆನೆಂಬವರೆಲ್ಲರೂ ಮರಹಿಂಗೆ ಬೀಜವಾದರು. ಬ್ರಹ್ಮಿಗಳೆಲ್ಲರೂ ಹಮ್ಮಿಂದ ಹಗರಣದ ಮರುಳಂಗಳಾದರು ವಿರಕ್ತರೆಲ್ಲರೂ ಯುಕ್ತಿಗೆಟ್ಟು ಭವಮಾಲೆಗೊಳಗಾದರು. ನಿರ್ವಾಣಿಗಳೆಲ್ಲರೂ ಸೆರೆಸಂಕಲೆಗೊಳಗಾದರು. ಯೋಗಿಗಳೆಲ್ಲರೂ ವಿಕಳವೆಂಬ ರೋಗಕ್ಕೆ ಒಳಗಾದರು. ತಪಸಿಗಳೆಲ್ಲರೂ ಕಪಟ ಕಳವಳಕ್ಕೊಳಗಾದರು. ಧ್ಯಾನ ಮೌನ ವ್ರತ ನಿತ್ಯ ನೇಮ ಕರ್ಮ ಕ್ರಿಯೆಗಳು ವಸ್ತುವ ಮರೆದು, ಮಾಯಾಧೂಳಿನೊಳಗೆ ಸಿಕ್ಕಿ ವಿಕಳತೆಗೊಂಡು, ನೆನೆವ ಮನ, ವಾಸಿಸುವ ಘ್ರಾಣ, ನೋಡುವ ನೇತ್ರ, ನುಡಿವ ನಾಲಗೆ, ನಡೆವ ಪಾದದ್ವಯಗಳೆಲ್ಲ ಭ್ರಮೆಗೊಳಗಾಯಿತ್ತಯ್ಯ. ಶಿವಶಿವಾ ಮಹಾದೇವಾ, ಇದೆಲ್ಲಿಯ ಮಾರಿ ಬಂದಿತ್ತಯ್ಯ. ಈ ಜಗವನೆತ್ತಿ ಕೊಂದು ಕೂಗುವ ಮಾರಿಯ ಗೆಲುವವರನಾರೊಬ್ಬರನೂ ಕಾಣೆ. ಎನಗಿನ್ನೆಂತಯ್ಯ, ಎನಗಿನ್ನೆಂತಯ್ಯಾ ! ಭಕ್ತಿಜ್ಞಾನವೈರಾಗ್ಯವನಿತ್ತು ಸಲಹಯ್ಯಾ. ಎನ್ನ ಕರಣಂಗಳಿಗೆ ಸಮಸ್ತ ಪ್ರಸಾದವನಿತ್ತು ಸಲಹಯ್ಯಾ, ನಿಃಕಳಂಕ ಚೆನ್ನಮಲ್ಲಿಕಾರ್ಜುನಪ್ರಭುವೆ.
--------------
ನಿಃಕಳಂಕ ಚೆನ್ನಮಲ್ಲಿಕಾರ್ಜುನ ಪ್ರಭುವೆ
ನೋಡುವರೆಲ್ಲರು ಆಡಬಲ್ಲರೆ? ಮಾತನಾಡುವರೆಲ್ಲರು ಲಿಂಗಾಂಗಯೋಗ ಬಲ್ಲರೆ? ಸಾಧನೆಯ ಮಾಡುವ ಬಾಲರೆಲ್ಲರೂ ಕಳನಹೊಕ್ಕು ಕಾದಬಲ್ಲರೆ? ಈ ಮಾತಿನ ಮಾಲೆಯ ಸಂಸಾರದ ತೂತ ಯೋಗಿಗಳೆಲ್ಲರೂ ಲಿಂಗಾಂಗ ನಿಹಿತ ಯೋಗವ ಬಲ್ಲರೆ? ಶಂಭುವಿನಿಂದಿತ್ತ ಸ್ವಯಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 54 ||
--------------
ದಾಸೋಹದ ಸಂಗಣ್ಣ
ಜೀವಾತ್ಮನಳಿದು ಪರಮಾತ್ಮನಾಗಬೇಕೆಂಬಲ್ಲಿ ಆ ಪರಮಾತ್ಮನ ಪರವಶದಲ್ಲಿ ಬೆರೆಸಬೇಕೆಂಬುದು ಅದಾವಾತ್ಮ ? ಸ್ಥೂಲ ಸೂಕ್ಷ್ಮ ಕಾರಣ ಇಂತೀ ತನುತ್ರಯಂಗಳಲ್ಲಿ ಕೀಳ ಬಿಟ್ಟು ಮೇಲ ಬೆರಸಬೇಕೆಂಬುದು ಅದಾವಾತ್ಮ ? ಹಿಂದೆ ಮಾಡಿದ ಕರ್ಮವ ಇಂದರಿದು ಮುಂದಣ ಮುಕ್ತಿ ಎಂಬುದು ಅದಾವಾತ್ಮ ? ತಿತ್ತಿಯಲ್ಲಿ ಹೊಕ್ಕ ವಾಯು ಒತ್ತಿದಡೆ ಹೋಗಿ ಎತ್ತಿದಡೆ ತುಂಬಿ ಮತ್ತೆ ಇರಿಸಿದಡೆ ಸತ್ತಹಾಗೆಯಿಪ್ಪುದು ಅದಾವಾತ್ಮ ? ಮೃತ ಘಟ, ಚೇತನ ಘಟಂಗಳಲ್ಲಿ ಹೊರಳಿ ಮರಳುವುದು ಅದಾವಾತ್ಮ ? ಇಂತೀ ಗುಣದ ವಾಯುಧಾರಣದಿಂದ ಅಷ್ಟಾಂಗಯೋಗ ಕರ್ಮಂಗಳ ಮಾಡುವ ಯೋಗಿಗಳೆಲ್ಲರೂ ಮುಕ್ತರಪ್ಪರೆ ? ಭೂನಾಗ ಭೂಮಿಯೊಳಗಿದ್ದು ಉಸುರಿಂಗೆ ಉಬ್ಬಸವಿಲ್ಲದಂತೆ ಜಲಚರ ಜಲದಲ್ಲಿದ್ದು ಆ ಜಲವ ನಾಸಿಕ ಬಾಯಿಗೆ ಹೊಗಲೀಸದಂತೆ ನೇತ್ರ ಶ್ರೋತ್ರಂಗಳಲ್ಲಿ ಜಲವೆ ಮನೆಯಾಗಿ ಇಪ್ಪ ತೆರ. ಆವಾವ ಜಾತಿಗೂ ಆ ವಿಷಯಗೋತ್ರ ಲಕ್ಷಣಭೇದ. ಸಾಧಕ ಸಾಧನೆಗಳಿಂದ ಅಸಾಧ್ಯವ ಸಾಧಿಸಬಾರದು. ಅಸಾಧ್ಯ ವೇದ್ಯವಾದವ, ಕರ್ಮಕಾಂಡಿಯಲ್ಲ ತ್ರಿವಿಧಮಲಕ್ಕೆ ಸಲ್ಲ, ತಥ್ಯಮಿಥ್ಯವಿಲ್ಲ. ಹೆಚ್ಚು ಕುಂದೆಂಬ ಶರೀರಕ್ಕೆ ಚಿತ್ತದ ಭಾರದವನಲ್ಲ. ಸದ್ಭಕ್ತರ ಸದಮಲಯುಕ್ತರ ಸರ್ವವಿರಕ್ತರ ಷಟ್‍ಸ್ಥಲಸಂಪನ್ನರ ಸರ್ವಾಂಗಲಿಂಗಿಗಳ ಅಂಗದಲ್ಲಿ ನಿಜ ಹಿಂಗದಿಪ್ಪ ಆತ ನಿರಂಗ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.
--------------
ಪ್ರಸಾದಿ ಭೋಗಣ್ಣ
-->