ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಯೋಗಿಯ ಹೊಲಬು ಯೋಗಿಯಾದವಂಗಲ್ಲದೆ,ಇತರ ನರರಿಂಗೆ ಸಾದ್ಥಿಸಬಾರದು ಕೇಳಯ್ಯಾ.ಧಾತುವಾದವದು ರಸವಾದಿಯಾದವಂಗಲ್ಲದೆ,ಇತರ ನರಂಗದು ಸಾದ್ಥಿಸಬಾರದು ಕೇಳಯ್ಯಾ.ನೋಡಿ ಮಾಡುವುದಾದಡೆ ಭವವೆಲ್ಲಿಹುದು,ದರಿದ್ರವೆಲ್ಲಿಹುದು ಹೇಳಯ್ಯಾ, ಕಪಿಲಸಿದ್ಧಯ್ಯಾ.
ಯೋಗಿನಾಥನ ಒಲುಮೆ ಯೋಗಿಯಾದವಂಗಲ್ಲದೆ,ಭೋಗಿಯಾದಾತಂಗೆಲ್ಲಿಹುದಯ್ಯಾ?ಪಂಚಮಸ್ವರದಾಯತ ಕೋಗಿಲೆಗಲ್ಲದೆ ಕಾಗೆಗೆಲ್ಲಿಹುದೊ?ಕಪಿಲಸಿದ್ಧಮಲ್ಲಿಕಾರ್ಜುನ ಯೋಗಿನಾಥಾ