ಅಥವಾ

ಒಟ್ಟು 42 ಕಡೆಗಳಲ್ಲಿ , 24 ವಚನಕಾರರು , 38 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಕಂಡುವ ಹೇಳಿಹೆನೆ ? ಸಮಯಕ್ಕೆ ದೂರ, ಎನ್ನ ಇರವನರಿಯರು. ಲೆಂಡನೆಂಬರು, ಸುಮ್ಮನಿದ್ದೇನೆ. ಇವರೆನ್ನ ಆರೈದು ಕಂಡುದ ನುಡಿವರು. ಎನ್ನ ಮುಟ್ಟಿದವರ ಎನ್ನಂತೆ ಮಾಡಿಕೊಂಬೆ. ಎನ್ನ ಅರಿಯದವರ ಹಾದಿಯ ಹೋಗೆ. ಎನ್ನನರಿತ ಜಂಗಮದ ಸಂಗವ ಮಾಡುವೆ. ಜಗದ ಸಂಗವನೊಲ್ಲೆ, ನಿಗಮಾಗಮಶಾಸ್ತ್ರವನೊಲ್ಲೆ. ಅವೆಲ್ಲವು ಸ್ಥಲ ನೆಲೆ ಇಟ್ಟು ಹೇಳುವವು. ಎಮ್ಮ ಶರಣರು ನುಡಿದ ಶಾಸ್ತ್ರಕ್ಕೆ ಸ್ಥಲ ನೆಲೆ ಇಲ್ಲ. ಇಂತಿವೆಲ್ಲವ ಬಲ್ಲೆನಾಗಿ, ಎನ್ನಂಗಕ್ಕೆ ಪ್ರಾಣಕ್ಕೆ ಭವವಿಲ್ಲ, ಬಂಧನವಿಲ್ಲ. ಅದೇಕೆಂದರೆ:ಲಿಂಗವೆಂದ ಕಾರಣ, ನಾನೆಂಬುದಿಲ್ಲ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅರಿದೆಹೆನೆಂದು ಕುರುಹಿಟ್ಟು ಇದಿರಿಂಗೆ ಹೇಳುವಾಗ, ಆ ಗುಣ ಅರಿವೋ, ಮರವೆಯೋ ? ಹೋಗಲಂಜಿ, ಹಗೆಯ ಕೈಯಲ್ಲಿ ಹಾದಿಯ ತೋರಿಸಿಕೊಂಬಂತೆ, ತನ್ನನರಿಯದ ಯುಕ್ತಿ, ಇದಿರಿಂಗೆ ಅನ್ಯಬೋಧೆಯುಂಟೆ ? ಈ ಅನ್ಯಬ್ಥಿನ್ನಕ್ಕೆ ಮೊದಲೆ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಶಿವತಂತ್ರದಿಂದ ಸುಖದುಃಖಗಳು ಬರುತಿಹವೆಂದರಿಯದೆ ನರಗುರಿಗಳಿಗೆ, ರೋಗ ದಾರಿದ್ರ್ಯ ಅಪಜಯಂಗಳು ಬರುತ್ತಿರಲು ವಿಪ್ರಗೆ ಕೈಮುಗಿದು ಕಾಣಿಕೆಯನಿಕ್ಕಿ ತನ್ನ ಹೆಸರ ಹೇಳಿ ಸೂರ್ಯಬಲ ಚಂದ್ರಬಲ ಬೃಹಸ್ಪತಿಬಲ ನವಗ್ರಹಬಲವ ಕೇಳುವವರಿಗೆ ಎಲ್ಲಿಯದೋ ಶಿವಭಕ್ತಿ ? ಸೂರ್ಯನು ಜ್ಞಾನವುಳ್ಳ್ಳವನಾದಡೆ ಗೌತಮಮುನೀಶ್ವರನ ಹೆಂಡತಿ ಅಹಲ್ಯಾದೇವಿಗೆ ಮೋಹಿಸಿ ಮುನಿಯ ಶಾಪದಿಂದ ಕುಷ್ಟದೊಳಗಿಹನೆ ? ಳ ಅಲ್ಲದೆ ದಕ್ಷನ ಯಾಗದಲ್ಲಿ ಹಲ್ಲ ಹೋಗಲಾಡಿಸಿಕೊಂಬನೆ ? ಚಂದ್ರನು ಜ್ಞಾನವುಳ್ಳವನಾದಡೆ ಗುರುವಿನ ಹೆಂಡತಿಗೆ ಅಳುಪಿ ಕೊಂಡೊಯ್ದು ಜಾತಜ್ವರದಲ್ಲಿ ಅಳಲುತಿಹನೆ ? ಬೃಹಸ್ಪತಿ ಜ್ಞಾನವುಳ್ಳವನಾದಡೆ ಸಕಲ ಜ್ಯೋತಿಷ್ಯಗಳ ನೋಡಿ ವಿವಾಹವಾದ ಹೆಂಡತಿ ರೋಹಿಣೀದೇವಿಯ ಚಂದ್ರನೆತ್ತಿಕೊಂಡು ಹೋಹಾಗ ಸುಮ್ಮನಿದ್ದುದು ಏನು ಜ್ಞಾನ ? ಶನಿ ಜ್ಞಾನವಳ್ಳವನಾದಡೆ ಕುಂಟನಾಗಿ ಸಂಕೋಲೆ ಬೀಳ್ವನೆ ? ಅದು ಕಾರಣ_ ತಮಗೆ ಮುಂಬಹ ಸುಖದುಃಖಂಗಳನರಿಯದವರು ಮತ್ತೊಬ್ಬರ ಸುಖದುಃಖಂಗಳ ಮೊದಲೆ ಅರಿಯರು. ಬೃಹಸ್ಪತಿಯ ಮತದಿಂದೆ ದಕ್ಷ, ಯಾಗವನಿಕ್ಕೆ ಕುರಿದಲೆಯಾಯಿತ್ತು. ಬೃಹಸ್ಪತಿಯ ಮತದಿಂದೆ ದ್ವಾರಾವತ ನೀರಲ್ಲಿ ನೆರೆದು ಕೃಷ್ಣನ ಹದಿನಾರುಸಾವಿರ ಸ್ತ್ರೀಯರ ಹೊಲೆಬೇಡರು ಸೆರೆಯನೊಯ್ದರು, ಶ್ರೀರಾಮನ ಹೆಂಡತಿ ಸೀತಾಂಗನೆ ಸೆರೆಯಾದಳು. ಇಂತೀ ತಮತಮಗೆ ಮುಂದೆ ಬಹ ಅಪಜಯಂಗಳನರಿಯದ ಕಾರಣ, ಆ ಬೃಹಸ್ಪತಿ ಜ್ಞಾನಿಯ ಮತದಿಂದೆ, ಅಭಾಷ ಜೋಯಿಸರ ಮಾತ ಕೇಳಿ ಹುಣ್ಣಿಮೆ ಅಮವಾಸೆಯಲ್ಲಿ ಉಪವಾಸವಿದ್ದು, ಗ್ರಹಬಲವುಳ್ಳ ಶುಭಮುಹೂರ್ತದಲ್ಲಿ, ಅರಳಿಯ ಮರಕ್ಕೆ ನೀರ ಹೊಯ್ದು ನೂಲ ಸುತ್ತಿ ವಿಪ್ರಜೋಯಿಸರ್ಗೆ ಹೊನ್ನು ಹಣವ ಕೊಟ್ಟಡೆ, ಹೋದೀತೆಂಬ ಅನಾಚಾರಿಯ ಮಾತ ಕೇಳಲಾಗದು. `ವಸಿಷ್ಠೇನ ಕೃತೇ ಲಗ್ನೇ ವನೇ ರಾಮೇಣ ವಾಸಿತೇ ಕರ್ಮಮೂಲೇ ಪ್ರಧಾನೇ ತು ಕಿಂ ಕರೋತಿ ಶುಭಗ್ರಹಃ ' ಇಂತೆಂದುದಾಗಿ ಬಹ ಕಂಟಕವ ಹೊನ್ನು ಹೆಣ್ಣು ಶುಭ ಲಗ್ನದಿಂದೆ ಪರಿಹರಿಸೇನೆಂದಡೆ ಹೋಗಲರಿಯದು. ಹಸಿವಿಲ್ಲದ ಮದ್ದು ಕೊಟ್ಟೇನು, ಅಶನವ ನೀಡೆಂಬಂತೆ, ಖೇಚರದ ಮದ್ದು ಕೊಟ್ಟೇನು ತೊರೆಯ ದಾಂಟಿಸೆಂಬಂತೆ, ಕುರುಡನ ಕೈಯ ಕುರುಡ ಹಿಡಿದು ಹಾದಿಯ ತೋರುವಂತೆ, ಲಜ್ಜೆ ನಾಚಿಕೆ ಇಲ್ಲದೆ ವಿಪ್ರರ ಕೈಯೆ ಲಗ್ನವ ಕೇಳಲಾಗದು. ಸದ್ಭಕ್ತರಾದವರಿಗೆ ನಿಮ್ಮ ಬಲವೇ ಬಲವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಕೊರಡು ಕೊನರಾಗಬಲ್ಲುದೇ? ಬರಡು ಹಯನಾಗಬಲ್ಲುದೇ ಅಯ್ಯಾ? ಕುರುಡಗೆ ಕನ್ನಡಿಯ ತೋರಿದಡೆ ನೋಡಬಲ್ಲನೆ? ಮೂಗಗೆ ರಾಗವ ಹೇಳಿದರೆ ಹಾಡಬಲ್ಲನೆ ಅಯ್ಯ? ಹೇಗ ಬುದ್ಧಿಯ ಬಲ್ಲನೇ ಅಯ್ಯ? ಲೋಗರಿಗೆ ಉಪದೇಶವ ಹೇಳಿದರೆ ಶಿವಸತ್ಪಥದ ಹಾದಿಯ ಬಲ್ಲರೇ ಅಯ್ಯ?. ಇದು ಕಾರಣ, ಶಿವ ಸತ್ಪಥದ ಆಗೆಂಬುದು ಶಿವಜ್ಞಾನಸಂಪನ್ನಂಗಲ್ಲದೆ ಸಾಧ್ಯವಲ್ಲ ಕಾಣ. ಅಸಾಧ್ಯವಸ್ತುವಿನೊಳಗಣ ಐಕ್ಯ ಅವಿವೇಕಗಳಿಗೆ ಅಳವಡುವುದೇ ನಮ್ಮವರಿಗಲ್ಲದೆ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಒಳಗಣ ಕಲ್ಲು, ಮೇಲಣ ಮರ, ನಡುವಣ ಮಣ್ಣು, ಹೊಡೆವವನಂಗ ಹದನರಿದಡೆ ಕುಂಭ. ಇಂತೀ ಮೂವರೆದೆಯನರಿ, ಆಮಳ ಸಂದಿಗೆ ಒಡಗೂಡದಿರು. ಸಾಕು ಬಿಡು, ತೂತಿನ ಹಾದಿಯ ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ತಾರಾಧಾರ ಬಾಹ್ಯವ ಸೋಹಂಭಾವ ಭಾವಾಂತರ ವಾಮಶಕ್ತಿ ಮೋಹಶಕ್ತಿ ಕನ್ಯಾಶಕ್ತಿ ಬಾಲಶಕ್ತಿ ಗಣಶಕ್ತಿ ಮಂದಿರಶಕ್ತಿ ಶಿವದೇವ ಈಶ್ವರ ಮಹಾದೇವ ಪರಾಪರ ಶಿವ ಇಂತಿವೆಲ್ಲವ ಬಸವಣ್ಣ ತಪ್ಪಿಸಿ, ಈಸರಿಂದಾದ ಭಕ್ತಿಯ ಪ್ರಭಾವದೊಳಿರಿಸಿ, ಗತಿಯತ್ತ ಹೊದ್ದಲೀಯದೆ, ಮೋಕ್ಷದತ್ತ ಹೊದ್ದಲೀಯದೆ, ನಾಲ್ಕೂ ಪದದತ್ತ ಹೊದ್ದಲೀಯದೆ, ಅಬ್ಥಿನವ ಕೈಲಾಸದತ್ತ ಹೊದ್ದಲೀಯದೆ, ಲಿಂಗಾರ್ಚನೆಯ ತೋರಿ, ಜಂಗಮಾರ್ಚನೆಯ ಹೇಳಿ, ಜಂಗಮನಿರಾಕಾರವೆಂದು ತೋರಿ, ಆ ಜಂಗಮ ಪ್ರಸಾದವ ಲಿಂಗಕ್ಕಿತ್ತು ಆರೋಗಿಸಿ, ಬಸವಣ್ಣ ತೋರಿದ ಕಾರಣ, ನಿರವಯದ ಹಾದಿಯ ಬಸವಣ್ಣನಿಂದ ಕಂಡೆನು ಕಾಣಾ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಘುಲ್ಲುಘುಲ್ಲೆಂದಡೆ ನಲ್ಲ ಬರುತಾನೆಂದು ಎಲ್ಲ ಹಾದಿಯ ಮೆಟ್ಟಿ ನೋಡುತಿರ್ದೆನವ್ವಾ. ನಲ್ಲನ ಸೊಲ್ಲನಾಲಿಸಿ ಕೇಳುತಿರ್ದೆನವ್ವಾ. ಅಖಂಡೇಶ್ವರನೆಂಬ ನಲ್ಲನ ಕಂಡರೆ ಮಹಾಸಂತೋಷವು, ಕಾಣದಿರ್ದರೆ ಕಡುದುಃಖ ಕೇಳಿರವ್ವಾ ಎನಗೆ.
