ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿಯನಾದಿ ಆಚಾರವ ಕಾಣದೆ, ಸಮಮಾನದ ಲಿಂಗದ ಘನವ ತಿಳಿಯದೆ, ದಾಸಿಯ ಸಂಗಂಗೆಯ್ವ ಜಂಗಮಾಚಾರ್ಯಜ್ಞಾನಪುರುಷರು ಚಿತ್ತೈಸಿ, ಶೈವಾರಾದನೆಯ ಸ್ಥಲದಂತೆ ನಡೆದು, ಗಳಹಿಕೊಂಡು ಇಪ್ಪಿರಿ. ಅಂಗದನಿತ ದಾಸೆಗೆ, ಪಂತಿಯ ಗಡಣದ ಹಸುವಿನಾಸೆಗೆ, ಕಾಂಚಾಣದ ಪಂತಿಯಾಸೆಗೆ, ಸ್ಥಲ ಜಂಗಮಸ್ಥಲವಾಸಿಯ ಗಡಣದಾಸೆಗೆ, ಪಂತಿ ಪಾದಾರ್ಚನೆಯ ಹಿರಿಯತನದ ಗಡಣ ಗಮಕದಾಸೆಗೆ, ಕೃತಿಯ ದ್ವೆ ೈತವ ನಟಿಸುವ ಪಂಚಮಹಾಪಾತಕದೇವರ ದೇವತ್ವದ ಬಲ್ಲರು ಕೇಳಿರಣ್ಣ. ನಾ ದೇವತಾದೇವನೆಂಬುದೊಂದು ಸಮದೇವತ್ವದ ಗಳಹುವಿರಿ. ಅಂಗದಲ್ಲಿ ಸೋವಿ ಮಾತ್ರವೆಂಬ ಸ್ತ್ರೀಯ ಆಲಿಂಗನಂಗೈದು ಗಳಹುವಿರಿ. ಶ್ರುತಿಃ ಅರ್ಧವಣಿ ಕಥಃ ಸೋವಿ ವಚಃ ಬಾದಿನಿ ಪರ್ವಣಃ | ಪಾಪಿಷ್ಟಾ ದುಷ್ಟದ್ರೋಹಿ ಚಾ ಪಾಪಿಷ್ಟ ಗುರುದ್ರೋಹಿ ಚಾ | ಗುರುಶಿವಚ್ಚೇದನ ತತ್ ಗುರುಷಾಮಾ ಚಿ ಅಪಹಿನ್ | ಗುರುಬಂಧನ ಗ್ರಾಹಿ ಚಃ | ಇಂತೆಂದುದಾಗಿ, ಸೋವಿಮಾತ್ರವೆಂದು ವಾಗದ್ವೈತವನುಂಟುಮಾಡಿ ಕಂಡು, ತಮ್ಮ ಸ್ವಯ ಇಚ್ಛೆಯ ಭಾವಕ್ಕೆ ಗಳಹಿಕೊಂಡು, ಹಿರಿಯರ ಮರೆಯಲ್ಲಿ ಕುಳಿತು, ಒಡಲ ಹೊರೆವ ಶೂಕರನಂತೆ, ತುಡುಗುಣಿತನಕ್ಕೆ ಗಡಣಿಸಿಕೊಂಡು ಹಿರಿಯರೆಂಬಿರಿ. ಶಿವಾಚಾರ ಃ ಗಿರಿಜಾನಾಥಂಗೆ ಗೌರಿ ತ್ರಿವಿಧವಿಧಮೇಕಾರ್ಥಕಲ್ಯಾಣ, ಗಿರಿಜಾಧಾರಿಯಲ್ಲಿ ಶಿವನ ದೇವತ್ವ ಕೆಟ್ಟಿತ್ತೆ ಪಾತಕರಿರಾ? ಸೋವಿಯ ಆಲಿಂಗನಂಗೈದು, ಚುಂಬನ ಕರ ಉರ ಜಘನ ಯೋನಿಚಕ್ರವ ಕೂಡಿ ನೆರೆದ ಬಳಿಕ, ಪ್ರಾತಃಕಾಲದಲ್ಲಿ ಹನ್ನೆರಡು ಜಂಗಮದೇವರಿಗೆ ಹನ್ನೆರಡು ಸುವರ್ಣಗಾಣಿಕೆಯನಿಕ್ಕಿ, ಹನ್ನೆರಡು ದ್ವಿವಸ್ತ್ರ, ಹನ್ನೆರಡು ತೆಂಗಿನಕಾಯಿಂದ ಹನ್ನೆರಡು ಜಂಗಮದೇವರಿಗೆ ಈ ಪರಿಯಾರ್ಥ ಅರ್ಚನೆಯ ಮಾಡಿದರೆ, ನವಭೋಗದೊಳಗಣ ತ್ರಿವಿಧ ಭಾಗೆಯ ಕಲೆಯಿರಣ್ಣ. ಅರಿದು ಮಾಡಿ ಮರದಂತೆ, ಬೆಬ್ಬನೆ ಬೆರೆತುಕೊಂಡಿರುವಾತ ಹಿರಿಯನಲ್ಲ. ಆತ ಗುರುವಲ್ಲ ಲಿಂಗವಲ್ಲ ಜಂಗಮವಲ್ಲ ಪಾದೋದಕ ಪ್ರಸಾದದೊಳಗಲ್ಲ. ಅವ ಅಮೇಧ್ಯ ಸುರ ಭುಂಜಕನು. ಇಂತೆಂಬ ಶ್ರುತಿಯ ಮೀರಿ ಆಚರಿಸುವ, ಬ್ರಹ್ಮರಾಕ್ಷಸ. ನವಕೋಟಿ ಯೋನಿಚಕ್ರದಲ್ಲಿ ರಾಟಾಳದ ಘಟದಂತೆ ತಿರುಗುವನು. ಆದಿಯ ವಚನದ ಸಮ್ಮತವಿದು, ಸೋವಿಯ ಸಂಗ ಆಲಿಂಗನಂಗೈವಿರಿ. ಸೋವಿಯ ಸಂಗ ಆಲಿಂಗನಂಗೈದವ, ಶತಕೋಟಿ ಶೂಕರಯೋನಿಯಲ್ಲಿ ಬಪ್ಪನು. ನವಕೋಟಿ ಗಾರ್ಧಭಯೋನಿಯಲ್ಲಿ ಬಪ್ಪನು. ಶತಕೋಟಿ ಕುಕ್ಕುಟಯೋನಿಯಲ್ಲಿ ಬಪ್ಪನು. ಸಚರಾಚರಯೋನಿ ಯೋನಿನವಕೋಟಿ ತಪ್ಪದು. ಅವಂಗೆ ಜನ್ಮ ಜನ್ಮಾಂತರದಲ್ಲಿ ಬಪ್ಪುದು ತಪ್ಪದು. ಇಂತಿದನರಿದು ಮರೆದೆಡೆ, ದೇವ ಮತ್ರ್ಯ ತಪರ್ಲೋಕಕ್ಕೆ ಸಲ್ಲಸಲ್ಲ, ಅಲ್ಲ ನಿಲ್ಲು, ಮಾಣು, ಹೊರಗಯ್ಯ. ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಹೊಯ್ಯೋ ಡಂಗುರವ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ಉಚ್ಚೆಯ ಬಚ್ಚಲ ಹಲವು ಭಗದ ದೇವತೆಯ ಮಾಯೆಯ ಹಾವಳಿಯ ನೋಡಿರಣ್ಣ. ಕರಣಹಸುಗೆಯನೋದುವಣ್ಣಗಳ ಕಾಲ ಹಿಡಿದೆಳೆಯಿತು ಮಾಯೆ. ಮಿಶ್ರಾರ್ಪಣಗಳನೋದುವಣ್ಣಗಳ ಮೀಸೆಯ ಹಿಡಿದುಯ್ಯಾಲೆಯನಾಡಿತು ಮಾಯೆ. ಆತ್ಮನ ಸ್ವರೂಪವನರಿವಣ್ಣಗಳ ತನಗಾಳು ಮಾಡಿತ್ತು ಮಾಯೆ. ಶಿವಜ್ಞಾನವ ಕೀಳುಮಾಡಿ ತತ್ವಸ್ವರೂಪವನರಿವಣ್ಣಗಳ ತನಗೆ ಮುದ್ದು ಮಾಡಿಸಿ ಮೋಹಿಸಿ ಬತ್ತಲೆ ನಿಲಿಸಿತು ಮಾಯೆ. ಮಂತ್ರಗೋಪ್ಯವನೋದುವಣ್ಣಗಳ ಕುಟಿಲವೆಣ್ಣಿನ ಕುಮಂತ್ರಕ್ಕೆ ಸಿಕ್ಕಿಸಿ ಕಾಡಿತು ಮಾಯೆ. ಬರಿಯ ವೈರಾಗ್ಯದ ಮಾಡುವಣ್ಣಗಳ ಸ್ತ್ರೀಯರ ಮುಡಿಯ ಸಿಂಗರಿಸುವಂತೆ ಮಾಡಿತು ಮಾಯೆ. ಜಪಧ್ಯಾನಗಳ ಮಾಡುವಣ್ಣಗಳ ಭಗಧ್ಯಾನವ ಮಾಡಿಸಿತು ಮಾಯೆ. ಲಿಂಗವ ಕರಸ್ಥಲದಲ್ಲಿ ಹಿಡಿದಣ್ಣಗಳ ಅಂಗನೆಯರ ಹಿಂದಣ ಪುಕಳಿಯ ಮುಂದಣ ಯೋನಿಚಕ್ರವ ಮುಟ್ಟಿಸಿ ಮೂಗನರಿಯಿತು ಮಾಯೆ. ಪ್ರಸಾದ ಲೇಹ್ಯವ ಮಾಡುವಣ್ಣಗಳ ಪೊಸಜವ್ವನೆಯರ ತುಟಿಯ ಲೋಳೆಯ ನೆಕ್ಕಿಸಿತು ಮಾಯೆ. ಬೆಡಗಿನ ವಚನವನೋದುವಣ್ಣಗಳ ಸಖಿಯರ ತೊಡೆಯಲ್ಲಿ ಹಾಕಿತು ಮಾಯೆ. ವಚನವನೋದುವಣ್ಣಗಳ ರಚನೆಗೆ ನಿಲಿಸಿತು ಮಾಯೆ. ಇದು ಕಾರಣ, ಇಚ್ಛೆಯ ನುಡಿದು ಕುಚ್ಫಿತನಾಗಿ ಬರಿವಿರಕ್ತನಂತೆ ಹೊಟ್ಟೆಯ ಹೊರೆದು ಹೊನ್ನು ಹೆಣ್ಣು ಮಣ್ಣು ದೊರೆತಲ್ಲಿ ಹಿಡಿದಿಹ ಕರ್ಮಿಯೆಂಬ ಕಾಳಮೂಳರಿಗೆಲ್ಲಿಯದೋ ವಿರಕ್ತಿ?, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
-->