ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಆ ಆತ್ಮನು ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಂ ಪಂಚಭೂತಾಂಶಿಕಮಂ ಕೂಡಿಕೊಂಡು ದೇಹವಾಗಿ ಬೆಳೆದು, ಆಧ್ಯಾತ್ಮಿಕ, ಆದ್ಥಿದೈವಿಕ, ಆದ್ಥಿಭೌತಿಕವೆಂಬ ತಾಪತ್ರಯಂಗಳಿಂದ ನೊಂದು ಬೆಂದು ಪುಣ್ಯಪಾಪ ವಶದಿಂದ ಜೀವನಾಗಿ, ಅಂಡಜ, ಸ್ವೇದಜ, ಉದ್ಬಿಜ, ಜರಾಯುಜವೆಂಬ ಚೌರಾಶಿಲಕ್ಷ ಜೀವಜಂತುಗಳ ಯೋನಿಯಲ್ಲಿ ಬಂದು, ಹುಟ್ಟದ ಯೋನಿಯಿಲ್ಲ, ಮೆಟ್ಟದ ಭೂಮಿಯಿಲ್ಲ, ಉಣ್ಣದ ಆಹಾರವಿಲ್ಲ, ಕಾಣದ ಸುಖದುಃಖವಿಲ್ಲ. ಇದಕ್ಕೆ ಈಶ್ವರ ಉವಾಚ : ``ನಾನಾಯೋನಿಸಹಸ್ರಾಣಿ ಗತ್ವಾ ಚೈವಂತು ಮಾಯಯಾ | ಆಹಾರಂ ವಿವಿಧಂ ಭುಕ್ತ್ವಾ ಪೀತ್ವಾ ಚ ವಿವಿಧಸ್ತನಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಂಸಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬಯಲು ಬ್ರಹ್ಮಾಂಡಂಗಳಿಲ್ಲದಲ್ಲಿ, ಯುಗಜುಗಂಗಳು ತಲೆದೋರದಲ್ಲಿ, ಅಲ್ಲಿಂದಾಚೆ ಹುಟ್ಟಿತ್ತು. ಕರಚರಣಾದಿ ಅವಯವಂಗಳಿಲ್ಲದ ಶಿಶು. ಬಲಿವುದಕ್ಕೆ ಬಸಿರಿಲ್ಲ, ಬಹುದಕ್ಕೆ ಯೋನಿಯಿಲ್ಲ, ಮಲಗುವುದಕ್ಕೆ ತೊಟ್ಟಿಲಿಲ್ಲ. ಹಿಂದು ಮುಂದೆ ಇಲ್ಲದ, ತಂದೆ ತಾಯಿಯಿಲ್ಲದ ತಬ್ಬಲಿ. ನಿರ್ಬುದ್ಧಿ ಶಿಶುವಿಂಗೆ ಒಸೆದು ಮಾಡಿಹೆನೆಂಬವರು ವಸುಧೆಯೊಳಗೆ ಇದು ಹುಸಿಯೆಂದೆ. ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗದಲ್ಲಿ ಭರಿತನಾದವಂಗಲ್ಲದಿಲ್ಲ.
--------------
ಮನುಮುನಿ ಗುಮ್ಮಟದೇವ
-->