ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯೋಗಿಯ ಹೊಲಬು ಯೋಗಿಯಾದವಂಗಲ್ಲದೆ, ಇತರ ನರರಿಂಗೆ ಸಾದ್ಥಿಸಬಾರದು ಕೇಳಯ್ಯಾ. ಧಾತುವಾದವದು ರಸವಾದಿಯಾದವಂಗಲ್ಲದೆ, ಇತರ ನರಂಗದು ಸಾದ್ಥಿಸಬಾರದು ಕೇಳಯ್ಯಾ. ನೋಡಿ ಮಾಡುವುದಾದಡೆ ಭವವೆಲ್ಲಿಹುದು, ದರಿದ್ರವೆಲ್ಲಿಹುದು ಹೇಳಯ್ಯಾ, ಕಪಿಲಸಿದ್ಧಯ್ಯಾ.
--------------
ಸಿದ್ಧರಾಮೇಶ್ವರ
ಯೋಗಿನಾಥನ ಒಲುಮೆ ಯೋಗಿಯಾದವಂಗಲ್ಲದೆ, ಭೋಗಿಯಾದಾತಂಗೆಲ್ಲಿಹುದಯ್ಯಾ? ಪಂಚಮಸ್ವರದಾಯತ ಕೋಗಿಲೆಗಲ್ಲದೆ ಕಾಗೆಗೆಲ್ಲಿಹುದೊ? ಕಪಿಲಸಿದ್ಧಮಲ್ಲಿಕಾರ್ಜುನ ಯೋಗಿನಾಥಾ
--------------
ಸಿದ್ಧರಾಮೇಶ್ವರ
-->