ಅಥವಾ

ಒಟ್ಟು 48 ಕಡೆಗಳಲ್ಲಿ , 13 ವಚನಕಾರರು , 42 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಭಾವಲಿಂಗದ ಮರ್ಮವನರಿವುದರಿದು, ಲಿಂಗಸಂಜ್ಞೆಯನರಿವುದರಿದು, ಲಿಂಗವೆಂದಾದುದೆಂದರಿವುದರಿದು, ಲಿಂಗವಂತಹುದಿಂತಹುದೆಂದರಿವುದರಿದು ನೋಡಾ. ಲಿಂಗದಲ್ಲಿಯೆ ಅಗಮ್ಯವಯ್ಯ. ಭೂಮಿಯೆ ಪೀಠಕೆ, ಆಕಾಶವೆ ಲಿಂಗವೆಂದರಿದಾತನು ಲಿಂಗವನರಿದಾತನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗದ ಆದಿ ಬ್ರಹ್ಮ, ಮಧ್ಯ ವಿಷ್ಣು, ಅಂತ್ಯ ರುದ್ರ. ಇಂತೀ ತ್ರಿಮೂರ್ತಿಲಿಂಗವೆಂದರಿದಾತನು ಲಿಂಗವನರಿದವನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂಬ ಭಾವರಹಿತ ಲಿಂಗವು `ಬ್ರಹ್ಮ ವಿಷ್ಣ್ವಾದಿದೇವಾನಾಮಪ್ಯಗೋಚರಂ' ಎಂದು ಇದಂ ಮಾಹೇಶ್ವರಂ ಜ್ಯೋತಿರಾಪಾತಾಲೇ ವ್ಯವಸ್ಥಿತಂ ಅತೀತಂ ಸತ್ಯಲೋಕಾದೀನನಂತಂ ದಿವ್ಯಮೀಶ್ವರಂ ಲಲಾಟಲೋಚನಂ ಚಾಂದ್ರೀ ಕಲಾಪಂ ಚತುರ್ದಶಂ ಅಂತರ್ವತೇಹ ನಿರ್ದೇಹಂ ಗುರುರೂಪಂ ವ್ಯವಸ್ಥಿತಂ ಪಾದಭಿನ್ನಂ ಹಿ ಲೋಕೇನ ಮೌಳಿಬ್ರಹ್ಮಾಂಡಭಿತ್ತಯೇ ಭುಜಪ್ರಾಂತದಿಗಂತಾನಾಂ ಭೂತಾನಾಂ ಪತಯೇ ನಮಃ ನಾದಲಿಂಗಮಿತಿಜ್ಞೇಯಂ ಬಿಂದುಪೀಠಮುದಾಹೃತಂ ನಾದಬಿಂದುಯುತಂ ರೂಪಂ ಲಿಂಗಾಕಾರಮಿಹೋಚ್ಯತೇ ಎಂಬ ಲಿಂಗಮೆಂದು ಲಿಯತೇ ಗಮ್ಯತೇ ಯತ್ರ ಯೇನಸರ್ವಂ ಚರಾಚರಂ ತದೇತಲ್ಲಿಂಗಮಿತ್ಯುಕ್ತಂ ಲಿಂಗತತ್ತ್ವಪರಾಯಣೈಃ ಲಕಾರಂ ಲಯಸಂಪ್ರೋಕ್ತಂ ಗಕಾರಂ ಸೃಷ್ಟಿಮೇವ ಚ ಲಯಾನಾಂ ಗಮನಶ್ಚೈವ ಲಿಂಗಾಕಾರಮಿಹೋಚ್ಯತೇ ಎಂದರಿದಾತನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನೆಂದರಿದ ಶರಣಂಗೆ ಸುಲಭ, ಮಿಕ್ಕಿನವರಿಗಳಿಗಲಭ್ಯವಯ್ಯಾ.
--------------
ಉರಿಲಿಂಗಪೆದ್ದಿ
ಅಟ್ಟುದನಡಲುಂಟೆ ? ಸುಟ್ಟುದ ಸುಡಲುಂಟೆ ? ಜ್ಞಾನಾಗ್ನಿಯಲ್ಲಿ ದಗ್ಧವಾದ ಪರಮಶಿವಯೋಗಿಗೆ ಹುಟ್ಟು ಹೊಂದೆಂಬ ಉಭಯ ಜಡತೆಯುಂಟೆ ? ಅದೆಂತೆಂದಡೆ: ``ದಗ್ಧಸ್ಯ ದಹನಂ ನಾಸ್ತಿ ಪಾಕಸ್ಯ ಪಚನಂ ನ ಹಿ ಜ್ಞಾನಾಗ್ನಿರ್ದಗ್ಧದೇಹಸ್ಯ ನ ಚ ದಾಹೋ ನ ಚ ಕ್ರಿಯಾ '' ಎಂದುದಾಗಿ_ ನಮ್ಮ ಗುಹೇಶ್ವರಲಿಂಗವನೊಡಗೂಡಿ, ಎರಡಳಿದು ನಿಂದ, ಮಹಾಮಹಿಮಂಗೆ ಪರಿಭವವಿಲ್ಲ ಕಾಣಿರೊ.
--------------
ಅಲ್ಲಮಪ್ರಭುದೇವರು
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಗುರುಜಂಗಮದ ಪಾದತೀರ್ಥವೆ ಪವಿತ್ರವೆಂದು ತಿಳಿದು ಲಿಂಗಾಭಿಷೇಕಂಗೆಯ್ವುದಯ್ಯಾ. ಆ ಗುರುಲಿಂಗ ಜಂಗಮದಲ್ಲಿ ಭೇದವ ಕಲ್ಪಿಸಿದಡೆ ಪಾಪವು ಸಂಘಟಿಸುವುದಯ್ಯಾ. ಮನುಷ್ಯನ ಕಾಲ್ದೊಳೆದ ನೀರು ಪರಮತೀರ್ಥವೆಂದು ಭಾವಿಸಿ ಲಿಂಗಕ್ಕೆರೆವುದು ಶಾಸ್ತ್ರಾಚಾರಕ್ಕೆ ವಿರೋಧ_ ಎಂಬ ಕುಹಕಿಗಳ ಕೀಳ್ನುಡಿಯ ಕೇಳಲಾಗದಯ್ಯಾ. ಗುರುರ್ಲಿಂಗಜಂಗಮಶ್ಚ ತ್ರಿತಯಂ ಚೈಕಮೇವ ಹಿ ಅತ ಏವ ಪದೋದಾಭಿಷೇಚನಂ ಶಿವಲಿಂಗಕೇ ಕುರ್ವಂತ್ಯಭೇದದೃಷ್ಟ್ಯಾ ಚ ಭೇದಕೃತ್ಪಾಪಮಶ್ನುತೇ ಎಂದುದಾಗಿ ಇಂತಿಪ್ಪುದನಾರಯ್ಯದೆ ಗಳಹುವ ಮಂದಮತಿಗಳ ಎನ್ನತ್ತ ತೋರದಿರಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭವಿವಿರಹಿತ ಭಕ್ತನೆಂದೆಂಬರು, ಭವಿವಿರಹಿತ ಭಕ್ತನಾದ ಪರಿಯೆಂತೋ? ಭವಿಪಾಕಂ ನಿವೇದ್ಯಂ ಸ್ಯಾತ್ ಬಂಧನಂ ಭವಿಸಂಗಿನಾಂ ಸರ್ವಲೋಕಸ್ತು ಉಚ್ಛಿಷ್ಟಂ ಸಂಸಾರೋ ಹಿ ತಟಾಕವತ್ ಇದನರಿದು ಊರೆಲ್ಲಾ ಒಂದೇ ತಳಿಗೆಯಲುಂಡು ಬೇರೆ ಬೇರೆ ಕೈತೊಳೆದಂತೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪ್ರಕಟದಿಂದ ಕೊಂಬುದು ಪ್ರಸಾದವಲ್ಲ, ಗುಪ್ತದಿಂದ ಕೊಂಬುದು ಪ್ರಸಾದವಲ್ಲ, ಪ್ರಕಟದಂತುಟೆ ಪ್ರಸಾದ? ಗುಪ್ತದಂತುಟೆ ಪ್ರಸಾದ? ಪ್ರಸಾದದಂತುವನೇನೆಂದು ಹೇಳುವೆನಯ್ಯಾ? ಭವಭಾರಿ ಜೀವಿಗಳೊಡನೆ ಪ್ರಸಾದದಂತುವನೇನಂದುಪಮಿಸುವೆನು? ನಾರೂಢಸ್ಯ ಪ್ರಸಾದೋ ಹಿ ನ ಗುಪ್ತಸ್ಯ ಪ್ರಸಾದಕಂ ಗೋಪ್ಯಾರೂಢೋ[s]ಭಯಂ ನಾಸ್ತಿ ಮಹಾಪ್ರಸಾದಸಂಗಿನಃ ಎಂದುದಾಗಿ, ಪ್ರಕಟ ಗುಪ್ತವ ಕಳೆದು ನೆಟ್ಟನೆ ಪ್ರಸಾದವ ಕೊಳಬಲ್ಲ ಕೂಡಲಚೆನ್ನಸಂಗಾ ನಿಮ್ಮ ಪ್ರಸಾದಿ.
--------------
ಚನ್ನಬಸವಣ್ಣ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಹರಿದ ಶಿರವ ಹಚ್ಚಿ ಮೆರೆದರು ನಮ್ಮ ಶರಣರು, ಭಕ್ತಿಯ ಪ್ರಭಾವದಿಂದ. ಬರಡಾಕಳವ ಕರೆದು ಚರತತಿಗಿತ್ತರು ನಮ್ಮ ಶರಣರು, ಭಕ್ತಿಯ ಪ್ರಭಾವದಿಂದ. ಪೂರ್ವಕುಲಗೋತ್ರವನಳಿದು ಪುನೀತರಾದರು ನಮ್ಮ ಶರಣರು ಭಕ್ತಿಯ ಪ್ರಭಾವದಿಂದ. ``ಭಕ್ತೇರಸಾಧ್ಯಂ ನ ಹಿ ಕಿಂಚಿದಸ್ತಿ ಭಕ್ತ್ಯಾ ಸರ್ವಸಿದ್ಧಯಃ ಸಿದ್ಧ್ಯಂತಿ ' ಎಂಬ ವಚನವುಂಟಾಗಿ_ಭಕ್ತಂಗೆ ಅಸಾಧ್ಯವಾವುದು ? ಅದು ಕಾರಣ, ನಿಮ್ಮಡಿಯ ಭಕ್ತಿಯನೊಂದನೆ ಕರುಣಿಸಿ ಕಾಪಾಡಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಲಿಂಗದೊಡನೆ ಸಹಭೋಜನವ ಮಾಡುವ ಅದ್ವೈತಿಗಳ ಮಾತುಕೇಳಿ, ಸಂಸಾರದೊಳಗಿರ್ದ ಭಕ್ತನು, ಆ ಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರನರಕ ತಪ್ಪದು. ಅದೆಂತೆಂದಡೆ: ``ರಾಗದ್ವೇಷಮದೋನ್ಮತ್ತಸ್ತತ್ತ್ವಜ್ಞಾನಪರಾಙ್ಮುಖಃ ಸಂಸಾರಸ್ಯ ಮಹಾಪಂಕೇ ಜೀರ್ಣಾಂಗೋ ಹಿ ನಿಮಜ್ಜತಿ '' ಇದನರಿದು ಲಿಂಗದೊಡನೆ ಸಹಭೋಜನವ ಮಾಡಲಾಗದು. ಮಾಡುವ ಅಜ್ಞಾನಿಗಳು ನೀವು ಕೇಳಿರೊ: ಗುರುಲಿಂಗಜಂಗಮತ್ರಿವಿಧವನು ಏಕಾರ್ಥವ ಮಾಡದನ್ನಕ್ಕರ ಸಹಭೋಜನವುಂಟೆ ಹೇಳಿರಣ್ಣಾ ! ಇಲ್ಲವಾಗಿ. ಅದೆಂತೆಂದಡೆ: ``ಗುರುರೇಕೋ ಲಿಂಗಮೇಕಂ ಏಕಾರ್ಥೋ ಜಂಗಮಸ್ತಥಾ ತ್ರಿವಿಧೇ ಭಿನ್ನಭಾವೇನ ಶ್ವಾನಯೋನಿಷು ಜಾಯತೇ ''_ ಇಂತೆಂಬ ಶಿವನವಾಕ್ಯವನರಿಯದೆ, ನೀವೇ ಲಿಂಗವೆಂಬಿರಿ ಲಿಂಗವೆ ನೀವೆಂಬಿರಿ ಜನನ_ಮರಣ, ತಾಗು_ನಿರೋಧ ಉಳ್ಳನ್ನಕ್ಕರ ನೀವೆಂತು ಲಿಂಗವಪ್ಪಿರಿ ಹೇಳಿರಣ್ಣಾ ? ಆ ಶಿವಜ್ಞಾನದ ಮಹಾವರ್ಮವನರಿಯದೆ ಲಿಂಗದೊಡನೆ ಸಹಭೋಜನವ ಮಾಡಿದೊಡೆ ಅಘೋರನರಕದಲ್ಲಿಕ್ಕದೆ ಬಿಡುವನೆ ನಮ್ಮ ಕೂಡಲಚೆನ್ನಸಂಗಮದೇವನು ?
--------------
ಚನ್ನಬಸವಣ್ಣ
ಹರಿಗೆ ಇಂದ್ರನೀಲಲಿಂಗ, ಬ್ರಹ್ಮಂಗೆ ಶೈಲಲಿಂಗ, ಶಕ್ರಂಗೆ ಮಣಿಮಯಲಿಂಗ, ಸೂರ್ಯಂಗೆ ತಾಮ್ರಲಿಂಗ, ಸೋಮಂಗೆ ಮೌಕ್ತಿಕಲಿಂಗ, ಕುಬೇರಂಗೆ ಹೇಮಲಿಂಗ, ನಾಗರ್ಕಳಿಗೆ ಪವಳದ ಲಿಂಗ, ಅಷ್ಟವಸುಗಳಿಗೆ ಕಂಚಿನ ಲಿಂಗ, ವರುಣಂಗೆ ರತ್ನದ ಲಿಂಗ, ನೈರುತ್ಯಂಗೆ ಪರುಷದ ಲಿಂಗ, ವಾಯವ್ಯಗೆ ಹಿತ್ತಾಳಿಯ ಲಿಂಗ, ಕಾಮಂಗೆ ಕುಸುಮ ಲಿಂಗ, ಋಷಿಗಳಿಗೆ ಪರ್ವತದ ಲಿಂಗ, ಅಸುರರಿಗೆ ಕಬ್ಬುನದ ಲಿಂಗ, ದಶರಥಗೆ ಸುವರ್ಣದ ಲಿಂಗ, ಅಶ್ವಿನಿಗೆ ಕರಪಾತ್ರೆಯ ಲಿಂಗ, ಅಂತಕಂಗೆ ಪರಿಪರಿಯ ಲಿಂಗ, ಗಾಯತ್ರಿಗೆ ಮರಕತದ ಲಿಂಗ, ಚಾಮುಂಡಿಗೆ ವಜ್ರದ ಲಿಂಗ, ಭೂದೇವಿಗೆ ಪಚ್ಚದ ಲಿಂಗ, ದುರ್ಗಿಗೆ ಕನಕದ ಲಿಂಗ, ಸಪ್ತಮಾತೃಕೆಯರಿಗೆ ಮಳಲ ಲಿಂಗ, ಇದೆಂತೆಂದಡೆ: ಇಂದ್ರನೀಲಮಯಂ ಲಿಂಗಂ ವಿಷ್ಣುಃ ಪೂಜಯತೇ ಸದಾ ವಿಷ್ಣುತ್ವಂ ಪ್ರಾಪ್ಯತೇ ತೇನ ಸಾದ್ಭುತೈಕಂ ಸನಾತನಂ ಬ್ರಹ್ಮಾ ಪೂಜಯತೇ ನಿತ್ಯಂ ಲಿಂಗಂ ಶೈಲಮಯಂ ಶುಭಂ ತಸ್ಯ ಸಂಪೂಜನಾದೇವ ಪ್ರಾಪ್ತಂ ಬ್ರಹ್ಮತ್ವಮುತ್ತಮಂ ಶಕ್ರೋ[s]ಪಿ ದೇವ ರಾಜೇಂದ್ರೋ ಲಿಂಗಂ ಮೃಣ್ಮಯಂ ಶುಭಂ ಭಕ್ತ್ಯಾ ಪೂಜಯತೇ ನಿತ್ಯಂ ತೇನ ಶಕ್ರತ್ವಮಾಪ್ನುಯಾತ್ ತಾಮ್ರಲಿಂಗಂ ಸದಾಕಾಲಂ ಭಕ್ತ್ಯಾ ದೇವೋ ದಿವಾಕರಃ ತ್ರಿಕಾಲಂ ಯಜತೇ ತೇನ ಪ್ರಾಪ್ತಂ ಸೂರ್ಯತ್ವಮುತ್ತಮಂ ಮುಕ್ತಾಫಲಮಯಂ ಲಿಂಗಂ ಸೋಮಃ ಪೂಜಯತೇ ಸದಾ ತೇನ ಸೋಮೇನ ಸಂಪ್ರಾಪ್ತಂ ಸೋಮತ್ವಂ ಸತತೋಜ್ವಲಂ ಲಿಂಗ ಹೇಮಮಯಂ ಕಾಂತಂ ಧನದೋ[s]ರ್ಚಯತೇ ಸದಾ ತೇನ ಸಾಧನತೋ ದೇವಃ ಧನದತ್ವಮವಾಪ್ತವಾನ್ ವಸವಃ ಕಾಂಸ್ಯಕಂ ಲಿಂಗಂ ಪೂಜ್ಯ ಕಾಮಾನವಾಪ್ನುಯಾತ್ ನಾಗಾಃ ಪ್ರವಾಳಜಂ ಲಿಂಗಂ ಪೂಜ್ಯ ರಾಜ್ಯಾನಿ ಲೇಬ್ಥಿರೇ ಲಿಂಗಂ ರತ್ನಮಯಂ ಚಾರು ವರುಣೋಡಿರ್ಚಯತೇ ಸದಾ ತೇನ ತದ್ವರುಣತ್ವಂ ಹಿ ಪ್ರಾಪ್ತಂ ಭದ್ರಸಮನ್ವಿತಂ ಲಿಂಗಮಧ್ಯೇ ಜಗತ್ಸರ್ವಂ ಸರ್ವಂ ಲಿಂಗೇ ಪ್ರತಿಷ್ಠಿತಂ ತಸ್ಮಾತ್ ಸಂಪೂಜಯೇಲ್ಲಿಂಗಂ ಯದಿ ಚೇತ್ಸಿದ್ಧಿಮಾತ್ಮನಃ ಐವಂ ದೇವಾಶ್ಚ ಗಂಧರ್ವಾ ಯಕ್ಷೋರಗರಾಕ್ಷಸಾಃ ಪೂಜಯಂತಿ ಸದಾಕಾಲಮೀಶಾನಂ ಸುರನಾಯಕಂ ಬ್ರಹ್ಮಾವಿಷ್ಣುಸ್ತಥಾ ಶಕ್ರೋ ಲೋಕಪಾಲಾಶ್ಚ ದೇವತಾಃ ಲಿಂಗಾರ್ಚನರತಾ ಹ್ಯೇತೇ ಮಾನುಷೇಷು ಚ ಕಾ ಕಥಾ ? ಇಂತೆಂದುದಾಗಿ ಸುರಪ ಹರಿ ವಿರಂಚಿ ಗಂಧರ್ವ ಯಕ್ಷ ರಾಕ್ಷಸ ಋಷಿ ದೇವತೆಗಳೆಲ್ಲರೂ ಲಿಂಗವ ಪೂಜಿಸಿ ಇಷ್ಟಕಾಮ್ಯಸಿದ್ಧಿಯ ಪಡೆದು ಭವಭಾರಿಗಳಾದರು. ಸೌರಾಷ್ಟ್ರ ಸೋಮೇಶ್ವರನ ಶರಣರು ಫಲಪದಂಗಳ ಮೀರಿ ಅರಿಕೆಯರತು ಬಯಕೆ ಬರತು ಹುಟ್ಟುಗೆಟ್ಟು ಭವಹಿಂಗಿ ಅಭಂಗರಾದರು
--------------
ಆದಯ್ಯ
ಬಸವೇಶ್ವರದೇವರು ತೃಣಪುರುಷನ ಮಾಡಿ `ಮೀಮಾಂಸಕಂಗೆ ಉತ್ತರವ ಕೊಡು ಹೋಗು' ಎನಲು ಆ ತೃಣಪುರುಷನು ಮಹಾಪ್ರಸಾದವೆಂದು ಕೈಕೊಂಡು, ಮೀಮಾಂಸಕಂಗೆ ಉತ್ತರವ ಕೊಟ್ಟು ಶಿವವಿರಹಿತವಾದ ಕಾಳ್ಪುರಾಣವೆಲ್ಲವ ಬಯಲು ಮಾಡಿ ನುಡಿಯಲು ಆತಂಗೆ ಶಿವಜ್ಞಾನ ತಲೆದೋರಿ, ಆ ಬಸವೇಶಂಗೆ ವಂದನಂಗೈದು ಉಪದೇಶವ ಮಾಡಬೇಕೆನಲು, ಆತಂಗೆ ವೀರಶೈವದೀಕ್ಷೆಯ ಮಾಡಿ ಷಟ್‍ಸ್ಥಲಮಾರ್ಗ ಕ್ರೀಯ ನಿರೂಪಿಸಿ ತಿಳುಹಲು `ಎಲೆ ಬಸವೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟುಕೊಳಬಹುದೆರಿಱ ಎಂದು ಕೇಳಲು, ಕೇಳೈ ಮೀಮಾಂಸಕಾ, ಪೂರ್ವದಲ್ಲಿ ಪರಮೇಶ್ವರನು ಸಮಸ್ತ ದೇವತೆಗಳು ಒಡ್ಡೋಲಗದಲ್ಲಿರಲು ಸೂತ್ರಿಕನೆಂಬ ಶೈವಾಚಾರ್ಯನು `` ಎಲೆ ಪರಮೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಹುದೆರಿ' ಎನಲು `ಎಲೆ ಸೂತ್ರಿಕನೆ ಕೇಳು ನಾನೆಂದಡೆಯೂ ಜಂಗಮವೆಂದಡೆಯೂ ಬೇರಿಲ್ಲ ಅದು ಕಾರಣ ಜಂಗಮವೆ ಅಧಿಕ. ನೀನಾ ಜಂಗಮಲಿಂಗದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಾರದೆಂದು ನಿಂದಿಸಿ ನುಡಿದ ವಾಗ್ದೋಷಕ್ಕೆ ಮತ್ರ್ಯಕ್ಕೆ ಹೋಗಿ ಹೊಲೆಯನ ಮನೆಯ ಸೂಕರನ ಬಸುರಲ್ಲಿ ಹುಟ್ಟಿ ಹದಿನೆಂಟು ಜಾತಿಯ ಅಶುದ್ಧವನು ನಾಲಗೆಯಲಿ ಭುಂಜಿಸಿ ನರಕಜೀವಿಯಾಗಿರುಱಱ ಎಂದುದೆ ಸಾಕ್ಷಿ. ಇದನರಿದು ಮತ್ತೆ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲಾಗದೆಂಬ ಪಂಚಮಹಾಪಾತಕರ ಮಾತ ಕೇಳಲಾಗದು. ಅದೆಂತೆಂದಡೆ:ವೀರಾಗಮದಲ್ಲಿ, ಜಂಗಮಾನಾಮಹಂ ಪ್ರಾಣೋ ಮಮ ಪ್ರಾಣೋ ಹಿ ಜಂಗಮಃ ಜಂಗಮೇನ ತ್ವಹಂ ಪೂಜ್ಯೋ ಮಯಾ ಪೂಜ್ಯೋ ಹಿ ಜಂಗಮಃ ಪರಸ್ಪರಮಭೇದತ್ವಾಜ್ಜಂಗಮಸ್ಯ ಮಮಾಪಿ ಚ ಪಾದೋದಕಪ್ರಸಾದಾಭ್ಯಾಂ ವಿನಾ ತೃಪ್ತಿರ್ನ ಜಾಯತೇ ಇಂತೆಂಬ ಶಿವನ ವಾಕ್ಯವನರಿದು, ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನಕ್ಕೆರೆದು ಪ್ರಸಾದವ ಲಿಂಗಕ್ಕೆ ನೈವೇದ್ಯವ ಸಮರ್ಪಿಸಿ ಭೋಗಿಸುವಾತನೆ ಸದ್ಭಕ್ತ, ಆತನೆ ಮಾಹೇಶ್ವರ, ಆತನೆ ಪ್ರಸಾದಿ, ಆತನೆ ಪ್ರಾಣಲಿಂಗಿ, ಆತನೆ ಶರಣ, ಆತನೆ ಐಕ್ಯನು. ಇಂತಪ್ಪ ಷಟ್‍ಸ್ಥಲಬ್ರಹ್ಮಿಗೆ ನಮೋ ನಮೋ ಎಂಬೆ. ಇಂತಲ್ಲದೆ ಜಂಗಮದ ಪಾದತೀರ್ಥಪ್ರಸಾದರಹಿತನಾಗಿ ಆವನಾನೊಬ್ಬನು ತನ್ನ ಇಷ್ಟಲಿಂಗಕ್ಕೆ ಅರ್ಷವಿಧಾರ್ಚನೆ ಷೋಡಶೋಪಚಾರಕ್ರೀಯಿಂದ ಪೂಜೆಯ ಮಾಡುವಲ್ಲಿ ಅವನು ಶುದ್ಧಶೈವನು, ಅವನಿಗೆ ಮುಕ್ತಿಯಿಲ್ಲ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸುಳಿದಡೆ ಒಡಲಿಲ್ಲ ನಿಂದಡೆ ನೆಳಲಿಲ್ಲ ನಡೆದಡೆ ಗಮನವಿಲ್ಲ ನುಡಿದಡೆ ಶಬ್ದವಿಲ್ಲ ದಗ್ಧಪಟನ್ಯಾಯವಾಗಿ. ಉಂಡಡೆ ಉಪಾಧಿಯಿಲ್ಲ ಉಣದಿದ್ದಡೆ ಕಾಂಕ್ಷೆಯಿಲ್ಲ ಯಥಾಲಾಭಸಂತುಷ್ಟನಾಗಿ. ಸ್ತುತಿಯಿಲ್ಲ ನಿಂದೆಯಿಲ್ಲ ನಂಟಿಲ್ಲ ಹಗೆಯಿಲ್ಲ ಅರಿವಿಲ್ಲ ಮರಹಿಲ್ಲ ನಾನೆಂಬ ನೆನಹಿಲ್ಲವಾಗಿ. ಇದಕ್ಕೆ ಶ್ರುತಿ: ಯತ್ಪ್ರಾಣೇ ಲಿಂಗಸಂಧಾನಂ ತಲ್ಲಿಂಗಂ ಪ್ರಾಣಸಂಯುತಂ ಪ್ರಾಣಲಿಂಗದ್ವಯೋರ್ಭೇದೋ ನ ಭೇದಶ್ಚ ನ ಸಂಶಯಃ ದಗ್ಧಾಂಬರಂ ಹಿ ಕರ್ಮಾಣಿ ಚೇಂದ್ರಿಯಾಣಿ ಮನೋ ವಚಃ ಭಾವಸದ್ಭಾವನಿರ್ವಾಣಃ ಪರೇ ಯಸ್ಯ ವಿಲೀಯತೇ ಇಂತೆಂದುದಾಗಿ, ಸೌರಾಷ್ಟ್ರ ಸೋಮೇಶ್ವರನ ಶರಣರು ಲಿಂಗಪ್ರಾಣಿಗಳಾಗಿ ಅಂಗವ ಮರೆಗೊಂಡು ಎಂತಿರ್ದಡಂ ಎಂತು ನಡೆದಡಂತೆ ಸಂತ.
