ಅಥವಾ

ಒಟ್ಟು 285 ಕಡೆಗಳಲ್ಲಿ , 63 ವಚನಕಾರರು , 237 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ ಮುಟ್ಟದ ಮಜ್ಜನ ತನು ತಾಗದ ದೇಹಾರ, ಭಾವ ತಾಗದ ಪೂಜೆ, ಎದೆ ತಾಗದ ನೋಟ ವಾಯು ತಾಗದ ನಲಿಂಗದ¥sgಠ್ಞವ ತೋರಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇನ್ನು ತಾರಕಯೋಗದ ಲಕ್ಷಣಮಂ ಪೇಳ್ವೆನೆಂತೆನೆ : ಮಂತ್ರಯೋಗ ಲಯಯೋಗ ಹಠಯೋಗಕ್ಕೆ ಉತ್ತರೋತ್ತರ ವಿಶಿಷ್ಟವಾದ ರಾಜಯೋಗವೇ ಸಾಂಖ್ಯಯೋಗವೆಂದು ತಾರಕಯೋಗವೆಂದು ಅಮನಸ್ಕಯೋಗವೆಂದು ಮೂರು ಪ್ರಕಾರವಾಗಿರ್ಪುದು. ಆ ಮೂರರೊಳಗೆ ಮೊದಲು ಸಾಂಖ್ಯಯೋಗವೇ ತತ್ವಜಾÕನರೂಪವಪ್ಪುದರಿಂದೆ, ಆ ತತ್ವಂಗಳೆಂತೆನೆ : ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚತತ್ವಂಗಳಿಂದೆ ಜನಿತಮಾದ ವಾಗಾದಿ ಕರ್ಮೇಂದ್ರಿಯಂಗಳೈದು, ಶಬ್ದಾದಿ ವಿಷಯಂಗಳೈದು, ಶ್ರೋತ್ರಾದಿ ಜಾÕನೇಂದ್ರಿಯಂಗಳೈದು, ಪ್ರಾಣಾದಿ ವಾಯುಗಳೈದು, ಜೀವನಗೂಡಿ ಮಾನಸಾದಿ ಅಂತಃಕರಣಂಗಳೈದು, ಇಂತೀ ಪಂಚವಿಂಶತಿ ತತ್ವಂಗಳು ನಾನಲ್ಲ, ಅವು ನನ್ನವಲ್ಲವೆಂದು ವಿಭಾಗಿಸಿ ಕಳೆದು, ಪರಾತ್ಪರವಾದ ಪರಶಿವಬ್ರಹ್ಮವೆ ನಾನೆಂದು ತಿಳಿವುದೇ ಸಾಂಖ್ಯಯೋಗ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನಿರ್ಬಯಲು ಮಹಾಬಯಲು ಚಿದ್‍ಬಯಲು ಬಯಲಾತ್ಮ ಸೂರ್ಯ ಚಂದ್ರ ತಾರಕ ಕಠೋರ ವಾಯು ಆಕಾಶ ಅಗ್ನಿ ಅಪ್ಪು ಪೃಥ್ವಿ ಬೀಜ ಅನ್ನರಸ ವೀರ್ಯ ಪಿಂಡ ಪ್ರಾಣ ಮನ ಅಸಿ ಉತ್ಪತ್ತಿ ಸ್ಥಿತಿ ಲಯ ಅಕ್ಷರ ಮೊದಲಾದ ಬ್ರಹ್ಮಾಂಡ ನೀನಾದುದಕ್ಕೆ, ನಿನ್ನ ನೀನರಿವುದಕ್ಕೆ ನೀನೇ ನಾನಾದುದೇ ಇದೇ ಆದಿಯಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ, ಚೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ. ಸುವರ್ಣ ಒಂದು ಆಭರಣ ಹಲವಾದಂತೆ. ಪರಬ್ರಹ್ಮವಸ್ತುವೊಂದೆಂಬುದಕ್ಕೆ ಇದೆ ದೃಷ್ಟ. ಮತ್ತಿದಿರು ದೈವವುಂಟೆಂದು ಗದಿಯಬೇಡ. ನೆರೆ ನಂಬಿ, ಸದಾಶಿವಮೂರ್ತಿಲಿಂಗವಲ್ಲದಿಲ್ಲಾಯೆಂದೆ.
