ಅಥವಾ

ಒಟ್ಟು 5 ಕಡೆಗಳಲ್ಲಿ , 4 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಷಡೀಂದ್ರಿಯ ಸಪ್ತಧಾತುಗಳಲ್ಲಿ ಸಂಭ್ರಮಿಸಿ ತುಂಬಿರ್ಪುದು ಒಂದೇ ಪರವಸ್ತುವೆಂದರಿಯರು. ಷಡ್‍ಭೂತ ಷಟ್‍ಚಕ್ರಂಗಳಲ್ಲಿ ಇಡಿದು ತುಂಬಿರ್ಪುದು ಒಂದೇ ಪರವಸ್ತುವೆಂದರಿಯರು. ತನುತ್ರಯ ಮನತ್ರಯ ಭಾವತ್ರಯಂಗಳಲ್ಲಿ ಭರಿತವಾಗಿರ್ಪುದು ಒಂದೇ ಪರವಸ್ತುವೆಂದರಿಯರು. ಒಳಹೊರಗೆ ತೆರಹಿಲ್ಲದೆ ಪರಿಪೂರ್ಣವಾಗಿ ತುಂಬಿರ್ಪುದು ಒಂದೇ ಪರವಸ್ತುವೆಂದರಿಯರು. ವಿಪರೀತ ಭ್ರಾಂತಿಜ್ಞಾನದಿಂದೆ ಒಳಗೆ ಬೇರೆ ಪರವಸ್ತು ಉಂಟೆಂದು ಕಣ್ಣಮುಚ್ಚಿ ನೋಡಿ ಕಳವಳಗೊಂಡು ಪ್ರಳಯಕ್ಕೊಳಗಾಗಿ ಹೋದವರ ಕಂಡು ನಗುತಿರ್ಪನು ನಮ್ಮ ಅಖಂಡೇಶ್ವರನು.
--------------
ಷಣ್ಮುಖಸ್ವಾಮಿ
ಅಯ್ಯ, ನಿನ್ನ ಷಟ್ಚಕ್ರಂಗಳಲ್ಲಿ ಅನಾದಿ ನಿಷ್ಕಳಂಕ ಚಿದ್ಘನ ಇಷ್ಟಮಹಾಲಿಂಗವೆ ಷಡ್ವಿಧಲಿಂಗವಾಗಿ ನೆಲಸಿರ್ಪರು ನೋಡ, ಅದೆಂತೆಂದಡೆ: ಆಧಾರಚಕ್ರದ ನಾಲ್ಕೆಸಳಮಧ್ಯದಲ್ಲಿ ನಕಾರಮಂತ್ರಮೂರ್ತಿ ಆಚಾರಲಿಂಗವಾಗಿ ನೆಲಸಿರ್ಪರು ನೋಡ. ಸ್ವಾಧಿಷಾ*ನಚಕ್ರದ ಆರೆಸಳಮಧ್ಯದಲ್ಲಿ ಮಕಾರಮಂತ್ರಮೂರ್ತಿ ಗುರುಲಿಂಗವಾಗಿ ನೆಲಸಿರ್ಪರು ನೋಡ. ಮಣಿಪೂರಕಚಕ್ರದ ಹತ್ತೇಸಳಮಧ್ಯದಲ್ಲಿ ಶಿಕಾರಮಂತ್ರಮೂರ್ತಿ ಶಿವಲಿಂಗವಾಗಿ ನೆಲಸಿರ್ಪರು ನೋಡ. ಅನಾಹತಚಕ್ರದ ಹನ್ನೆರಡೆಸಳಮಧ್ಯದಲ್ಲಿ ವಕಾರಮಂತ್ರಮೂರ್ತಿ ಚರಲಿಂಗವಾಗಿ ನೆಲಸಿರ್ಪರು ನೋಡ. ವಿಶುದ್ಧಿಚಕ್ರದ ಹದಿನಾರೆಸಳಮಧ್ಯದಲ್ಲಿ ಯಕಾರಮಂತ್ರಮೂರ್ತಿ ಪ್ರಸಾದಲಿಂಗವಾಗಿ ನೆಲಸಿರ್ಪರು ನೋಡ. ಆಜ್ಞಾಚಕ್ರದ ಎರಡೆಸಳ ಮಧ್ಯದಲ್ಲಿ ಓಂಕಾರಮಂತ್ರಮೂರ್ತಿ ಮಹಾಲಿಂಗವಾಗಿ ನೆಲಸಿರ್ಪರು ನೋಡ. ಇಂತು ಷಟ್ಚಕ್ರಂಗಳಮಧ್ಯದಲ್ಲಿ ನೆಲಸಿ, ನಿನ್ನ ಷಡ್ವಿಧಭೋಗಂಗಳ ಕೈಕೊಂಡು, ಆ ಪರಿಣಾಮವ ನಿನಗೆ ಸಂತೃಪ್ತಿಯ ಮಾಡಿ, ಶರಣಸತಿ ಲಿಂಗಪತಿ ಭಾವದಿಂದ ಮೇಲುಗಿರಿಮಂಟಪದ ನವರತ್ನ ಖಚಿತ ಸಹಸ್ರದಳ ಪದ್ಮಯುಕ್ತವಾದ ಪರಿಯಂಕದ ಮೇಲೆ ಲಿಂಗಾನುಭಾವರತಿಸುಖಾನಂದದಿಂದ ಶೋಭಿಸುವಂಥದೆ ಆಧ್ಯಾತ್ಮ ದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಈ ತೆರದಿಂದೀ ಮಹಾಲಿಂಗದ ಪೂರ್ವೋಕ್ತವಾದಧಶ್ಚಕ್ರಂಗಳೆಲ್ಲ ಶಕ್ತಿ ಷಟ್ಚಕ್ರಂಗಳಲ್ಲಿ ನ್ಯಸ್ತವಾದ ಮೂವತ್ತೈದು ವ್ಯಂಜನ ಭಿಕ್ಷಾರವಾಚ್ಯರಾದ ಮೂವತ್ತೈದು ರುದ್ರಶಕ್ತಿಯರೆ, ನೀಲೋತ್ಪಲಾದಿಗಳಿಂದಲಂಕೃತ ಹಸ್ತಂಗಳಿಂ, ದಿವ್ಯದುಕೂಲ ಗಂಧಮಾಲ್ಯಾಭರಣಾದಿಗಳಿಂ, ಶೋಭೆವಡೆದು ವಿರಾಜಿಪರಾ ಷೋಡಶ ಸ್ವರಾಕ್ಷರ ವಾಚ್ಯಶಕ್ತಿಯರೆಲ್ಲರುಮಂತೆಯೆ ತಂತಮ್ಮ ನಿಜಲಾಂಛನಧಾರಿಣಿಯರಾಗಿರ್ಪರೀಯುಭಯ ಸ್ವರವ್ಯಂಜನಂಗಳೈದಶಕ್ತಿ ಬೀಜಂಗಳಾದ ಕಾರಣವಗ್ಯುಷ್ಣದಂತೇಕವಾಗಿ ಐವತ್ತೊಂದಕ್ಕರಂಗಳ ಗಣನೆಯಾದುದೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಯ್ಯಾ, ಒಂದು ಅನಾದಿ ಮೂಲಪ್ರಣಮವೆ ಸಾಕಾರಲೀಲೆಯಧರಿಸಿ, ಚಿದಂಗ-ಚಿದ್ಘನಲಿಂಗವಾಗಿ, ಆ ಒಂದಂಗ-ಲಿಂಗವೆ ತ್ರಿವಿಧಾಂಗ ತ್ರಿವಿಧಲಿಂಗವಾಗಿ, ಆ ತ್ರಿವಿಧಲಿಂಗಾಂಗವೆ ಷಡ್ವಿಧಲಿಂಗಾಂಗವಾಗಿ, ಆ ಷಡ್ವಿಧಲಿಂಗಾಂಗವೆ ಛತ್ತೀಸಲಿಂಗಾಂಗವಾಗಿ, ಆ ಛತ್ತೀಸ ಲಿಂಗಂಗಳನೆ ಶ್ರದ್ಧಾದಿ ಛತ್ತೀಸಭಕ್ತಿಗಳಲ್ಲಿ ಕೂಟವ ಮಾಡಿ, ಇಂತು ಲಿಂಗಾಂಗ ಭಕ್ತಿಗಳನೆ ಸತ್ಕ್ರಿಯಾ, ಸಮ್ಯಜ್ಞಾನ, ಸತ್ಕಾಯಕ, ಸತ್ಪಾತ್ರಭಿಕ್ಷದಲ್ಲಿ ಸಮರಸವ ಮಾಡಿ, ಆ ಮಹಾಜ್ಞಾನವ ಸಾಧಿಸಿ, ಆ ಮಹಾಜ್ಞಾನದ ಬಲದಿಂದ ಪೃಥ್ವೀಸಂಬಂಧವಾದ ಕರ್ಮೇಂದ್ರಿಯಂಗಳು, ಅಪ್ಪುತತ್ವಸಂಬಂಧವಾದ ಜ್ಞಾನೇಂದ್ರಿಯಂಗಳು, ಅಗ್ನಿತತ್ವಸಂಬಂಧವಾದ ವಿಷಯಂಗಳು. ವಾಯುತತ್ವಸಂಬಂಧವಾದ ಪ್ರಾಣವಾಯುಗಳು, ಆಕಾಶತತ್ವಸಂಬಂಧವಾದ ಕರಣಂಗಳು, ಭಾನುತತ್ವÀಸಂಬಂಧವಾದ ಉದರವೆಂಬ ಭುತಂಗಳು, ಶಶಿತತ್ವಸಂಬಂಧವಾದ ಶ್ವೇತವರ್ಣ ಮೊದಲಾದ ವರ್ಣಂಗಳು, ಆತ್ಮತತ್ವಸಂಬಂಧವಾದ ಸಮಸ್ತನಾದಂಗಳು ಇಂತು ಸಮಸ್ತತತ್ವಂಗಳು ಕೂಡಲಾಗಿ ನಾಲ್ವತ್ತುತತ್ವವೆನಿಸುವವು. ಈ ತತ್ವಂಗಳ ಶಿವತತ್ವ, ಅನಾದಿಶಿವತತ್ವ, ಅನಾದಿನಿಷ್ಕಲಪರಶಿವತತ್ವ, ಅನಾದಿ ನಿಷ್ಕಲಪರಾತ್ಪರಶಿವತತ್ವವೆಂಬ, ಚತುರ್ವಿಧ ತತ್ವಸ್ವರೂಪ ಗುರು-ಲಿಂಗ-ಜಂಗಮ-ಪ್ರಸಾದವ ಕೂಡಿಸಿ, ಆ ಮಹಾಜ್ಞಾನದಿಂ ನೋಡಿದಲ್ಲಿ ನಾಲ್ವತ್ತುನಾಲ್ಕು ತತ್ವಸ್ವರೂಪಿನಿಂದ ಒಂದು ಚಿದಂಗವೆನಿಸುವುದಯ್ಯ. ಆ ಚಿದಂಗದ ಷಟ್ಚಕ್ರಂಗಳಲ್ಲಿ ಶ್ರೀಗುರುಲಿಂಗಜಂಗಮ ಕೃಪೆಯಿಂದ ಮೂರ್ತಿಗೊಂಡಿರುವ ಐವತ್ತಾರು ಪ್ರಣಮಂಗಳೆ ಸಾಕಾರಲೀಲೆಯಧರಿಸಿ, ನವಕೃತಿಸಂಬಂಧವಾದ ಅನಾದಿಮೂಲಪ್ರಣಮವ ಕೂಡಿ ಏಕಸ್ವರೂಪಿನಿಂದ ಐವತ್ತೇಳುಲಿಂಗಸ್ವರೂಪಪ್ರಣಮವನೊಳಕೊಂಡು ಒಂದು ಚಿದ್ಘನಲಿಂಗವೆನಿಸುವುದಯ್ಯ. ಇಂತು ಅಂಗಲಿಂಗವೆಂಬ ನೂರೊಂದು ಸ್ಥಲಕುಳಂಗಳ ವಿಚಾರಿಸಿ, ಶರಣರೂಪಿನಿಂದ ತನ್ನಾದಿ ಮಧ್ಯಾವಸಾನವ ತಿಳಿದು, ಕರ್ತುಭೃತ್ಯತ್ವದ ಸದ್ಭಕ್ತಿಯ ವಿಚಾರವನರಿದು, ದ್ವಾದಶಾಚಾರದ ವರ್ಮವನರಿದು, ಕರ್ತುಭೃತ್ಯತ್ವಾಚಾರ ಸದ್ಭಕ್ತಿಯೆಂಬ ನಿಜಸಮಾಧಿಯಲ್ಲಿ ನಿಂದು, ನಿರವಯಲ ಕೂಡುವಂಥಾದೆ ತತ್ತ್ವದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ನಿಜಚೈತನ್ಯಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು ಆಧಾರ ತೊಡಗಿ ಆಜ್ಞಾಚಕ್ರವೇ ಕಡೆಯಾಗುಳ್ಳ ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು. ಆಜ್ಞಾಚಕ್ರದತ್ತಣಿಂದೆ ಊರ್ಧ್ವ ಭಾಗವಾದ ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ ಸಹಸ್ರದಳ ಕಮಲವನು ಭಾವಿಸುವುದು. ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ ಚಂದ್ರಮಂಡಲವನು ಧ್ಯಾನಿಸುವುದು. ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು. ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.
--------------
ಅಕ್ಕಮಹಾದೇವಿ
-->