--------------
ಷಣ್ಮುಖಸ್ವಾಮಿ
ಗುರುಪ್ರಸಾದಿ ಆ ಪ್ರಸಾದವ ಲಿಂಗಕ್ಕೆ ಅರ್ಪಿಸಲಾಗದು, ಲಿಂಗಪ್ರಸಾದಿ ಆ ಪ್ರಸಾದವ ಜಂಗಮಪ್ರಸಾದದಲ್ಲಿ ಕೂಡಲಾಗದು. ಇಂತೀ ತ್ರಿವಿಧಪ್ರಸಾದವ ತಾ ಸ್ವೀಕರಿಸುವಲ್ಲಿ ತನ್ನ ದೃಷ್ಟದ ಇಷ್ಟಕ್ಕೆ ಅರ್ಪಿಸದೆ ಮುಟ್ಟಲಾಗದು. ಇಂತೀ ಭಾವ ಅಮೃತದಲ್ಲಿ ವಿಷ ಬೆರೆದಂತೆ: ಅಮೃತವ ಚೆಲ್ಲಬಾರದು, ವಿಷವ ಮುಟ್ಟಬಾರದು. ಗೋವು ಮಾಣಿಕವ ನುಂಗಿದಂತೆ: ಗೋವ ಕೊಲ್ಲಬಾರದು, ಮಾಣಿಕವ ಬಿಡಬಾರದು. ಗೋವು ಸಾಯದೆ ಮಾಣಿಕ ಕೆಡದೆ ಬಹ ಹಾದಿಯ ಬಲ್ಲಡೆ ಆತ ತ್ರಿವಿಧ ಪ್ರಸಾದಿಯೆಂಬೆ. ಆ ಗುಣ ಏಲೇಶ್ವರಲಿಂಗಕ್ಕೂ ಅಸಾಧ್ಯ ನೋಡಾ!
--------------
ಏಲೇಶ್ವರ ಕೇತಯ್ಯ
ಗೇಣಗಲದ ಹಳ್ಳ ಕುಡಿಯಿತ್ತು ಸಪ್ತಸಮುದ್ರದುದಕವ. ಗಾವುದ ಹಾದಿಯ ಊರು ಭುವನ ಹದಿನಾಲ್ಕು ಲೋಕವ ನುಂಗಿತ್ತು. ಮನೆಯೊಳಗಣ ಒರಳು ಜಂಬೂದ್ವೀಪ ನವಖಂಡ ಪೃಥ್ವಿಯ ನುಂಗಿತ್ತು. ನುಂಗಿದ ಮುಚ್ಚಳಿಗೆ ತೆರಹಿಲ್ಲದೆ ಮತ್ತೆ ಆ ಮನೆಯ ನುಂಗಿತ್ತು. ಇಂತೀ ಒಳಗಾದವನೆಲ್ಲ ಪತಂಗ ನುಂಗಿತ್ತು. ನುಂಗಿದ ಪತಂಗ ಹಿಂಗಿಯಾಡುತ್ತಿದ್ದಿತ್ತು. ಕಂಡಿತ್ತು ಬೆಂಕಿಯ ಬೆಳಗ, ಬಂದು ಸುಖಿಸಿಹೆನೆಂದು ಹೊಂದಿ ಹೋಯಿತ್ತು. ಇದರಂದವ ತಿಳಿ, ಲಿಂಗೈಕ್ಯನಾದಡೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇದು ಗುರು, ಇದು ಲಿಂಗ, ಇದು ಜಂಗಮ, ಇದು ಪ್ರಸಾದ. ಇಂತೀ ಚತುರ್ವಿಧಸ್ಥಲವನೊಂದುಮಾಡಿ ತೋರಿ, ಸಮತೆ ಸೈರಣೆಯೆಂಬ ಭಕ್ತಿಪ್ರಭೆಯೊಳಗಿರಿಸಿ, ಗತಿಯತ್ತ ಹೊದ್ದಲೀಯದೆ, ಲಿಂಗದ ವ್ಯಾವರ್ಣನೆಯ ತೋರಿ, ಜಂಗಮವ ನಿರಾಕಾರಲಿಂಗವೆಂದು ತೋರಿ, ಆ ಜಂಗಮದ ಪ್ರಸಾದವ ತೋರಿದನು. ನಿರವಯದ ಹಾದಿಯ, ಬಸವಣ್ಣನಿಂದ ಕಂಡೆ ಕಾಣಾ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಹುಟ್ಟಿದ ಮನುಜರೆಲ್ಲಾ ಬಂದ ಬಟ್ಟೆಯ ನೋಡಿ ಭ್ರಮೆಗೊಂಡು ಬಳಲುತ್ತೈದಾರೆ. ಇದನರಿದು ಬಂದ ಬಟ್ಟೆಯ ಮೆಚ್ಚಿ, ಕಾಣದ ಹಾದಿಯ ಕಂಡು, ಹೋಗದ ಹಾದಿಯ ಹೋಗುತ್ತಿರಲು, ಕಾಲ ಕಾಮಾದಿಗಳು ಬಂದು ಮುಂದೆ ನಿಂದರು. ಅಷ್ಟಮದಂಗಳು ಬಂದು ಅಡ್ಡಗಟ್ಟಿದವು. ದಶವಾಯು ಬಂದು ಮುಸುಕುತಿವೆ. ಸಪ್ತವ್ಯಸನ ಬಂದು ಒತ್ತರಿಸುತಿವೆ. ಷಡುವರ್ಗ ಬಂದು ಸಮರಸವ ಮಾಡುತಿವೆ. ಕರಣಂಗಳು ಬೆಂದು ಉರಿವುತಿವೆ. ಮರವೆ ಎಂಬ ಮಾಯೆ ಬಂದು ಕಾಡುತಿವಳೆ. ತೋರುವ ತೋರಿಕೆಯೆಲ್ಲವೂ ಸುತ್ತಮೊತ್ತವಾಗಿವೆ. ಇವ ಕಂಡು ಅಂಜಿ ಅಳುಕಿ ಅಂಜನದಿಂದ ನೋಡುತ್ತಿರಲು ತನ್ನಿಂದ ತಾನಾದೆನೆಂಬ ಬಿನ್ನಾಣವ ತಿಳಿದು, ಮುನ್ನೇತರಿಂದಲಾಯಿತು, ಆಗದಂತೆ ಆಯಿತೆಂಬ ಆದಿಯನರಿದು, ಹಾದಿಯ ಹತ್ತಿ ಹೋಗಿ ಕಾಲ ಕಾಮಾದಿಗಳ ಕಡಿದು ಖಂಡಿಸಿ, ಅಷ್ಟಮದಂಗಳ ಹಿಟ್ಟುಗುಟ್ಟಿ, ದಶವಾಯುಗಳ ಹೆಸರುಗೆಡಿಸಿ, ಸಪ್ತವ್ಯಸನವ ತೊತ್ತಳದುಳಿದು, ಷಡ್ವರ್ಗವ ಸಂಹರಿಸಿ, ಕರಣಂಗಳ ಸುಟ್ಟುರುಹಿ, ಮರವೆಯೆಂಬ ಮಾಯೆಯ ಮರ್ಧಿಸಿ, ನಿರ್ಧರವಾಗಿ ನಿಂದು ಸುತ್ತ ಮೊತ್ತವಾಗಿರುವವನೆಲ್ಲ ಕಿತ್ತು ಕೆದರಿ, ಮನ ಬತ್ತಲೆಯಾಗಿ, ಭಾವವಳಿದು ನಿರ್ಭಾವದಲ್ಲಿ ಆಡುವ ಶರಣ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ನಿತ್ಯ ಅನಿತ್ಯವೆಂಬುದ ತೋರಿದಿರಿ, ಸತ್ಯ ಅಸತ್ಯವೆಂಬುದ ತೋರಿದಿರಿ. ಆಚಾರ ವಿಚಾರವೆಂಬುದ ತೋರಿದಿರಿ. ಅಯ್ಯಾ ಸೋಹಂ ದಾಸೋಹಂ ಎಂಬುದ ತೋರಿದಿರಿ. ಇದು ಎಂಬುದ ತೋರಿದಿರಿ. ಅಯ್ಯಾ ಮುಕ್ತಿ ಎಂಬುದ ತೋರಿದಿರಿ. ಅಂಗ ಲಿಂಗವೆಂಬುದ ತೋರಿದಿರಿ, ಪ್ರಾಣವೇ ಜಂಗಮವೆಂಬುದ ತೋರಿದಿರಿ. ಪ್ರಸಾದವೇ ಪರವೆಂದು ತೋರಿದಿರಿ. ಇಂತಿವರ ಭೇದಾದಿ ಭೇದವನೆಲ್ಲ ತೋರಿದಿರಿ. ನಿಮ್ಮ ಹಾದಿಯ ಹತ್ತಿಸಿದಿರಿ. ಮೂದೇವರೊಡೆಯ ಚೆನ್ನಮಲ್ಲೇಶ್ವರಾ, ನಿಮ್ಮ ಹಾದಿಗೊಂಡು ಹೋಗುತ್ತಿರ್ದು, ನಾನೆತ್ತ ಹೋದೆನೆಂದರಿಯನಯ್ಯಾ. ಬಸವಪ್ರಿಯ ಕೂಡಲಚೆನ್ನ ಬಸವಣ್ಣಾ , ನಾ ಹೋದ ಹಾದಿಯ ನೀವೆ ಬಲ್ಲಿರಿ.
--------------
ಹಡಪದ ಅಪ್ಪಣ್ಣ
ಆಡಬಂದ ಮೂರ್ತಿಗೆ ಕೂಡಿ ಮಾಡಬಲ್ಲವರಾರಯ್ಯಾ ? ಮಾತು ನೀತಿಯ ಕೇಳಿ, ಜಾತಿ ಮೂಲ ಜಂಜಡವೊಂದೆ ಮಾಡಿ ಲಾಭವನುಂಬ ಹಾದಿಯ ಹಿರಿಯರಂತಿರಲಿ ನೀಡಿಯಾಡದೆ ಕೊಟ್ಟು ಕಾಣುವ ದಿಟ್ಟಗಲ್ಲದೆ ಬಟ್ಟೆಗಳ್ಳರಿಗೆಂತೊಲಿವ ನಮ್ಮ ಗುರುನಿರಂಜನ ಚನ್ನಬಸವಲಿಂಗ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಗೋವು ಮೊದಲು ಚತುಃಪಾದಿ ಜೀವಂಗಳು ತಾವು ಬಂದ ಹಾದಿಯ ಮೂಸಿ ನೋಡಿ ತಮ್ಮಯ ಬೀಡಿಂಗೆ ಹೋಹಂತೆ, ಆ ಪರಿ ನಿನಗಿಲ್ಲ, ಪಶುವಿನ ಮತಿಯಷ್ಟು ಗತಿಯಿಲ್ಲ. ಬಂದುದ ಮರೆದ ಬಂಧಜೀವಿಗ ನಾನಾಗಿ ಜೀವಕಾಯದ ಸಂದ ಬಿಡಿಸು. ಬಿಂದು ನಿಲುವ ಅಂದವ ಹೇಳು, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಇನ್ನಷ್ಟು ... -->