--------------
ಅರಿವಿನ ಮಾರಿತಂದೆ
ಪೃಥ್ವಿ, ಸದ್ಯೋಜಾತನ ಹಂಗು. ಜಲ, ವಾಮದೇವನ ಹಂಗು. ಅಗ್ನಿ, ಅಘೋರನ ಹಂಗು. ವಾಯು, ತತ್ಪುರುಷನ ಹಂಗು. ಆಕಾಶ, ಈಶಾನ್ಯನ ಹಂಗು. ಪಂಚಬ್ರಹ್ಮನ ಮರೆದು, ಓಂಕಾರ ಬ್ರಹ್ಮವನರಿ, ಐಘಟದೂರ ರಾಮೇಶ್ವರಲಿಂಗವ.
--------------
ಮೆರೆಮಿಂಡಯ್ಯ
ಹಿರಿದುಂಟೆಂಬ ನುಡಿ ಚೋದ್ಯವಪ್ಪುದು ಶರಣಂಗೆ. ಅದೇನು ಕಾರಣವೆಂದೊಡೆ, ತನ್ನಿಂದ ತೋರಿದ ಪೃಥ್ವಿ ಅಪ್ಪು ಅಗ್ನಿ ವಾಯು ಆಕಾಶ ಆತ್ಮ ಸೂರ್ಯ ಚಂದ್ರ ತನ್ನಿಂದೆ ತೋರಿದ ಸಕಲಾರಂಭ. ಇದು ಕಾರಣ, ತಾನೊಂದರಿಂದ ತೋರಿದವನಲ್ಲ. ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣ ಕಾರಣನಹುದು ಕಾರ್ಯನಲ್ಲ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸ್ಥಲಂಗಳ ಭೇದ ವಿವರ: ವೇಣು ವೀಣೆ ಮೌರಿ ವಾದ್ಯಂಗಳಲ್ಲಿ ವಾಯು ಅಂಗುಲಿಯ ಭೇದದಿಂದ ರಚನೆಗಳ ತೋರುವಂತೆ ಘಟದ ಸ್ಥೂಲ ಸೂಕ್ಷ್ಮಂಗಳಲ್ಲಿ ತ್ರಾಣ ತತ್ರಾಣವಾದಂತೆ ಅದು ಭಾವಜ್ಞಾನ ಷಟ್‍ಸ್ಥಲ ಕ್ರಿಯಾಭೇದದ ವಾಸ. ಇಂತೀ ಉಭಯದೃಷ್ಟ ನಾಶವಹನ್ನಕ್ಕ ಐಕ್ಯಲೇಪನಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ಪೃಥ್ವಿ ಸಕಲವ ಧರಿಸಿಕೊಂಡಿಪ್ಪಂತೆ ಶಿವಶರಣ ಸಮಾಧಾನಿಯಾಗಿರಬೇಕಯ್ಯಾ. ಅಪ್ಪುವಿನ ನಿರ್ಮಳದಂತೆ ಶಿವಶರಣ ನಿರ್ಮಳನಾಗಿರಬೇಕಯ್ಯಾ. ಪಾವಕನು ಸಕಲದ್ರವ್ಯಂಗಳ ದಹಿಸಿಯು ಲೇಪವಿಲ್ಲದ ಹಾಂಗೆ ಶಿವಶರಣ ನಿರ್ಲೇಪನಾಗಿರಬೇಕಯ್ಯಾ. ವಾಯು ಸಕಲದ್ರವ್ಯಂಗಳಲ್ಲಿಯು ಸ್ಪರ್ಶನವ ಮಾಡಿಯು ಆ ಸಕಲದ ಗುಣವ ಮುಟ್ಟದ ಹಾಂಗೆ ಶಿವಶರಣ ಸಕಲಭೋಗಂಗಳನು ಭೋಗಿಸಿಯು ಸುಗಂಧ ದುರ್ಗಂಧಂಗಳನು ಮುಟ್ಟಿಯು ನಿರ್ಲೇಪಿಯಾಗಿರಬೇಕಯ್ಯ! ಆಕಾಶವು ಸಕಲದಲ್ಲಿ ಪರಿಪೂರ್ಣವಾಗಿಹ ಹಾಂಗೆ ಶಿವಶರಣ ಸಕಲದಲ್ಲಿ ಪರಿಪೂರ್ಣನಾಗಿರಬೇಕಯ್ಯಾ. ಇಂದುವಿನಂತೆ ಶಿವಶರಣ ಸಕಲದಲ್ಲಿ ಶಾಂತನಾಗಿರಬೇಕಯ್ಯಾ. ಭಾನುವು ತಮವನಳಿಸಿ ಪ್ರಕಾಶವ ಮಾಡುವ ಹಾಂಗೆ ಶಿವಶರಣ ಅವಿದ್ಯವ ತೊಲಗಿಸಿ ಸುವಿದ್ಯವ ಮಾಡಬೇಕಯ್ಯಾ. ಇದು ಕಾರಣ, ಸದ್ಗುರುಪ್ರಿಯ ಸಿದ್ಧಸೋಮನಾಥಾ, ನಿಮ್ಮ ಶರಣ ನಿರ್ಲೇಪನಯ್ಯಾ.
--------------
ಅಮುಗಿದೇವಯ್ಯ
ಬಸವಣ್ಣನ ಶೃಂಗದಲ್ಲಿ ತುಂಬುರ ನಾರದರು, ಬಸವಣ್ಣನ ಲಲಾಟದಲ್ಲಿ ವೀರಗಣಂಗಳು, ಬಸವಣ್ಣನ ನಯನದಲ್ಲಿ ಸೂರ್ಯಚಂದ್ರರು, ಬಸವಣ್ಣನ ಕರ್ಣದಲ್ಲಿ ಗಂಗೆವಾಳುಕಸಮರುದ್ರರು, ಬಸವಣ್ಣನ ನಾಸಿಕದಲ್ಲಿ ವಾಯು, ಬಸವಣ್ಣನ ದಂತದಲ್ಲಿ ಭೃಂಗೀಶ್ವರದೇವರು, ಬಸವಣ್ಣನ ಕೊರಳಲ್ಲಿ ಈರೇಳು ಭುವನಂಗಳು, ಬಸವಣ್ಣನ ಅಂಡದಲ್ಲಿ ಅಷ್ಟಷಷ್ಟಿ ತೀರ್ಥಂಗಳು, ಬಸವಣ್ಣನ ಬಲದೊಡೆಯಲ್ಲಿ ಅಜ, ಹರಿ, ಸರಸ್ವತಿ, ಪಂಚನದಿ, ಮಹಾಗಂಗೆ, ಬಸವಣ್ಣನ ಮಣಿಪಾದದಲ್ಲಿ ದೇವಲೋಕದ ದೇವಗಣಂಗಳು, ಬಸವಣ್ಣನ ಕಿರುಗೊಳಗಿನಲ್ಲಿ ಸಮಸ್ತಸಮುದ್ರಂಗಳು. ಈ ಸಪ್ತಸಮುದ್ರಂಗಳೊಳಗಿಹ ಸಕಲಪ್ರಾಣಿಗಳಿಗೆ ಸಂಕೀರ್ಣತೆಯಾದೀತೆಂದು, ಬಾಲದಂಡದಲೆತ್ತಿ ತಡಿಗೆ ಸೇರಿಸಿದನು ನಮ್ಮ ಬಸವಣ್ಣನು-ಇದು ಕಾರಣ, ನಾಗಲೋಕದ ನಾಗಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳ ಕೊಂಬುದು ಬಸವಣ್ಣನ ಪ್ರಸಾದ. ರುದ್ರಲೋಕದ ರುದ್ರಗಣಂಗಳು ಕೊಂಬುದು ಬಸವಣ್ಣನ ಪ್ರಸಾದ.- ಇಂತು ನಮ್ಮ ಬಸವಣ್ಣನ ಪ್ರಸಾದವನುಂಡುಟ್ಟು ಕೊಂಡು ಕೊಟ್ಟು ಅನ್ಯದೈವಂಗಳ ಹೊಗಳುವ ಕುನ್ನಿಗಳನೇನೆಂಬೆ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ,. ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ ಮಗನು ಪೃಥ್ವಿ. ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಇನ್ನು ಆ ಆತ್ಮನು ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಂ ಪಂಚಭೂತಾಂಶಿಕಮಂ ಕೂಡಿಕೊಂಡು ದೇಹವಾಗಿ ಬೆಳೆದು, ಆಧ್ಯಾತ್ಮಿಕ, ಆದ್ಥಿದೈವಿಕ, ಆದ್ಥಿಭೌತಿಕವೆಂಬ ತಾಪತ್ರಯಂಗಳಿಂದ ನೊಂದು ಬೆಂದು ಪುಣ್ಯಪಾಪ ವಶದಿಂದ ಜೀವನಾಗಿ, ಅಂಡಜ, ಸ್ವೇದಜ, ಉದ್ಬಿಜ, ಜರಾಯುಜವೆಂಬ ಚೌರಾಶಿಲಕ್ಷ ಜೀವಜಂತುಗಳ ಯೋನಿಯಲ್ಲಿ ಬಂದು, ಹುಟ್ಟದ ಯೋನಿಯಿಲ್ಲ, ಮೆಟ್ಟದ ಭೂಮಿಯಿಲ್ಲ, ಉಣ್ಣದ ಆಹಾರವಿಲ್ಲ, ಕಾಣದ ಸುಖದುಃಖವಿಲ್ಲ. ಇದಕ್ಕೆ ಈಶ್ವರ ಉವಾಚ : ``ನಾನಾಯೋನಿಸಹಸ್ರಾಣಿ ಗತ್ವಾ ಚೈವಂತು ಮಾಯಯಾ | ಆಹಾರಂ ವಿವಿಧಂ ಭುಕ್ತ್ವಾ ಪೀತ್ವಾ ಚ ವಿವಿಧಸ್ತನಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಂಸಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆ ಎಂಬ ಪಂಚ ವಿಭೂತಿ ಉತ್ಪತ್ಯವೆಂತೆಂದಡೆ : ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಮುಖದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಉತ್ಪತ್ಯವಾಯಿತ್ತು. ಆ ಪೃಥ್ವಿಯಪ್ಪುತೇಜವಾಯುವಾಕಾಶದಿಂದಲ್ಲಿ ನಿವೃತ್ತಿ ಪ್ರತಿಷ್ಠೆ ವಿದ್ಯಾ ಶಾಂತಿ ಶಾಂತ್ಯಾತೀತಯೆಂಬ ಪಂಚಕಲೆಗಳುತ್ಪತ್ಯವಾಯಿತ್ತು. ಆ ಪಂಚಕಲೆಗಳಿಂದ ನಂದೆ ಭದ್ರೆ ಸುರಬ್ಥಿ ಸುಶೀಲೆ ಸುಮನೆಯೆಂಬ ಪಂಚಗೋವುಗಳುತ್ಪತ್ಯವಾಯಿತ್ತು. ಆ ಪಂಚಗೋವುಗಳ ಗೋಮಯದಲ್ಲಿ ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆಯೆಂಬ ಪಂಚವಿಭೂತಿ ಉತ್ಪತ್ಯವಾಯಿತ್ತು. ಇದಕ್ಕೆ ಜಾಬಾಲೋಪನಿಷತ್ : ``ಸದ್ಯೋಜಾತಾತ್ ಪೃಥಿವೀ ತಸ್ಯಾ ನಿವೃತ್ತಿಃ ತಸ್ಯಾಃ ಕಪಿಲವರ್ಣಾ ನಂದಾ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷ್ಠಾ ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಬ್ಥೀ ತಸ್ಯಾಃ ಗೋಮಯೇನ ಭಸ್ಮ ಜಾತಂ || ತತ್ಪುರುಷಾತ್ ವಾಯುಃ ತಸ್ಮಾತ್ ಶಾಂತಿ ಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ || ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಃ ಚಿತ್ರವರ್ಣಾ ಸುಮನಾಃ ತಸ್ಯಾಃ ಗೋಮಯೇನ ರಕ್ಷಾ ಜಾತಾ ||'' ``ಐಶ್ವರ್ಯಕಾರಣಾತ್ ಭೂತಿಃ, ಭಾಸನಾತ್ ಭಸಿತಂ, ಸರ್ವಾಘಭಕ್ಷಣಾತ್ ಭಸ್ಮಂ, ಅಪದಾಂ ಕ್ಷರಣಾತ್ ಕ್ಷಾರಂ, ಭೂತಪ್ರೇತಪಿಶಾಚಬ್ರಹ್ಮರಾಕ್ಷಸಾಪಸ್ಮಾರ ಭವಬ್ಥೀತಿಭ್ಯೋsಬ್ಥಿರಕ್ಷಣಾತ್ ರಕ್ಷೇತಿ ||'' ಇಂತೆಂದುದು ಶ್ರುತಿ. ಇದಕ್ಕೆ ಕ್ರಿಯಾಸಾರೇ : ``ವಿಭೂತಿರ್ಭಸಿತಂ ಭಸ್ಮ ಕ್ಷಾರಂ ರಕ್ಷೇತಿ ಭಸ್ಮನಃ | ಭವಂತಿ ಪಂಚ ನಾಮಾನಿ ಹೇತು ರಕ್ಷಣಾದ್ರಕ್ಷೇತಿ ||'' ಇಂತೆಂದುದು ಶ್ರುತಿ. ``ಪಂಚಬ್ಥಿಃಬೃಷಂ ಐಶ್ವರ್ಯಕಾರಣಾದ್ಭೂತಿ, ಭಸ್ಮ ಸರ್ವಾಘಭಕ್ಷಣಾತ್, ಭಾಸನಾತ್ ಭಸಿತಂ, ತತ್ವಾ ಕ್ಷರಣಾತ್‍ಕ್ಷಾರಮಾಪದಂ, ಭೂತಪ್ರೇತಪಿಶಾಚೇಭ್ಯೋ ಸ್ವರ್ಗಹೇತುಭ್ಯೋಬ್ಥಿರಕ್ಷಣಾತ್ ರಕ್ಷಾ ಸ್ಯಾತ್ ಕ್ರೂರಸರ್ಪೇಭ್ಯೋ ವ್ಯಾಘ್ರಾದಿಭ್ಯಶ್ಚ ಸರ್ವದಾ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಮಹಾಸದಾಶಿವ ತತ್ವದ ಪಂಚಮುಖದಲ್ಲಿ ಉತ್ಪತ್ಯವಾದ ಪಂಚಮಹಾಭೂತಬ್ರಹ್ಮಾಂಡಕಪಾಲದೊಳು ಪಂಚಭೂತ ಬ್ರಹ್ಮಾಂಡಕಪಾಲ ಉತ್ಪತ್ಯವದೆಂತೆಂದೊಡೆ : ಆ ಮಹಾಶಿವತತ್ವದ ನಿರ್ಭಾವ ಮುಖದಲ್ಲಿ ಆತ್ಮನುತ್ಪತ್ಯವಾದನು. ಆ ಆತ್ಮನಲ್ಲಿ ಆಕಾಶ ಉತ್ಪತ್ಯವಾಯಿತ್ತು. ಆ ಆಕಾಶದಲ್ಲಿ ವಾಯು ಉತ್ಪತ್ಯವಾಯಿತ್ತು. ಆ ವಾಯುವಿನಲ್ಲಿ ಅಗ್ನಿ ಉತ್ಪತ್ಯವಾಯಿತ್ತು. ಆ ಅಗ್ನಿಯಲ್ಲಿ ಅಪ್ಪು ಉತ್ಪತ್ಯವಾಯಿತ್ತು. ಆ ಅಪ್ಪುವಿನಲ್ಲಿ ಪೃಥ್ವಿ ಉತ್ಪತ್ಯವಾಯಿತ್ತು. ಇದಕ್ಕೆ ಈಶ್ವರ ಉವಾಚ : ``ಆತ್ಮನ್ಯಾಕಾಶಸಂಭೂತಿರಾಕಾಶಾದ್ವಾಯು ಸಂಭವಃ | ವಾಯೋರಗ್ನಿಃ ಸಮುತ್ಪತ್ತಿರಗ್ನೇರಾಪ ಉದಾಹೃತಂ | ಅಪ್ ಪೃಥ್ವೀಚ ಸಂಭೂತಿರ್ಲಕ್ಷಣೈಕಪ್ರಭಾವತಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸದ್ಯೋಜಾತನ ಮುಟ್ಟಿ, ಪೃಥ್ವಿ ಬಯಲಾಗಿ ಚಿತ್ತ ಪಂಚಕವು ಕೆಟ್ಟವು ನೋಡಾ. ವಾಮದೇವನಿಗೊಲಿದು, ಅಪ್ಪು ಬಯಲಾಗಿ ಬುದ್ಧಿ ಪಂಚಕವು ಕೆಟ್ಟವು ನೋಡಾ. ಅಘೋರನ ನೆರೆದು, ಅಗ್ನಿ ಬಯಲಾಗಿ ಅಹಂಕಾರ ಪಂಚಕವಳಿದು ನಿರಹಂಕಾರಿಯಾದೆನಯ್ಯ. ತತ್ಪುರುಷನನಪ್ಪಿ, ವಾಯು ಬಯಲಾಗಿ ಮನಪಂಚಕವಳಿದವು ನೋಡಾ. ಈಶಾನ್ಯನೊಡಗೂಡಿ, ಆಕಾಶಬಯಲಾಗಿ ಭಾವ ಪಂಚಕವಳಿದು ನಿರ್ಭಾವಿಯಾಗಿ ನಿಜಲಿಂಗೈಕ್ಯನಾದೆನಯ್ಯ. ಎಲ್ಲಾ ಪದಂಗಳ ಮೀರಿ ಮಹಾಲಿಂಗ ಪದದೊಳಗೆ ಸಂಯೋಗವಾಗಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->