ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಸುಗಾಯವಡೆದವನಂತೆ ನೋವುಣ್ಣದೆ, ಸತ್ಕಿ ್ರೀವಂತನಂತೆ ಸಂದೇಹವಿಲ್ಲದೆ, ಖಳನಿಚ್ಚಟನಂತೆ ಆತ್ಮಕ್ಕೆ ಸಂದು ಸಂಶಯವಿಲ್ಲದೆ, ನೆರೆ ಅರಿದವನಂತೆ ಮರವೆಯ ಕುರುಹಿಗೆ ಬಾರೆದ, ಲಿಂಗದಲ್ಲಿ ಕರಿಗೊಂಡವನಂತೆ ಕೊಟ್ಟಿಹೆ ಕೊಂಡೆಹೆನೆಂಬ ಸೂತಕವಿಲ್ಲದೆ, ಬೊಮ್ಮವನರಿದವನಂತೆ ಅವರಿವರಲ್ಲಿ ಸುಮ್ಮಾನದ ಸುಖವ ನುಡಿಯದೆ, ಘಟಕರ್ಮ ಯೋಗಿಯಂತೆ ಆ ದೇಹ ಇಂದ್ರಿಯಂಗಳಿಲ್ಲದೆ, ಲಿಂಗಸಂಗಿಯಂತೆ ಬಾವಸರ್ವರ ಸಂಗ ಮಾಡದೆ ಇಂತೀ ಸರ್ವಗುಣಸಂಪನ್ನ ನವಬ್ರಹ್ಮಿ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 52 ||
--------------
ದಾಸೋಹದ ಸಂಗಣ್ಣ
ನೆಳಲ ನುಡಿಸಿಹೆನೆಂದು ಬಳಲುವನಂತೆ, ಆಕಾಶವನಳೆತಕ್ಕೆ ತಂದಿಹೆನೆಂಬ ಪಂಡಿತನಂತೆ, ಆತ್ಮಸ್ವರೂಪವ ವರ್ಣದಿಂ ಕಂಡಿಹೆನೆಂಬ ಯೋಗಿಯಂತೆ, ವರ್ಣಾತೀತ ವೇದಾತೀತವೆಂಬ ಮಾತು ಹುಸಿಯಪ್ಪಡೆ ನಿಃಕಳಂಕ ಶಾಂತಮಲ್ಲಿಕಾರ್ಜುನನೆಂಬ ಲಿಂಗದಲ್ಲಿಯೇ ಸೌರಾಷ್ಟ್ರ ಸೋಮೇಶ್ವರನೆಂಬ ಲಿಂಗದಲ್ಲಿಯೇ ಕಾಣಿರೇ.
--------------
ಆದಯ್ಯ
-->