ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶ್ರೀಮತ್ಪಂಚಾಕ್ಷರಿಯ ಉಚ್ಚರಣದ ವಿಶ್ವಾಸದಿಂದ ಉಪಮನ್ಯುವಿಂಗೆ ಶಿವಜ್ಞಾನ ಸಿದ್ಧಿಸಿತ್ತು. ಶ್ರೀಮತ್ಪಂಚಾಕ್ಷರಿಯ ಉಚ್ಚರಣದ ವಿಶ್ವಾಸದ ಸಾಧನದಿಂದ ವಸಿಷ್ಠ, ವಾಮದೇವ ಮೊದಲಾದ ಸಮಸ್ತಋಷಿಗಳಿಗೆ ಹಿರಿದಪ್ಪ ಪಾಪದೋಷವು ಹರಿದಿತ್ತು. ಶ್ರೀಮತ್ಪಂಚಾಕ್ಷರಿಯ ಉಚ್ಚರಣದ ವಿಶ್ವಾಸದ ಸಾಧನದಿಂದ ಬ್ರಹ್ಮವಿಷ್ಣ್ವಾದಿಗಳಿಗೆ ಜಗತ್ಸೃಷ್ಟಿರಕ್ಷಾಪತಿತ್ವ ಸಾಧ್ಯವಾಯಿತ್ತು. ಅದೆಂತೆಂದಡೆ:ಬ್ರಹ್ಮಾಂಡಪುರಾಣದಲ್ಲಿ, ಉಪಮನ್ಯುಃ ಪುರಾ ಯೋಗೀ ಮಂತ್ರೇಣಾನೇನ ಸಿದ್ಧಿಮಾನ್ ಲಬ್ಧವಾನ್ಪರಮೇಶತ್ವಂ ಶೈವಶಾಸ್ತ್ರ ಪ್ರವಕ್ತೃತಾಂ ಮತ್ತಂ, ವಿಷ್ಣುಪುರಾಣದಲ್ಲಿ, ವಸಿಷ್ಠವಾಮದೇವಾದ್ಯಾ ಮುನಯೋ ಮುಕ್ತಕಿಲ್ಬಿಷಾಃ ಮಂತ್ರೇಣಾನೇನ ಸಂಸಿದ್ಧಾ ಮಹಾತೇಜಸ್ವಿನೋ[s]ಭವನ್ ಎಂದುದಾಗಿ, ಮತ್ತಂ ಕೂರ್ಮಪುರಾಣದಲ್ಲಿ, ಬ್ರಹ್ಮಾದೀನಾಂ ಚ ದೇವಾನಾಂ ಜಗತ್ಸೃಷ್ಟ್ಯರ್ಥಕಾರಣಂ ಮಂತ್ರಸ್ಯಾಸ್ಯೈವ ಮಹಾತ್ಮ್ಯಾತ್ಸಾಮಥ್ರ್ಯಮುಪಜಾಯತೇ ಎಂದುದಾಗಿ, ಇಂತಪ್ಪ ಪುರಾಣವಾಕ್ಯಂಗಳನರಿದು ವಿಪ್ರರೆಲ್ಲರು ಶ್ರೀ ಪಂಚಾಕ್ಷರಿಯ ಜಪಿಸಿರೋ, ಜಪಿಸಿರೋ. ಮಂತ್ರಂಗಳುಂಟೆಂದು ಕೆಡಬೇಡಿ ಕೆಡಬೇಡಿ. ಮರೆಯದಿರಿ, ಮಹತ್ತಪ್ಪ ಪದವಿಯ ಪಡೆವಡೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರದೇವರ ದಿವ್ಯನಾಮವನು.
--------------
ಉರಿಲಿಂಗಪೆದ್ದಿ
-->