ಅಥವಾ

ಒಟ್ಟು 131 ಕಡೆಗಳಲ್ಲಿ , 35 ವಚನಕಾರರು , 80 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರದರು. ಭಾಷೆ ಬಳಸಿ ಹಂಗು ಹಳಸಿಹೋಯಿತ್ತು. ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆ ಕೊಟ್ಟಿಹೆನೆಂಬ ಶಬ್ದ ಅಳಿದರುಳಿಯಿತು.
--------------
ಚಂದಿಮರಸ
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿ ಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
--------------
ಕರುಳ ಕೇತಯ್ಯ
ಪೃಥ್ವಿ, ಸದ್ಯೋಜಾತನ ಹಂಗು. ಜಲ, ವಾಮದೇವನ ಹಂಗು. ಅಗ್ನಿ, ಅಘೋರನ ಹಂಗು. ವಾಯು, ತತ್ಪುರುಷನ ಹಂಗು. ಆಕಾಶ, ಈಶಾನ್ಯನ ಹಂಗು. ಪಂಚಬ್ರಹ್ಮನ ಮರೆದು, ಓಂಕಾರ ಬ್ರಹ್ಮವನರಿ, ಐಘಟದೂರ ರಾಮೇಶ್ವರಲಿಂಗವ.
--------------
ಮೆರೆಮಿಂಡಯ್ಯ
ಒಂದೆ ಕಂಬದ ನಡುವೆ ಹಲವು ಬಿದಿರುಗೂಡಿ, ಅಗಲಕ್ಕೆ ಹೊಲಬಾಯಿತ್ತು ನೋಡಾ. ಬಿಸಿಲ ಕಾಯದು, ಗಾಳಿಯ ತಡೆಯದು, ಮಳೆಗೆ ನೆನೆವುತ್ತಿದೆ ನೋಡಾ. ಈ ಸತ್ತಿಗೆಯ ಹರಕು ನಿಜಸತ್ಯವಾಗಿ, ಐಘಂಟೇಶ್ವರಲಿಂಗವನರಿದಲ್ಲದೆ ಸತ್ತಿಗೆಯ ಕಾವಿನ ಹಂಗು ಹರಿಯದು ನೋಡಾ.
--------------
ಸತ್ತಿಗೆ ಕಾಯಕದ ಮಾರಯ್ಯ
ಪರಮನ ಹಂಗು, ಪ್ರಾಣದ ಸಂಗ ಉಂಟೆಂದೆನಲಿಲ್ಲ ಬಸವಾ. ಪರಶಿವನ ವಿಲಾಸದಲ್ಲಿರಲೊಂದುದಿನ ಬಸವಾ ಎಂಬ ಮೂರಕ್ಷರವ ಕಂಡೆ. ಬಸವಾ ಎಂಬ ಮೂರಕ್ಷರವ ಕಂಡು, ಪ್ರಾಣಲಿಂಗಸಂಬಂಧಿಯಾದೆನು ನಾನು ಬಸವಾ. ಆ ಪ್ರಣವದ ಹೊಳಹನರಿಯಹೋದಡೆ, ಆ ಬೆಳಗು ಅಲ್ಲಿ ಕಾಣಬಂದಿತ್ತಯ್ಯಾ ಬಸವಾ. ಸಂಗಯ್ಯಾ, ಸ್ವಯಲಿಂಗಸಂಬಂಧಿಯಾನಾದೆನು.
--------------
ನೀಲಮ್ಮ
ಹಿಂದೆ ಬಂದವರೆಲ್ಲರೂ ಯೋನಿಯ ಹಂಗು. ಸಕಲ ಶಾಸ್ತ್ರಜ್ಞರೆಲ್ಲಾ, ವೇದ ವೇದಾಂತರೆಲ್ಲಾ, ಹಿಂದೆ ಬಂದ ಯೋನಿಯ ಮರೆದು, ಮುಂದಕ್ಕೆ ಯೋನಿಗಾಗಿ ಲಂದಳಗಿತ್ತಿಯಂತೆ ಬಂದ ನಿಂದ ಭಕ್ತರಲ್ಲಿ ಹೊಸತನದಂದವ ಹೇಳಿ, ಎಡಗಾಲಸಂದಿಯ ಮಚ್ಚಿ, ಅನಂಗನ ಬಲೆಯೊಳಗಾದವರಿಗೆ ಘನಲಿಂಗನ ಸುದ್ಧಿಯೇಕೆ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ವೇದ ಯೋನಿಯ ಹಂಗು. ಶಾಸ್ತ್ರ ಯೋನಿಯ ಹಂಗು. ಪುರಾಣ ಯೋನಿಯ ಹಂಗು. ಆಗಮ ಯೋನಿಯ ಹಂಗು. ನಾದದಿಂದ ಉದಿಸಿದವು ಶ್ರೋತ್ರದ ಹಂಗು. ಹೇಳುವುದು ವೆಜ್ಜ, ಕೇಳುವುದು ವೆಜ್ಜ, ತಾ ಹಿಂದೆ ಬಂದುದು ವೆಜ್ಜ, ಈಗ ನಿಂದು ಮಾಡುವುದು ವೆಜ್ಜ. ಇಂತೀ ವೆಜ್ಜದಜ್ಜೆಯ ಗುದ್ದಿನಲ್ಲಿ ಬಿದ್ದವರಿಗೆ ನಿರ್ಧರವಿಲ್ಲ ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಗುರುಪೂಜೆ ಮಾಡುವಾತ ಶಿಷ್ಯನಲ್ಲ. ಲಿಂಗಪೂಜೆ ಮಾಡುವಾತ ಶರಣನಲ್ಲ. ಜಂಗಮಪೂಜೆ ಮಾಡುವಾತ ಭಕ್ತನಲ್ಲ. ಇಂತೀ ತ್ರಿಮೂರ್ತಿಗಳ ಪಾದೋದಕ ಪ್ರಸಾದವ ಕೊಂಬುವಾತ ಪ್ರಸಾದಿಯಲ್ಲ. ಇಂತೀ ಚತುರ್ವಿಧದ ಹಂಗು ಹಿಂಗದೆ ಭವಹಿಂಗದು ಮುಕ್ತಿದೋರದು. ಮತ್ತಂ, ಇಂತೀ ತ್ರಿವಿಧ ಪೂಜೋಪಚಾರಂಗಳಮಾಡಿ ಪಾದೋದಕ ಪ್ರಸಾದವ ಕೊಳ್ಳದವರಿಗೆ ಭವಹಿಂಗದು ಮುಕ್ತಿದೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಾಯದ ಗತಿಯಿಲ್ಲ, ನಡೆವವನಲ್ಲ. ಅಕಾಯಚರಿತ್ರನು, ಅನುಪಮಲಿಂಗೈಕ್ಯನು. ಕುಲ, ಛಲ, ವಿದ್ಯಾಮದ, ಮೋಹ, ಬಲುವಿಡಿಯ. ನಿರಹಂಕಾರವಿಡಿದು, ನಿರಂಗ ಸುಜ್ಞಾನ ಒಡಲಾ[ಗಿ] ಭರಿತಪ್ರಸಾದವಲ್ಲದನ್ಯವನರಿಯ. ಇದಕ್ಕೆ ಶ್ರುತಿ: ಶುಚಿರೂಪಂ ನಚಾಜ್ಞಾನಂ ಅರ್ಪಿತಾನರ್ಪಿತಂ ತಥಾ ಯಥಾ ವರ್ತೇತ ಯಸ್ಯಾಪಿ ಶಿವೇನ ಸಹ ಮೋದತೇ ಎಂದುದಾಗಿ ಅಂಗರುಚಿಯ ಹಂಗು ಹಿಂಗಿ ಲಿಂಗರುಚಿಯ ಸಂಗವಾದ ಸುಸಂಗಿ ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಶರಣ.
--------------
ಆದಯ್ಯ
ಕುರುಹುಳ್ಳನ್ನಕ್ಕ ಸಮಯದ ಹಂಗು, ಅರಿದಹೆನೆಂಬನ್ನಕ್ಕ ಆತ್ಮದ ಹಂಗು, `ಅಲ್ಲ' `ಅಹುದು' ಎಂಬನ್ನಕ್ಕ ಎಲ್ಲರ ಹಂಗು, ಗುಹೇಶ್ವರನೆಂಬನ್ನಕ್ಕ ಲಿಂಗದ ಹಂಗು ಬೇಕು ಘಟ್ಟಿವಾಳಣ್ಣಾ.
--------------
ಅಲ್ಲಮಪ್ರಭುದೇವರು
ಅಷ್ಟವಿಧಾರ್ಚನೆ ಷೋಡಶೋಪಚಾರವ ಅಂದಂದಿನ ಕೃತ್ಯವ ಅಂದಂದಿಗೆ ಆನು ಮಾಡಿ ಶುದ್ಧನಯ್ಯಾ. ಹಂಗು ಹರಿಯಿಲ್ಲದ ಕಾರಣ, ಕೂಡಲಸಂಗಮದೇವ ನಿಷ್ಫಲದಾಯಕನಾಗಿ ಆನು ಮಾಡಿ ಶುದ್ಧನಯ್ಯಾ.
--------------
ಬಸವಣ್ಣ
ಲಿಂಗವನರಿದೆಹೆನೆಂದಡೆ ಗುರುವಿಗೆ ಹಂಗು, ಗುರುವನರಿದೆಹೆನೆಂದಡೆ ಲಿಂಗದ ಹಂಗು, ಉಭಯವ ಮೀರಿ ಕಂಡೆಹೆನೆಂದಡೆ ಬೇರೊಂದೊಡಲುಂಟು. ಒಡಲು ಒಡೆದಲ್ಲದೆ ಬೇರೊಂದೆಡೆಯಿಲ್ಲ ಎಂದನಂಬಿಗ Zõ್ಞಡಯ್ಯ.
--------------
ಅಂಬಿಗರ ಚೌಡಯ್ಯ
ಓಹೋ ನಮಃ ಶಿವಾಯ,_ ಮಹದಾಕಾಶದ ಮರೆಯಲ್ಲಿರ್ದ ಶಾಂತ್ಯರ್ಕನ ನಿಲವೊ ! ದಶಮರುತನ ಹೊಯಿಲಿಲ್ಲದೆ, ತಾನೆ ಲಿಂಗದ ಜ್ಞಾನಜ್ಯೋತಿಯ ನಿಲವೊ ! ತನ್ನಿಂದ ತಾನಾಗಿ ಮುಕ್ತಿಯೆ ಕರಿಗೊಂಡ ಮುಕ್ತಿಯ ಮುತ್ತಿನ ಧವಳಕಾಂತಿಯ ನಿಲವೊ ! ರುದ್ರಾಕ್ಷಿಯ ಹಂಗು ಬೇಡವೆಂದು ಹೊದ್ದ ಚರ್ಮದ ಹೊದಿಕೆಯಂ ತೆಗೆದ ಗಿಟಿ ಗಿಟಿ ಜಂತ್ರದ ನಿಲವೊ ! ಅಲ್ಲ, ತನ್ನ ನಿಲವನರಿಯದೆ ವಾದಿಸುತ್ತಿರಲು ಉರಿಲಿಂಗೋದ್ಭವವಾದ ಉರಿಲಿಂಗದ ನಿಲವೋ ! ಆವ ನಿಲವೆಂದರಿಯಬಾರದು ! ಗುಹೇಶ್ವರನ ಕಂಗಳಿಗೆ ಒಂದಾಶ್ಚರ್ಯ ತೋರಿತ್ತು ಕಾಣಾ ಸಂಗನಬಸವಣ್ಣಾ !
--------------
ಅಲ್ಲಮಪ್ರಭುದೇವರು
ಬಲ್ಲೆ ಬಲ್ಲೆ ನಿನ್ನ, ಜನನ ಮರಣಕ್ಕೆ ಹೊರಗಾದೆನೆಂಬುದ. ಬಲ್ಲೆ ಬಲ್ಲೆ ನಿನ್ನ, ಕಾಲಕಲ್ಪಿತಕ್ಕೆ ಹೊರಗಾದೆನೆಂಬುದ. ಬಲ್ಲೆ ಬಲ್ಲೆ, ನೀನು ಮಹಾನಿತ್ಯ ಮಂಗಳನೆಂಬುದ. ಬಲ್ಲೆ ಬಲ್ಲೆ, ನೀನು ಸತ್ಯಶುದ್ಧದೇವನೆಂಬುದ. ಬಲ್ಲೆ ಬಲ್ಲೆ, ನೀನು ಫಲಪದವ ಮೀರಿದನೆಂಬುದ. ಬಲ್ಲೆ ಬಲ್ಲೆ, ನೀನು ಉರುತರ ಲೋಕಪ್ರಕಾಶನೆಂಬುದ. ಬಲ್ಲೆ ಬಲ್ಲೆ, ನೀನು ಪರಿಭವಕ್ಕೆ ಬಾರನೆಂಬುದ. ಬಲ್ಲೆ ಬಲ್ಲೆ, ನೀನು ಕಾಲನ ಕಮ್ಮಟಕ್ಕೆ ಸಲ್ಲನೆಂಬುದ. ಎನ್ನ ಬಲ್ಲತನಕ್ಕೆ ಮಂಗಳವನೀಯೆ ಉತ್ತರ ದಕ್ಷಿಣ ಪೂರ್ವ ಪಶ್ಚಿಮವೆಂಬ ದ್ವಾರಂಗಳಲ್ಲಿ ತಪ್ಪದೆ ಬಪ್ಪಾಗ ಆನು ನಿನ್ನೊಡನೆ ಬಾರದೆ ಉಳಿದುದುಂಟೆ? ಆನೇನು ಭೇದವಾಗಿಪ್ಪೆನೆಲೆ ಅಯ್ಯಾ. ಸಂದು ಸವೆದು ಹಂಗು ಹರಿದು ಲೀಯ ಒಳಗಾಗಿದ್ದ ಎನ್ನ ನೋಡದೆ ಇಪ್ಪುದು ಅದಾವ ಗರುವತನ? ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ತುಂಬಿದ ನಾಳಿ ಬಾಯ ಹಂಗಾದಂತೆ, ಬಾಯ ಬೆಣ್ಣೆಯ ಹಂಗಿಗನಾಗಿ, ನಳಿಗೆ ಬಾಯಿ ಬೆಣ್ಣೆಯೆರೆವಳ ಹಂಗು. ಮಂಡೆಯ ಶೂಲೆ ಇನ್ನೆಂದಿಗೆ ಹರಿಗು ? ಈ ಅಬ್ಥಿಸಂದ್ಥಿಯ ಹೇಳು, ಅಲೇಖನಾದ ಶೂನ್ಯ ಕಲ್ಲಿನ ಮರೆ ಬೇಡ
--------------
ವಚನಭಂಡಾರಿ ಶಾಂತರಸ
ಇನ್ನಷ್ಟು ... -->