ಅಥವಾ

ಒಟ್ಟು 51 ಕಡೆಗಳಲ್ಲಿ , 15 ವಚನಕಾರರು , 41 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ತನ್ನ ತಾನರಿಯದೆ, ತನ್ನ ಇಷ್ಟಲಿಂಗದ ಹೊಲಬು ತಿಳಿಯದೆ, ಕಾಮವ ತೊರೆಯದೆ, ಹೇಮವ ಜರೆಯದೆ, ನಾವು ಹರ ಗುರು ಚರ ಷಟ್‍ಸ್ಥಲದ ವಿರಕ್ತರೆಂದು ಚೆನ್ನಾಗಿ ನುಡಿದುಕೊಂಡು, ಕಾವಿ ಕಾಷಾಯಾಂಬರವ ಹೊದ್ದು, ಶಂಖ ಗಿಳಿಲು ದಂಡಾಗ್ರವ ಹೊತ್ತು, ಕೂಳಿಗಾಗಿ ನಾನಾ ದೇಶವ ತಿರುಗಿ, ಕಾಂಚನಕ್ಕೆ ಕೈಯೊಡ್ಡುವ ಪಂಚಮಹಾಪಾತಕರನು ಕಾಗೆಯ ಗರ್ಭದಲ್ಲಿ ಹುಟ್ಟಿಸಿ ಕಾಕಾ ಎಂದು ಕೂಗಿಸುತಿರ್ಪ[ನು] ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಪರಶಿವನ ಜ್ಞಾನಚಕ್ಷುವಿನಲ್ಲಿ ಉದಯವಾದ ರುದ್ರಾಕ್ಷೆಯ ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ ಧರಿಸಿದ ಶಿವಶರಣನೇ ರುದ್ರನು. ಆ ರುದ್ರಾಕ್ಷೆಯ ಜಪಿಸಿದಾತನೇ ಸದ್ಯೋನ್ಮುಕ್ತನು. ಇದು ಕಾರಣ, ಅಜ ಹರ ಸುರ ಮನು ಮುನೀಶ್ವರರು ಶ್ರೀವಿಭೂತಿ ರುದ್ರಾಕ್ಷೆಯನೆ ಧರಿಸಿ ಶಿವಲಿಂಗಾರ್ಚನೆಯ ಮಾಡುತ್ತಿಪ್ಪರು. ಪ್ರಮಥಗಣ ರುದ್ರಗಣ ಮುಖ್ಯವಾದ ಗಣಾದ್ಥೀಶ್ವರರು ವಿಭೂತಿ ರುದ್ರಾಕ್ಷೆಯನೆ ಧರಿಸಿ, ಪ್ರಣವ ಪಂಚಾಕ್ಷರಿಯನೆ ಜಪಿಸಿ, ಪ್ರಣವ ಸ್ವರೂಪಿಗಳಾಗುತ್ತಿಪ್ಪರು. ನೋಡಿದವರು ಮುಟ್ಟಿದವರು ಧರಿಸಿದವರು ಜಪಿಸಿದವರೆಲ್ಲ ಸಕಲ ಪ್ರಪಂಚನಳಿದು ಪರಶಿವ ಸ್ವರೂಪರಪ್ಪುದು ತಪ್ಪದು ನೋಡಾ. ಇದು ಕಾರಣ, ನಾನು ವಿಭೂತಿ ರುದ್ರಾಕ್ಷೆಯನೆ ಧರಿಸಿ, ಶಿವಲಿಂಗಾರ್ಚನೆಯನೆ ಮಾಡಿ ಪ್ರಣವ ಪಂಚಾಕ್ಷರಿಯನೆ ಜಪಿಸುತ್ತಿದ್ದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹರಿ ನಾನೆಂದಲ್ಲಿ ಭವಮದಗಜಕ್ಕೆ ಹರಿಯಲ್ಲದೆ, ದಶಾವತಾರದ ಹರಿಯಲ್ಲ ನೋಡಾ. ಹರ ನಾನೆಂದಲ್ಲಿ ಸರ್ವಭಾವನಾವಿರಹಿತ ನಾನಲ್ಲದೆ, ಪಂಚಕೃತ್ಯಾದ್ಥಿಕಾರಿ ಹರನಲ್ಲ ನೋಡಾ. ನರ ನಾನೆಂದಲ್ಲಿ ಉತ್ಪತ್ತಿವಿರಹಿತ ನಾನಲ್ಲದೆ, ಉತ್ಪತ್ತ್ಯದ್ಥಿಕಾರಿ ನರ ನಾನಲ್ಲ ನೋಡಾ. ತೋರುವ ಸಚರಾಚರ ನಾನೆಂದಲ್ಲಿ ಜಡಾಜಡ ನಾನಲ್ಲದೆ, ಜನನ ಮರಣ ಪೊದ್ದಿ ಸಚರಾಚರ ನಾನಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ನಾದಪ್ರಿಯಂ ನಾದಮಯಂ ನಾದೋರ್ಲಿಂಗ ನಗೇಶ್ವರಂ ಆದಿ ಮಧ್ಯಾಂತರಹಿತಂ ವೇದೋ ವೇದವಿದಂ ವರಂ ಮಂತ್ರಮೂರ್ತಿ ಮಹಾರುದ್ರಂ ಓಮಿತಿ ಜ್ಯೋತಿರೂಪಕಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕನಕಗಿರಿನಿವಾಸಂ ಕಾಮನಾಶಂ ಕಮಲವೈರಿಭೂಷಂ ವಿನುತನಾಮಧೇಯಂ ಅನುಪಮಾವತಾರಸಾರಂ ಪರಮ ವೀರಶೈವಭಕ್ತಿಭಾವಂ ಜನಿತಪುಣ್ಯಕಾಯಂ ಭವರೋಗವೈದ್ಯಂ ಭವಹರಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಓಂಕಾರ ಬಿಂದು ಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿಯಃ ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ ನಮಂತಿ ಋಷಯೋ ದೇವಾ ನಮಂತ್ಯಪ್ಸರಸಾಂಗಣಾಃ ನಮಂತಿ ದೇವಾ ದೇವೇಶಂ `ನ' ಕಾರಾಯ ನಮೋ ನಮಃ ಮಹಾದೇವಂ ಮಹಾತ್ಮಾನಂ ಮಹಾಜ್ಞಾನಪರಾಯಣಂ ಮಹಾಪಾಪ ಹರಂ ನಿತ್ಯಂ `ಮ' ಕಾರಾಯ ನಮೋ ನಮಃ ಶಿವಂ ಶಾಂತಧರಂ ದೇವಂ ಲೋಕಾನುಗ್ರಹ ಕಾರಣಂ ಶಿವಮೇಕಂ ಪರಬ್ರಹ್ಮ `ಶಿ'ಕಾರಾಯ ನಮೋ ನಮಃ ವಾಹನಂ ವೈಷಭೋ ಯಸ್ಯ ವಾಸುಕಿಃ ಕಂಠಭೂಷಣಂ ವಾಮಶಕ್ತಿಧರಂ ದೇವಂ `ವ'ಕಾರಾಯ ನಮೋ ನಮಃ ಯತ್ರ ಯತ್ರ ಸ್ಥಿತೋ ದೇವಃ ಸರ್ವವ್ಯಾಪಿ ಮಹೇಶ್ವರಃ ಯೋ ಗುರುಃ ಸರ್ವದೇವಾನಾಂ `ಯ'ಕಾರಾಯ ನಮೋ ನಮಃ ವೇದ: ನಕಾರಾಯ ಮಕಾರಾಯ ಶಿಕಾರಾಯ ತಥೈವ ಚ ವಕಾರಾಯ ಯಕಾರಾಯ ಓಂಕಾರಾಯ ನಮೋ ನಮಃ ವೇದಮಾತಾ ಚ ಗಾಯಿತ್ರೀ ಮಂತ್ರಮಾತಾ ಷಡಕ್ಷರೀ ಸರ್ವದೇವಪಿತಾ ಶಂಭುಃ ಭರ್ಗೋ ದೇವಸ್ಯ ದ್ಥೀಮಹಿ ಷಡಕ್ಷರಮಿದಂ ಪುಣ್ಯಂ ಯಃ ಪಠೀತ್ ಶಿವಸನ್ನಿಧೌ ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೆ ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎನ್ನದಿರ್ದಡೆ ಭವಬಂಧನ ಇಹಪರ ಸಂಸಾರಾದಿ ಪ್ರಪಂಚಬಂಧನ ಬಿಡದು. ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದಡೆ ಮೋಕ್ಷಸಿದ್ಧಿ. ಸಾಕ್ಷಿ: ಷಡಕ್ಷರಜಪಾನ್ನಾಸ್ತಿ ಸರ್ವೇಷಾಂ ಬಂಧನಂ ತಥಾ ತನ್ಮಂತ್ರಂ ಚ ಜಪನ್ ಭಕ್ತ್ಯಾ ಸದ್ಯೋ ಮುಕ್ತೋ ನ ಸಂಶಯಃ ಎಂಬುದಾಗಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯ ಬಂದು ಮೋಕ್ಷ ತಾನೇ ಓಂ ನಮಃ ಶಿವಾಯ.
--------------
ಉರಿಲಿಂಗಪೆದ್ದಿ
ಪಂಚವಕ್ತ್ರಂ ದಶಭುಜಂ ದಶಪಂಚನೇತ್ರಂ ದ್ವಿಪಾದಂ ತನುವೇಕಂ ಶುದ್ಧಸ್ಫಟಿಕಪ್ರದ್ಯುಕ್ತಂ ಪ್ರಭಾಮಯಮೂರ್ತಿ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನರರ ಹೊಗಳಿದಡೆ ಗತಿಯಿಲ್ಲ, ಸುರರ ಹೊಗಳಿದಡೆ ಗತಿಯಿಲ್ಲ. ಹರಿ ಬ್ರಹ್ಮ ಇಂದ್ರ ಚಂದ್ರಾದಿಗಳ ಹೊಗಳಿದಡೆ ಗತಿಯಿಲ್ಲ. ಪರಸತಿ ಪರಧನಂಗಳಿಗಳುಪಿ, ದುರ್ಯೋಧನ ಕೀಚಕ ರಾವಣರೆಂಬವರು ಮರಣವಾಗಿ ಹೋದವರ ಸಂಗತಿಯ ಹೇಳಿಕೇಳಿದಡೇನು ಗತಿಯಿಲ್ಲ. ಶ್ರೀಗುರುವಿನ ಚರಣವನರಿಯದ ಕಿರುಕುಳದೈವದ ಬೋಧೆಯ ಹೇಳಿ, ಆನು ಬದುಕಿದೆನೆಂಬ ಕವಿ ಗಮಕಿ ನಾನಲ್ಲ. ಹರ ನಿಮ್ಮ ನೆನೆವ ಶರಣರ ಚರಣದ ಗತಿಯಲ್ಲಿಪ್ಪೆನೆಂದ, ಕಲಿದೇವರದೇವಯ್ಯ.
--------------
ಮಡಿವಾಳ ಮಾಚಿದೇವ
ನಿಮ್ಮ ತಂದಿ ಸತ್ತದ್ದು ನೋಡುತ್ತಿದ್ದಿ, ನಿಮ್ಮ ತಂದಿಯ ತಂದಿ ಸತ್ತದ್ದು ಕಾಣುತ್ತಿದ್ದಿ, ನಿಮ್ಮ ಅಜ್ಜ ಪಣಜ ಸತ್ತದ್ದು ಕೇಳುತ್ತಿದ್ದಿ, ನಿಮ್ಮ ತಾಯಿ ಸತ್ತದ್ದು ನೋಡುತ್ತಿದ್ದಿ, ನಿಮ್ಮ ತಾಯಿಯ ತಾಯಿ ಸತ್ತದ್ದು ಕಾಣುತ್ತಿದ್ದಿ, ನಿಮ್ಮ ತಾಯಿಯ ಅಜ್ಜಿ ಪಣಜಿ ಸತ್ತದ್ದು ಕೇಳುತ್ತಿದ್ದಿ. ನಿನ್ನ ಸತಿಸುತರು ಒಡಹುಟ್ಟಿದ ಬಂಧುಗಳು ಸ್ನೇಹಿತರು ಬೀಗರು ಮೊದಲಾದ ಸಕಲಲೋಕಾದಿಲೋಕಂಗಳು ನಿಮ್ಮ ಕಣ್ಣಮುಂದೆ ವೃಕ್ಷದ ಪರ್ಣಗಳು ಉದುರಿದ ಹಾಗೆ ಸಕಲರು ಅಳಿದುಹೋಗುವುದ ನೋಡುತ್ತಿದ್ದಿ. ಇದಲ್ಲದೆ ದೃಷ್ಟಾಂತ: ಒಬ್ಬ ರೋಮಜಋಷಿಗೆ ಮೂರುವರೆಕೋಟಿ ರೋಮಂಗಳುಂಟು, ಅಂತಹ ಋಷಿಗೂ ಕೃತಯುಗ, ತ್ರೇತಾಯುಗ, ದ್ವಾಪರ, ಕಲಿಯುಗವೆಂಬ ಚತುರ್ಯುಗ ಪ್ರಳಯವಾದಲ್ಲಿ ಒಂದು ರೋಮ ಉದುರುವದು. ಹೀಗೆ ಈ ಪರಿಯಲ್ಲಿ ಮೂರುವರೆಕೋಟಿ ರೋಮಂಗಳು ಉದುರಿದಲ್ಲಿ ಆ ರೋಮಋಷಿಯೆಂಬ ಮುನೀಶ್ವರನು ಪ್ರಳಯವಾಗುವನು. ಮತ್ತೆ ದೇವಲೋಕದ ಸನಕ ಸನಂದಾದಿ ಮುನಿಜನಂಗಳು ಅನಂತಕೋಟಿ ಋಷಿಗಳು