ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಗರದ ಮಧ್ಯದ ಸಾದ್ಥಿಸುವ ಬಹಿರಂಗ ಆಗಮಂಗಳಿಗದು ಹೊರಗು ತಾನು. ಯೋಗಕ್ಕೆ ಮೂಲವದು, ಯೋಗಕ್ಕೆ ಸಿದ್ಧವದು, ಯೋಗಕ್ಕೆ ಅತ್ಯಂತ ಪರಮಸೀಮೆ. ಸಾದಾಖ್ಯ ತತ್ವದ ಸಂದು ಸವದರಿಗಿಲ್ಲ, ಅದ್ಯಕ್ಷರದ್ವಯದ ಪರಿಯಿಂತುಟು. ಮೂದೇವರೊಡೆಯ ಕಪಿಲಸಿದ್ಧಮಲ್ಲಿಕಾರ್ಜುನನ ಭೇದಿಸುವ ಯೋಗಿಯನು ಕಂಡು ನಗುವೆ.
--------------
ಸಿದ್ಧರಾಮೇಶ್ವರ
ಅನಂತ ಜನ್ಮಗಳ ಪಾಪಂಗಳು ಸವೆದು ಹೋಗಿ ಶ್ರೀಗುರುವಿನ ಕರುಣಾಕಟಾಕ್ಷದಿಂದ ಪ್ರಾಣಲಿಂಗೋಪದೇಶವ ಪಡೆದು ಸದ್ಭಕ್ತರಾಗಿ ಶಿವಲಿಂಗ ದರ್ಶನ ಸ್ಪರ್ಶನವ ಮಾಡಿ ಆ ಲಿಂಗವನಂಗದಲ್ಲಿ ಧರಿಸಿಕೊಂಡು ಅಂಗವೇ ಲಿಂಗ ಲಿಂಗವೇ ಅಂಗ ಪ್ರಾಣವೇ ಲಿಂಗ ಲಿಂಗವೇ ಪ್ರಾಣವಾಗಿ ಅಂತರಂಗ ಬಹಿರಂಗ ಸರ್ವಾಂಗವೆಲ್ಲವೂ ಲಿಂಗವಾದ ಬಳಿಕ ಇಂತೀ ಶ್ರೀಗುರು ಕೊಟ್ಟ ಲಿಂಗವ ಬಿಟ್ಟು ಬೋರೆ ಮತ್ತೆ ಆತ್ಮತತ್ತ್ವವ ವಿಚಾರಿಸಿ ನೋಡಬೇಕೆಂದು ಪರಮಾತ್ಮನಲ್ಲಿ ಯೋಗವ ಮಾಡಿ ಯೋಗಿಗಳಾಗಿ ಮುಕ್ತರಾದೆವೆಂಬಿರಿ. ಶಿವಶಿವಾ, ಆತ್ಮನನು ಪರಮಾತ್ಮನನು ಶ್ರೀ ಗುರುಸ್ವಾಮಿ ಒಂದು ಮಾಡಿ ಇದೇ ನಿನ್ನ ನಿಜತತ್ತ್ವವೆಂದು ಅರುಹ ಹೇಳಿ ತೋರಿಸಿಕೊಟ್ಟ ಬಳಿಕ ಇಂತಹ ಗುರುಸ್ವಾಮಿಯ ಆಜ್ಞೆಯ ಮೀರಿ ಲಿಂಗವನರಿಯದೆ ಲಿಂಗಬಾಹಿರರಾದ ದ್ವಿಜರನು ಯೋಗಿಯನು ಸನ್ಯಾಸಿಯನು ಗುರುವೆಂದು ಭಾವಿಸಬಹುದೆ ? ಶಿವ ಶಿವಾ, ಅದು ಗುರುದ್ರೋಹ. ಪರಶಿವಮೂರ್ತಿಯಾದ ಗುರುಸ್ವಾಮಿಯು ಷಡ್ದರ್ಶನಗಳಿಗೂ ಸಮಸ್ತಮತಂಗಳಿಗೂ ಸಮಸ್ತಾಗಮಂಗಳಿಗೆಯೂ ಶಿವನೊಬ್ಬನೇ ಕರ್ತನೆಂದು, ಶಿವದರ್ಶನವೇ ವಿಶೇಷವೆಂದು, ಅಧಿಕವೆಂದು ಹೇಳಿ ತೋರಿ ಕೊಟ್ಟ ಬಳಿಕ ಶೈವವೆಂದು ಶಾಕ್ತೇಯವೆಂದು ವೈಷ್ಣವವೆಂದು ಗಾಣಪತ್ಯವೆಂದು ¸õ್ಞರವೆಂದು ಕಾಪಾಲಿಕವೆಂದು ಇಂತೀ ಷಡ್ದರ್ಶನಂಗಳಿಗೆಯೂ ಶಿವನೊಬ್ಬನೇ ಕರ್ತ, ಇಂತೀ ಷಡ್ದರ್ಶನಕ್ಕೆ ಶಿವದರ್ಶನವೇ ಅಧಿಕವೆಂದು, ಇಂತೀ ಶಿವದರ್ಶನ ಮಾರ್ಗವಿಲ್ಲದೆ ಮುಕ್ತಿಯಿಲ್ಲವೆಂದು, ಆ ಪರಶಿವನೆಂಬ ಗುರುಮೂರ್ತಿ ಅರುಹಿ ಕಾಣಿಸಿ ಹೇಳಿ ತೋರಿ ಕೊಟ್ಟ ಬಳಿಕ ಅದೆಂತೆಂದಡೆ ಶಿವಧರ್ಮೇ_ ದರ್ಶನ ಷಡ್ವಿಧಂ ಪ್ರೋಕ್ತಂ ಶೈವಂ ಶಾಕ್ತಂ ವೈಷ್ಣವಂ ಗಣಾಪತ್ಯಂ ಚ ¸õ್ಞರಂ ಚ ಕಾಪಾಲಿಕಮಿತಿ ಸ್ಮೃತಮ್ ಮತ್ತಂ ಷಡ್ದರ್ಶನಾದಿ ದೇವೋ ಹಿ ಮಹಾದೇವೋ ನ ಸಂಶಯಃ ಮಂತ್ರಪೂಜಾದಿ ಭಿನ್ನಾನಾಂ ಮೂಲಂ ಪರಶಿವಸ್ತಥಾ ಎಂಬುದಾಗಿ, ಇನ್ನು ವೈಷ್ಣವವೆಂದು ಆತ್ಮಯೋಗವೆಂದು ಶಾಕ್ತಿಕವೆಂದು ವೈದಿಕವೆಂದು ಇಂತೀ ಭ್ರಾಂತಿನ ದರ್ಶನಮತಂಗಳನು ಕೇಳಿ, ಅಲ್ಲಿಯ ಧರ್ಮಾಧರ್ಮಂಗಳನು ಕೇಳಿ, ಅಲ್ಲಿ ಉಪದೇಶವ ಮಾಡಿಸಿಕೊಳ್ಳಬಹುದೇ ? ಶಿವಶಿವಾ, ಅದು ಗುರುದ್ರೋಹ, ಆ ಶ್ರೀಗುರುವಿನಾಜ್ಞೆಯ ಮೀರದಿರಿ. ಆ ಪರಶಿವಮೂರ್ತಿತತ್ತ್ವವೇ ಗುರುಸ್ವಾಮಿಯಾಗಿ ಚೆನ್ನಾಗಿ ಅರುಹಿ ತೋರಿ ಹೇಳಿ ಕೊಟ್ಟನಲ್ಲದೆ ಆ ಗುರುಸ್ವಾಮಿ ಏನು ತಪ್ಪಿ ಹೇಳಿದುದಿಲ್ಲ. ಶ್ರುತಿ ``ಏಕೋ ದೇವೋ ನ ದ್ವಿತೀಯಾಯ ತಸ್ಥೇ' ಎಂದುದಾಗಿ ಶಿವನೊಬ್ಬನೇ ದೈವವೆಂದು ತೋರಿಕೊಟ್ಟ ಶ್ರೀಗುರು. ಶ್ರುತಿ ``ಏಕೋ ಧ್ಯೇಯಃ' ಎಂದು ಶಿವನೊಬ್ಬನನ್ನೇ ಧ್ಯಾನಿಸಿ ಪೂಜಿಸೆಂದು ಹೇಳಿ ತೋರಿಕೊಟ್ಟನು ಶ್ರೀಗುರು. ಶ್ರುತಿ ``ನಿರ್ಮಾಲ್ಯಮೇವ ಭಕ್ಷಯಂತಿ' ಎಂದುದಾಗಿ ಶಿವಪ್ರಸಾದವನೆ ಗ್ರಹಿಸಿಯೆಂದು ಪ್ರಸಾದವ ಕರುಣಿಸಿದ ಶ್ರೀಗುರು ಇಂತಹ ಶ್ರೀಗುರು ಮರುಳನು, ನೀನು ಬುದ್ಧಿವಂತನೇ ? ಕೇಳಾ, ನಿಮ್ಮ ಗುರುವ ಮರುಳ ಮಾಡಿದಿರಿ, ಅದೆಂತೆಂದಡೆ: ನಿಮ್ಮಿಚ್ಛೆಯಲ್ಲಿಯೇ ಬಂದುದಾಗಿ, ಅದಲ್ಲದೆ ಮತ್ತೆ ಕೇಳು: ಪೂರ್ವದ ಪುರುಷರು ಮರುಳರು, ನೀನೊಬ್ಬನೇ ಬುದ್ಧಿವಂತ ? ಕೇಳೋ: ದೂರ್ವಾಸ ಉಪಮನ್ಯು ದಧೀಚಿ ಜಮದಗ್ನಿ ಮಾರ್ಕಂಡೇಯ ಪರಾಶರ ಮೊದಲಾದ ಋಷಿಗಳೆಲ್ಲ ಶಿವಾರ್ಚನೆಯಂ ಮಾಡಿದರು. ಬ್ರಹ್ಮವಿಷ್ಣು ಮೊದಲಾದವರೆಲ್ಲರೂ ಶಿವಲಿಂಗಾರ್ಚನೆಯ ಮಾಡಿದರು, ಕೇಳಿರೇ ನೋಡಿರೇ ದೃಷ್ಟವನು. ಮತ್ಸ್ಯಕೇಶ್ವರ ಕೂರ್ಮೇಶ್ವರ ವರಾಹೇಶ್ವರ ನಾರಸಿಂಹೇಶ್ವರ ರಾಮೇಶ್ವರ ಎಂಬ ದಶಾವತಾರಗಳಲ್ಲಿ ಶಿವಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚಾನೆಯಂ ಮಾಡಿದರು. ಅನೇಕ ವೇದಶಾಸ್ತ್ರಾಗಮಪುರಾಣಂಗಳ ಕೇಳಿರೇ ನೋಡಿರೇ. ಯಂ ಯಂ ಕಾಮಯತೇ ಕಾಮಂ ತಂ ತಂ ಲಿಂಗಾರ್ಚನಾಲ್ಲಭೇತ್ ನ ಲಿಂಗೇ [ನ] ವಿನಾ ಸಿದ್ದಿದುರ್ಲಭಂ ಪರಮಂ ಪದಂ ಮತ್ತಂ ಅಸುರಾ ದಾನವಾಶ್ಚೈವ ಪಿಶಾಚೋರಗರಾಕ್ಷಸಾಃ ಆರಾಧ್ಯಂ ಪರಮಂ ಲಿಂಗಂ ಪ್ರಾಪುಸ್ತೇ ಸಿದ್ಧಿಮುತ್ತಮಾಮ್ ಮತ್ತಂ ಅಗ್ನಿಹೋತ್ರಶ್ಚವೇದಶ್ಚ ಯಜ್ಞಾಶ್ಚ ಬಹುದಕ್ಷಿಣಾಃ ಶಿವಲಿಂಗಾರ್ಚನಸ್ಯೈತೇ ಕೋಟ್ಯಂಶೇನಾಪಿ ನೋ ಸಮಾಃ ಎಂದುದಾಗಿ, ಇಂತು ಇದು ಮೊದಲಾದ ದೇವಜಾತಿಗಳೆಲ್ಲ ಶಿವಲಿಂಗಾರ್ಚನೆಯಂ ಮಾಡಿದುದಕ್ಕೆ ದೃಷ್ಟ ನೋಡಿರೇ: ಕಾಶೀಕ್ಷೇತ್ರದಲ್ಲಿ ಬ್ರಹ್ಮೇಶ್ವರ ಇಂದ್ರೇಶ್ವರ ಯಕ್ಷಸಿದ್ದೇಶ್ವರ ಎಂಬ ಲಿಂಗಂಗಳಂ ಪ್ರತಿಷಿ*ಸಿ ಶಿವಲಿಂಗಾರ್ಚನೆಯಂ ಮಾಡಿದರು. ತಾರಕ ರಾವಣಾದಿಗಳೆಲ್ಲ ಶಿವಲಿಂಗಾರ್ಚನೆಯಂ ಮಾಡಿದರು. ಇಂತವರೆಲ್ಲರು ಮರುಳರು, ನೀನೊಬ್ಬನೇ ಬುದ್ಧಿವಂತನೆ ? ಅದು ಕಾರಣ, ಆ ಶ್ರೀಗುರುವಿನಾಜ್ಞೆಯಂ ಮೀರಿ ಕೆಡದಿರಿ ಕೆಡದಿರಿ. ಆ ಮಹಾ ಶ್ರೀಗುರುವಿನ ವಾಕ್ಯವನೇ ನಂಬಿ, ಗುರುಲಿಂಗಜಂಗಮವನೊಂದೇಯೆಂದು ನಿಶ್ಚಯಿಸಿ, ಇದೇ ಅಧಿಕ, ಇದರಿಂದ ಬಿಟ್ಟು ಮತ್ತಾವುದು ಅಧಿಕವಿಲ್ಲ. ಅಂದು ಗುರುಲಿಂಗಜಂಗಮದಲ್ಲಿಯ ಭಕ್ತಿಯೆ ಭಕ್ತಿ, ಅರ್ಚನೆಯೇ ಅರ್ಚನೆ, ಆ ಸಂಗವೇ ಶಿವಯೋಗ, ಇದು ಸತ್ಯ ಶಿವನಾಣೆ, ಉರಿಲಿಂಗಪೆದ್ಧಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
-->