ಅಥವಾ

ಒಟ್ಟು 5 ಕಡೆಗಳಲ್ಲಿ , 5 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಪ್ರತ್ಯಾಹಾರದ ಭೇದವೆಂತೆನೆ : ಯೋಗಾಭ್ಯಾಸವ ಮಾಡುವಲ್ಲಿ ಆಲಸ್ಯವಾದ ಮಂದಸ್ವರೂಪವಾದ ಅತಿ ಉಷ್ಣವಾದ ಅತಿ ಶೀತಲವಾದ ಅತಿ ಕಟುವಾದ ಅತಿ ಆಮ್ಲವಾದ ಅಪವಿತ್ರವಾದ ಅನ್ನಪಾನಂಗಳಂ ಬಿಟ್ಟು, ಯೋಗೀಶ್ವರರಿಗೆ ಸ್ವೀಕರಿಸಲು ಯೋಗ್ಯವಾದ ಗೋದುವೆ ಶಾಲಿ ಜವೆ ಹೆಸರು ಹಾಲು ತುಪ್ಪ ಜೇನುತುಪ್ಪ ಮುಂತಾದ ಪವಿತ್ರ ಅನ್ನಪಾನಂಗಳು ಬಹು ಬಹುಳವಲ್ಲದೆ, ಬಹು ಸೂಕ್ಷ್ಮವಲ್ಲದೆ, ಸುಪ್ರಮಾಣದಲ್ಲಿ ಸ್ವೀಕರಿಸುವುದೆ ಪ್ರತ್ಯಾಹಾರವೆನಿಸುವುದು. ಅಂತುಮಲ್ಲದೆ ಬಾಹ್ಯಾರ್ಥಂಗಳಲ್ಲಿ ಎರಗುವ ಚಿತ್ತಮಂ ಹೃದಯಾಕಾಶದಲ್ಲಿ ನಿಲಿಸುವುದೆ ಪ್ರತ್ಯಾಹಾರವು. ಮತ್ತೆ ಹೃದಯಸ್ಥಾನದಿಂ ಚಲಿಸುವ ಮನಮಂ ಮರಳಿ ಮರಳಿ ಅಲ್ಲಿಯೇ ಸ್ಥಾಪಿಸುವುದೇ ಪ್ರತ್ಯಾಹಾರವಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಯ್ಯ, ಶ್ರೀಗುರುಲಿಂಗಜಂಗಮದ ಕರುಣಕಟಾಕ್ಷೆಯಿಂದ ಮತ್ತಾ ಗುರುಲಿಂಗಜಂಗಮಸ್ವರೂಪವಾಗಿ, ನಿಜಾಚರಣೆಯಲ್ಲಿ ನಿಂದು, ಅಸತ್ಯವನಳಿದು ಸುಸತ್ಯದಲ್ಲಿ ನಿಂದು, ಅನಾಚಾರವನುಳಿದು ಶಿವಾಚಾರಸನ್ಮಾರ್ಗದಲ್ಲಿ ನಿಂದು, ಭವಿ ನಡೆನುಡಿಗಳನುಳಿದು ಭಕ್ತನ ನಡೆನುಡಿಗಳಲ್ಲಿ ನಿಂದು, ಅಯೋಗ್ಯವಾದ ಭೋಗವನುಳಿದು ಯೋಗ್ಯವಾದ ಭೋಗದಲ್ಲಿ ನಿಂದು, ತನ್ನಾದಿ ಮಧ್ಯಾವಸಾನವ ತಿಳಿದು, ತನ್ನ ನಿಜಾಚರಣೆ ಲೀಲಾವಿನೋದದಿಂದ ತನ್ನ ತಾನರ್ಚಿಸುವ ನಿಲುಕಡೆಯ ವಿಚಾರವ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಗರುಡ ಉವಾಚ:`ಅಶೇಷ ಪಾಶವಿಶ್ಲೇಷೋ, ಯದಿ ದೇವೇಶ ದೀಕ್ಷೆಯಾ| ಜಾತಾಯಾಮರ್ಥನಿಷ್ಟ್ಯತ್ಯಾ ಕಥಂ ಸ್ಯಾದ್ವಪುಷಃ ಸ್ಥಿತಿಃ || ಭಗವಾನ್ ಉವಾಚ| ಜಾತಾಯಾಂ ಘಟನಿಷ್ಪತ್ತೌ ಯಥಾ ಚಕ್ರಂ ಭ್ರಮತ್ಯಪಿ| ಪೂರ್ವಸಂಸ್ಕಾರ ಸಂಸಿದ್ಧಂ ತಥಾ ವಪುರಿದಂ ಸ್ಥಿತಂ || ಭಗ್ನೇ ಘಟೇ ಯಥಾ ದೀಪಃ ಸರ್ವತಃ ಸಂಪ್ರಕಾಶತೇ | ದೇಹಪಾತೇ ತಥಾ|| ಚಾತ್ಮಾ ಭಾತಿ ಸರ್ವತ್ರ ಸರ್ವದಾ ಇಂತೆಂದು ಪೂರ್ವೋಕ್ತವಾದ ನಿರ್ಬೀಜಾದಿ ಶಿವದೀಕ್ಷೆಗಳಿಂದಮಲವಾದಾತನೆ ಮುಕ್ತನೆನಿಸಿಕೊಂಬನು. ಆ ಶಿವದೀಕ್ಷೆಗೆ ಯೋಗ್ಯವಾದ ಸಮಯಮಂ ವಾತೂಲದೊಳು ಪೇಳ್ದಪಂ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಗುರುಮಾರ್ಗಾಚಾರ ಸತ್ಕ್ರಿಯಾಭಕ್ತಿಜ್ಞಾನವೈರಾಗ್ಯ ಷಟ್ಸ್ಥಲಮಾರ್ಗವಿಡಿದು ಆಚರಿಸುವ ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಸ್ವಯಚರಪರಮೂರ್ತಿಗಳು ಮೊದಲಾಗಿ ಲಿಂಗಾರ್ಚನೆಯ ವೇಳೆ ತ್ರಿಕಾಲಂಗಳಲ್ಲಿ ದಂತಪಙÂ್ತಚೇತನ ಪರಿಯಂತರ ಮಧುರ ಒಗರು ಖಾರ ಆಮ್ಲ ಕಹಿಯುಕ್ತವಾದ ಕಾಷ*ದೊಳಗೆ ಅರ್ಪಿತಕ್ಕೆ ಅಯೋಗ್ಯವಾದುದನುಳಿದು, ಯೋಗ್ಯವಾದ ಕಾಷ*ವ ದ್ವಾದಶಾಂಗುಲವಾದಡೂ ಸರಿಯೆ, ಅಷ್ಟಾಂಗುಲವಾದಡೂ ಸರಿಯೆ, ಮೀರಿದಡೆ ಷಡಂಗುಲದಿಂದಾಗಲಿ ದಂತಧಾವನ ಕ್ರಿಯೆಗಳ ಮಾಡುವದು. ದಂತಪಙÂ್ತಯ ಚೇತನ ತಪ್ಪಿದಲ್ಲಿ ಪರ್ಣದಿಂದಾಗಲಿ, ಗುರುಪಾದೊದಕಮಿಶ್ರವಾದ ವಿಭೂತಿಯಿಂದಲಾ[ಗಲಿ] ದಂತಪಙÂ್ತಯ ತೀಡಿ, ಮುಖಸ್ನಾನವ ಮಾಡಿ, ಲಿಂಗಾರ್ಚನೆ ಲಿಂಗಾರ್ಪಣವ ಮಾಡಬೇಕಲ್ಲದೆ ಇಂತು ಗುರುವಾಕ್ಯವ ಮೀರಿ, ಸಂಸಾರಲಂಪಟದಿಂದ ಹಾಂಗೆ ಭುಂಜಿಸುವಾತಂಗೆ ಪ್ರಸಾದಿಸ್ಥಲ ಮೊದಲು, ಪರಸ್ಥಲ ಕಡೆಯಾಗಿ ಪಿಂಡಾದಿ ಜ್ಞಾನಶೂನ್ಯಸ್ಥಲಕ್ಕೆ ಹೊರಗು ನೋಡ, ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಭವಿಪಾಕವ ಮುಟ್ಟದೆ ಸಮಸ್ತ ಮತದಿಂದ ಅಯೋಗ್ಯವಾದ ಪದಾರ್ಥವನುಳಿದು ಯೋಗ್ಯವಾದ ಪದಾರ್ಥವ ಕೊಂಡು, ಪಾದೋದಕದಲ್ಲಿ ಪವಿತ್ರತೆಯಿಂದ ಸ್ವಪಾಕವ ಮಾಡಿ, ಪರಶಿವಲಿಂಗವೆಂದರಿದು ಸುಖಿಸಿ ನಿಜೈಕ್ಯರಾದರು. ಇದನರಿಯದ ಆಡಂಬರದ ವೇಷವ ಧರಿಸಿ ಉದಕ ಹೊಯ್ದು ಸ್ವಯ ಚರ ಪರ ಷಟ್ಸ್ಥಲವ ಬೊಗಳುವ ಕುನ್ನಿಗಳ ಕಂಡು ನಾಚಿತ್ತು ಕಾಣಾ, ಎನ್ನ ಮನವು ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ.
--------------
ಅಕ್ಕಮ್ಮ
-->