ಬ್ರಹ್ಮ, ವಿಷ್ಣು, ರುದ್ರ, ಈಶ್ವರ, ಸದಾಶಿವ ಮೊದಲಾದ ತೆತ್ತೀಸಕೋಟಿ ದೇವರ್ಕಳು ಇಂತಿವರೆಲ್ಲರು ಎತ್ತಲಾನುಕಾಲಕ್ಕೆ ಮರಣಕ್ಕೆ ಒಳಗಾದರು. ವೇದಾಗಮ ಶಾಸ್ತ್ರ ಪುರಾಣ ಶ್ರುತಿ ಪ್ರಮಾಣಗಳಿಂದ ಮತ್ತೆ ಹರ, ಗುರು, ಪುರಾತನರ ವಾಕ್ಯದಿಂದ ನಿಮ್ಮ ಉಭಯ ಕರ್ಣದಿಂ ಕೇಳುತ್ತಿದ್ದಿ. ಇಂತೀ ಎಲ್ಲವನು ಕಂಡು ಕೇಳಿ ಗಾಢನಿದ್ರೆಯ ಮನುಷ್ಯನ ಹಾಂಗೆ ನಿನ್ನ ನಿಜಸ್ವರೂಪವ ಮರದು ತ್ರಿವಿಧಮಲವ ಕಚ್ಚಿ ಶುನಿ ಶೂಕರನ ಹಾಗೆ ಕಚ್ಚಿ ಕಡಿದಾಡಿ ಸತ್ತು ಹೋಗುವ ವ್ಯರ್ಥಗೇಡಿ ಮೂಳ ಹೊಲೆಮಾದಿಗರ ಕಿವಿ ಹರಿದು, ಕಣ್ಣುಗುಡ್ಡಿಯ ಮೀಟಿ, ನೆತ್ತಿಯ ಮೇಲೆ ಮೂರು ಪಟ್ಟೆಯನೆ ಕೆತ್ತಿ ಅವನ ಮುಖದ ಮೇಲೆ ಹೆಂಡಗಾರನ ಮುಖದಿಂದ ಲೊಟ್ಟಲೊಟ್ಟನೆ ಉಗುಳಿಸಿ ಪಡುವಲದಿಕ್ಕಿಗೆ ಅಟ್ಟೆಂದ ಕಾಣಾ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹರ ಹರ ಶಿವ ಶಿವ ಗುರುವೆ ಕರಸ್ಥಲದ ಶಾಂತಲಿಂಗ, ಜಂಗಮ ಭಕ್ತ ಶರಣಗಣಂಗಳ ಚರಣವ ನೆನೆಯದೆ, ಧರೆಯ ಮೇಲೆ ನೆಲಸಿಪ್ಪ ಭವಿಶೈವದೈವಂಗಳ ನೆನೆವ ನರಕಿನಾಯಿಗಳನೇನೆಂಬೆನಯ್ಯಾ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಹರ ತನ್ನ ರೂಪ ತೋರಬೇಕೆಂದು, ಗುರುರೂಪಾಗಿ ಬಂದು ಮನಸ್ಥಲಕ್ಕೆ ಮಂತ್ರವಾದ, ತನುಸ್ಥಲಕ್ಕೆ ಪ್ರಸಾದವಾದ, ಕರಸ್ಥಲಕ್ಕೆ ಲಿಂಗವಾದ ಇಂತೀ ತ್ರಿವಿಧದಲ್ಲಿ ತ್ರಿವಿಧ ಸಾಹಿತ್ಯವಾದನಯ್ಯಾ ಕೂಡಲಚೆನ್ನಸಂಗನ[ಲ್ಲಿ] ಬಸವಣ್ಣನು.
--------------
ಚನ್ನಬಸವಣ್ಣ
ಶಿವಶಿವಾಯೆಂಬ ಮಂತ್ರವೆನಗೆ ಅಮೃತಾರೋಗಣೆಯೋ ಎನ್ನ ತಂದೆ. ಹರ ಹರಾ ಎಂಬ ಮಂತ್ರವೆನಗೆ ಅಮೃತಾರೋಗಣೆಯೋ ಎನ್ನ ತಂದೆ. ಶ್ರೀ ವಿಭೂತಿ ರುದ್ರಾಕ್ಷಿ ಭಕುತಿಯ ಮುಕುತಿಗೆ ಸಾಧನವೋ ಎನ್ನ ತಂದೆ, ಎನಗಿದೆ ಗತಿಮತಿ ಚೈತನ್ಯ, ಕೂಡಲಸಂಗಮದೇವಯ್ಯಾ, ನಿಮ್ಮ ನಾಮದ ರುಚಿ ತುಂಬಿತ್ತೊ ಎನ್ನ ತನುವ.
--------------
ಬಸವಣ್ಣ
ಜ್ಞಾನಗಮ್ಯಂ ದೃಢಪ್ರಾಜ್ಞಂ ದೇವದೇವಂ ತ್ರಿಲೋಚನಂ ಮಹಾದೇವಂ ಮಹಾತ್ಮಾನಂ ಮಹಾಜ್ಞಾನ ಪರಾತ್‍ಪರಂ ಮಹಾಪಾಪಹರಂ ದೇವಂ ಮದ್ದೇವ ದೇವದೇವಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆ ಪರಶಿವನ ಅಷ್ಟಾಂಗದಿಂದಾದ ಬ್ರಹ್ಮಾಂಡದ ಸ್ಥಿರ ಚರ ಪ್ರಾಣಿಗಳ ಲಯವ ನೋಡಿ ಚಿಂತೆಯೊಳಗಾಗಿ, ಕಂತುಹರನ ಧ್ಯಾನವ ಮಾಡಲು, ಆ ಹರ ಗುರುರೂಪವ ತಾಳ್ದು ಬಂದು, ತನ್ನ ಚಿಂತಿಸಿದ ಸುಜ್ಞಾನಿಗಳಿಗೆ, ಮನವನೊಬ್ಬುಳಿಗೊಳಿಸುವುದಕ್ಕೆ ಕಾರಣವೆಂದು ಹೇಳಿದ ಷಣ್ಮುಖ, ಶಾಂಭವಿ, ಖೇಚರಿ, ಭೂಚರಿ, ಸಾಚರಿ, ಕುರಂಗ, ಪಾಲೋತಕ, ಹಠ, ಲಯ, ಲಂಬಿಕ, ಮೊದಲಾದ ಅನಂತ ಮುದ್ರೆಗಳ ಸಾಧಿಸಿ, ಆ ಮುದ್ರೆ ಸಾಧನದಲ್ಲಿ ಕಂಡ, ಮಾಯ, ಛಾಯ, ಅಭ್ರಛಾಯ, ಪುರುಷಛಾಯ, ಮಿಂಚಿನ ಛಾಯ, ಬಳ್ಳಿಮಿರುಪಿನ ಛಾಯ, ಆರು ವರ್ಣದ ಛಾಯ, ಮೃತ್ಯುವಿನ ಛಾಯ, ಜೀವ ಜಪ ಮರಣ ಚಿನ್ನ ಕನಸಸಂಭ್ರಮ, ಕುಂಡಲಿನೋಟ, ಘೋಷಲಂಪಟ, ಮಾನಸಪೂಜೆ, ಬೈಲವಾಣಿ, ಪಶ್ಚಿಮಕೋಣೆ, ಆತ್ಮಭೆಟ್ಟಿ, ಮಂತ್ರಪಾಠ, ಒಳಬೆಳಗು, ಹೊರಬೆಳಗು ಪರಿಪರಿಯ ಬೆರಗುಗಳ ತಿಳಿದು, ಇದೇ ನಿಜಬ್ರಹ್ಮವೆಂದು ಹೆಮ್ಮೆ ೈಸಿ, ಆಸೆವೊಡಿಯದೆ, ಕ್ಲೇಶ ಕಡಿಯದೆ, ಘಾಶಿಯಾಗಿ ಹೇಸಕಿಯೊಳಗೆ ಮುಳಿಗಿ ಮುಂದುಗಾಣದೇ ಹೋದರು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಕೆಂಜೆಡೆಯ ಭಾಳನೇತ್ರಂ ರಂಜಿಪ ರವಿಕೋಟಿ ತೇಜದಿಂದುರವಣಿಪಂ ಕಂಜಪದಯುಗದೊಳು ಹೊಳೆವುತ್ತಿಹ ನಂಜುಗೊರಳಭವ ಭವಕುಕ್ಷಿಯೊಳೀರೇಳುಭುವನವಂ ಮಿಗೆ ತಾಳ್ದ ರಾಕ್ಷಸಹರ ರಕ್ಷಿಸೆನ್ನುವಂ ಹರ ಹರಾ ಶಿವ ಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->