--------------
ಆದಯ್ಯ
ತತ್ವಮೂವತ್ತಾರ ಮೀರಿ ನಾದಬಿಂದುಕಳಾತೀತನಾದ ಶಿವನು ಜಗನ್ಮಯನಾದ ಆಗಿಯೂ ಜಗದ ಸ್ಥಿತಿಗತಿ ತನಗಿಲ್ಲವದೆಂತೆಂದಡೆ: ಏಕ ಏವ ಹಿ ಭೂತಾತ್ಮಾ ಭೂತೇಷು ಸುವ್ಯವಸ್ಥಿತಃ ಏಕಧಾ ಬಹುಧಾ ಚೈವ ದೃಶ್ಯತೇ ಜಲಚಂದ್ರವತ್ ಎಂದುದಾಗಿ, ಜಲದೊಳಗೆ ಸೂರ್ಯನ ಪ್ರತಿಬಿಂಬ ವಿಕಾರಿಸುತಿರ್ದಡೇನುರಿ ಆ ವಿಕಾರ ಜಲಕ್ಕಲ್ಲದೆ ಸೂರ್ಯಂಗಿಲ್ಲದಂತಿಪ್ಪನಯ್ಯಾ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಕೇಳಾ ಹೇಳುವೆನು: ಮಹಾಘನಲಿಂಗಭಕ್ತನು ಆಚರಿಸುವ ಸದ್ವರ್ತನನಿರ್ಣಯವ, ಅದು ಪರಶಿವಲಿಂಗದ ನಿತ್ಯಪದದ ಮಾರ್ಗ: ಗೌರವಂ ಲೈಂಗಿಕಂ ಚಾರಂ ಪ್ರಸಾದಂ ಚರಣಾಂಬುಕಂ ಭೌಕ್ತಿಕಂ ಚ ಮಯಾ ಪ್ರೋಕ್ತಂ ಷಡ್ವಿಧಂ ವ್ರತಮಾಚರೇತ್ ಗುರುದೇವಃ ಶಿವಃ ಸಾಕ್ಷಾತ್ ತಚ್ಚಿಷ್ಯೋ ಜ್ಞಾನಸಾರವಿತ್ ತ್ರಿವಿಧಂ ಹೃದಿ ಸಂಭಾವ್ಯ, ಕೀರ್ತಿತಂ ಗೌರವಂ ವ್ರತಂ ಗುರುಣಾ ಚಾರ್ಪಿತಂ ಲಿಂಗಂ ಪ್ರಾಣಲಿಂಗಂ ಪ್ರಕಥ್ಯತೇ ತಥೈವ ಭಾವನಾದ್ವೈತಂ ತದ್ವ್ರತಂ ಲೈಂಗಿಕಂ ಸ್ಮøತಂ ಗುರುಲಿಂಗಚರಾಧೀನಂ ನಿರ್ಮಾಲ್ಯಂ ಭೋಜನಾದಿಕಂ ತಸ್ಯಾನುಭಾವನಂ ದೇವಿ ತತ್ಪರಂ ವ್ರತಮುತ್ತಮಂ ಗುರುಪಾದಾಬ್ಜಸಂಭೂತಂ ಉಜ್ಜಲಂ ಲೋಕಪಾವನಂ ತಜ್ಜಲಸ್ನಾನಪಾನಾದಿ ತದ್ವ್ರತಂ Z್ಪರಣಾಂಬುಕಂ|| ಗುರುಲಿಂಗಚರಾಣಾಂ ಚ ಪ್ರಸಾದಂ ಪಾದವಾರುಣಂ| ಪರ್ಯಾಯಭಜನಂ ಭಕ್ತ್ಯಾ ತದ್ವ್ರತಂ ಸ್ಮøತಂ|| ಕ್ರಿಯಾದ್ವೈತಂ ನ ಕರ್ತವ್ಯಂ ಭಾವಾದ್ವೈತಂ ಸಮಾಚರೇತ್| ಕ್ರಿಯಾಂ ನಿರ್ವಹತೇ ಯಸ್ತು ಭಾವಶುದ್ದಂ ತು ಶಾಂಕರಿ|| ಎಚಿದುದಾಗಿ, ಪೂಜಿತೈಃ ಶಿವಭಕ್ತೈಶ್ಚ ಪರಕರ್ಮ ಪ್ರಪಚಿಚಿತಂ| ಪುಣ್ಯಸ್ಸಶಿವಧರ್ಮಃ ಸ್ಯಾತ್ ವಜ್ರಸ್ರಚಿಸ್ಸಮಬ್ರವೀತ್|| ಪಾತ್ರಶಾಸನಯೋರ್ಮಧ್ಯೇ ಶಾಸನಂ ತು ವಿಶಿಷ್ಯತೇ| ತಸ್ಮಾತ್ ಶಾಸನಮೇವಾದೌ ಪೂಜ್ಯತೇ ಚ ಶವೋ ಯಥಾ|| ಗುಣವತ್ಪಾತ್ರಪ್ರಜಾಯಾಂ ವರಂ ಶಾಸನಪೂಜನಂ| ಶಾಸನಂ ಪೂಜಾಯೇತ್ತಸ್ಮಾಸವಿZ್ಫರಂ ಶಿವಾಜÐಯಾ|| ಸ ನರೋ ಭೃತ್ಯಸದ್ಭಕ್ತಃ ಪತಿಕರ್ಮಾ ಚ ಜಂಗಮಃ| ರೂಪಂ ಚ ಗುಣಶೀಲಂ ಚ ಅವಿZ್ಫರಂ ಶುಭಂ ಭವೇತ್|| ಗುಣೋಗುಣಶ್ಚ ರೂಪಂ ಚ ಅರೂಪಂ ಚ ನ ವಿದ್ಯತೇ ಪಶ್ಶತ್ಯಮೋಹಭಾವೇನ ಸ ನರಃ ಸುಖಮೇಧತೇ ದುಶ್ಶೀಲಃ ಶೀಲಸರ್ವಜ್ಞಂ ಮೂರ್ಖಭಾವೇನ ಪಶ್ಯತಿ ಪಶ್ಯಂತಿ ಲಿಂಗಭಾವೇನ ಸದ್ಭಕ್ತಾ ಮೋಕ್ಷಭಾವನಾಃ ಯಥಾ ಲಿಂಗಂ ತಥಾ ಭಾವಃ ಸತ್ಯಂ ಸತ್ಯಂ ನ ಸಂಶಯಃ ಯಥಾ ಭಕ್ತಿಸ್ತಥಾ ಸಿದ್ಧಿಃ ಸತ್ಯಂ ಸತ್ಯಂ ನ ಸಂಶಯಃ ಸತ್ಯಭಾವಿ ಮಹಾಸತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ಮಿಥ್ಯಭಾವೀತ್ವಹಂ ಮಿಥ್ಯಾ ಸತ್ಯಂ ಸ್ಯಾಚ್ಚಿವಲಕ್ಷಣಂ ದಕ್ಷಿಣೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅದಕ್ಷೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅರಿರ್ಮಿತ್ರಂ ವಿಷಂ ಪಥ್ಯಂ ಅಧರ್ಮೋ ಧರ್ಮವದ್ಭವೇತ್ ಪ್ರಸನ್ನ ಏವ ದೇವೇ ತು ವಿಪರೀತಂ ಭವೇದ್ಧೃವಂ ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಚ್ಯತೆ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಪಲಂ ಭವೇತ್ ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋ[s]ಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಸಃ ಪೂಜ್ಯಶ್ಚ ಯಥಾ ಹ್ಯಹಂ ಸದ್ಗುರುರ್ಭಾವಲಿಂಗಂ ಚ ತಲ್ಲಿಂಗಂ ಚಿತ್ಸ್ವರೂಪಕಂ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಗುರುಃ ಪರಶಿವಶ್ಚೈವ ಜಂಗಮೋ ಲಿಂಗಮೇವ ಚ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಲಿಂಗಾಂಗೀ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ .................................................................. ತತ್ತ್ವದೀಪಿಕಾಯಾಂ ಪ್ರಸಾದೋ ಮುಕ್ತಿಮೂಲಂ ಚ ತತ್ಪ್ರಸಾದಸ್ತ್ರಿಧಾ ಮತಃ ಶಿವಃ ಸರ್ವಾಧಿದೇವಃ ಸ್ಯಾತ್ ಸರ್ವಕರ್ಮ ಶಿವಾಜ್ಞಯಾ ತತ್ತ್ವದೀಪಿಕಾಯಾಂ ಮಾಹೇಶ್ವರಸ್ಯ ಸಂಗಾದ್ಧಿ ಶಿವಯೋಗಂ ಲಭೇನ್ನರಃ ಪ್ರಸಾದಂ ತ್ರಿವಿಧಂ ಗ್ರಾಹ್ಯಂ ಮಹಾಪಾಪವಿನಾಶಕಂ ತತ್ತ್ವದೀಪಿಕಾಯಾಂ ಧನಪುತ್ರಕಲತ್ರಾದಿಮೋಹಂ ಸಂತ್ಯಜ್ಯ ಯೋ ನರಃ ಶಿವಭಾವೇನ ವರ್ತೇತ ಸದ್ಯೋನ್ಮುಕ್ತಸ್ಸುಖೀ ಭವೇತ್ ಪ್ರಾಣಲಿಂಗೇತ್ವವಿಶ್ವಾಸಾತ್ ಭಕ್ತಿಮುಕ್ತಿದ್ವಯಂ ನ ಚ ಪ್ರಾಣಲಿಂಗಸ್ಯ ವಿಶ್ವಾಸಾತ್ ಸಿದ್ದಿಃ ಸ್ಯಾತ್ ಭಕ್ತಿಮುಕ್ತಿದಾ ಪ್ರಾಣಲಿಂಗಮವಿಶ್ವಸ್ಯ ತೀರ್ಥಲಿಂಗಮುಪಾಸತೇ ಸ ನರಃ ಸ್ವರ್ಗಮಾಪ್ನೋತಿ ಗಣತ್ವಂ ನ ಪ್ರಯುಜ್ಯತೇ ಪ್ರಾಣಲಿಂಗಸಮಾಯುಕ್ತಃ ಪರಹಸ್ತಸಮರ್ಚನಾತ್ ತತ್ಪೂಜಾ ನಿಷ್ಫಲಾ ದೇವಿ ರೌರವಂ ನರಕಂ ವ್ರಜೇತ್ ಪ್ರಾಣಲಿಂಗಸಮಾಯುಕ್ತಃ ಪರಹಸ್ತೇ ದದಾತಿ ಚೇತ್ ನಿಮಿಷಾರ್ಧವಿಯೋಗೇನ ವಿಶೇಷಂ ಪಾತಕಂ ಭವೇತ್ ಪ್ರಾಣಲಿಂಗಸಮಾಯುಕ್ತ ಏಕಭುಕ್ತೋಪವಾಸತಃ ಗುರುಲಂಘನಮಾತ್ರೇಣ ಪೂಜಾ ಯಾ ನಿಷ್ಪಲಾ ಭವೇತ್ ಇಷ್ಟಲಿಂಗಂ ಸಮುತ್ಸೃಜ್ಯ ಅನ್ಯಲಿಂಗಸ್ಯ ಪೂಜನಾತ್ ಸ್ವೇಷ್ಟಂ ನ ಲಭತೇ ಮತ್ರ್ಯಃ ಪರಂ ತತ್ತ್ವಂ ನಿಹತ್ಯಸೌ ಅತ್ಯಂತಮಹಿಮಾರೂಢಂ ಶಿವಮಾಹಾತ್ಮ್ಯವಿಸ್ತರಂ ಯೋ[s]ಪಿ ದೃಷ್ಟ್ವಾಪ್ಯವಿಶ್ವಾಸೀ ಸ ಭಕ್ತೋ ನರಕಂ ವ್ರಜೇತ್ ಅಥ ಯೋ ಯಾದವ ಶ್ಚೈವ ರಾಜಾನಶ್ಯವೋ ಗ್ರಹಾ ನೈವ ಪೀಡ್ಯಸ್ತು ಯತ್ಕೃತ್ವಾ ನರಂ ಹಾರಪರಾಯಣಂ ಹಿರಣ್ಯರೂಪದೇಹಸ್ತಂ ಹಿರಣ್ಯಪತಿಪ್ರಾಣಿನಾಂ ಆಶಾದನ್ಯಂ ಹಿರಣ್ಯಂ ಚ ತದ್ದೇಹಂ ಲಿಂಗವರ್ಜಯೇತ್ ಘೃಣಾಮೂರ್ತಿರ್ಮಹಾದೇವೋ ಹಿರಣ್ಯೋದ್ಭಾಹು ಶಂಕರಃ ವರದಾಭಯ ಮತ್ಸ್ವಾಮಿನ್ ಯೇ ಆಶಾದನ್ಯಂ ವಿವರ್ಜಯೇತ್ ಆಶಾ ಚ ನರಕಂ ಚೈವ ನಿರಾಶಾ ಮುಕ್ತಿರೇವ ಹಿ ಆಶಾನಿರಾಶಯೋರ್ನಾಸ್ತಿ ತತ್ಸುಖಸ್ಯ ಸಮಂ ಪರಂ ಶಿವರಹಸ್ಯೇ ಜಪಶ್ರಾಂತಃ ಪುನಧ್ರ್ಯಾಯೇತ್ ಧ್ಯಾನಶ್ರಾಂತಃ ಪುನರ್ಜಪೇತ್ ಜಪಧ್ಯಾನಾದಿಯೋಗೇನ ಶಿವಃ ಕ್ಷಿಪ್ರಂ ಪ್ರಸೀದತಿ ಗಚ್ಚನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ ಶುಚಿರ್ವಾಪ್ಯಶುಚಿರ್ವಾಪಿ ಶಿವಂ ಸರ್ವತ್ರ ಚಿಂತಯೇತ್ ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂ ಗತೋ[s]ಪಿ ವಾ ಯಸ್ಸ್ಮರೇತ್ ಸತತಂ ರುದ್ರಂ ಸ ಬಾಹ್ಯಾಭ್ಯಂತರಃ ಶುಚಿಃ ದುರ್ಲಭಂ ಮಾನುಷಂ ಜನ್ಮ ವಿವೇಕಸ್ತ್ವತಿದುರ್ಲಭಃ ದುರ್ಲಭಾ ಚ ಶಿವೇ ಭಕ್ತಿಃ ಶಿವಜ್ಞಾನಂ ತು ದುರ್ಲಭಂ ಇಂ್ರಯಪ್ರೀತಿದಾತಾರಃ ಪುಮಾಂಸೋ ಬಹವಃ ಕಿಲ ಶಿವಜ್ಞಾನಾರ್ಥದಾತಾರಃ ಪುಮಾಂಸೋ ಲೋಕದುರ್ಲಭಾಃ ಲಿಂಗಭಕ್ತ್ಯಾ ಮನಃ ಪೂತಂ ಅಂಗಂ ಪೂತಂ ತು ದೇಶಿಕಾತ್ ಭಾವಸ್ತು ಜಂಗಮಾತ್ ಪೂತಸ್ತ್ರಿವಿಧಾ ಭಕ್ತಿರುತ್ತಮಾ ಅಷ್ಟವಿಧಾರ್ಚನಂ ಲಿಂಗೇ ಅಷ್ಟಭೋಗಸ್ತು ಜಂಗಮೇ ಲಿಂಗೇ ಷೋಡಶೋಪಚಾರಾಃ ಸರ್ವೇ ತಾತ್ಪರ್ಯಜಂಗಮೇ ಮನೋ ಲೀನಂ ಮಹಾಲಿಂಗೇ ದ್ರವ್ಯಂ ಲೀನಂ ತು ಜಂಗಮೇ ತನುರ್ಲೀನೋ ಗುರೌ ಲಿಂಗೇ ಇತಿ ಭಕ್ತಸ್ಯ ವೈ ಧೃವಂ ಸಕಲಂ ಭಕ್ತರೂಪಂ ಚ ನಿಷ್ಕಲಂ ಶಿವರೂಪಕಂ ಸಕಲಂ ನಿಷ್ಕಲಂ ಮಿಶ್ರಂ ಚರರೂಪಂ ವಿಧೀಯತೇ ಸತ್ಕ್ರಿಯಾಂ ಪೂಜಯೇತ್ಪ್ರಾತರ್ಮಧ್ಯಾಹ್ನೇ ಭೋಜನಾವಧಿಂ ಸಾಯಂಕಾಲೇ ಮಹಾಪೂಜಾಂ ತತ್ಕ್ರಮಸ್ತು ವಿಶಿಷ್ಯತೇ ಮನಃಪೂತಾರ್ಚನಂ ಭಕ್ತ್ಯಾ ಪ್ರಾತಃಕಾಲವಿಧಿಕ್ರಮಃ ಸುಜಲಂ ಸುರಸಂ ಚೈವ ಯಥಾಸಂಭವದ್ರವ್ಯಕಂ ಅರ್ಪಯೇಚ್ಚರಲಿಂಗಾಯ ಮಧ್ಯಾಹ್ನೇ ಪೂಜನಕ್ರಮಃ ಗಂಧಂ ಪುಷ್ಪಂ ಚ ಕರ್ಪೂರಂ ಚಂದನಂ ಲೇಪನಂ ತಥಾ ಅರ್ಪಯೇತ್ ಫಲತಾಂಬೂಲಂ ಸಂಧ್ಯಾಪೂಜಾರ್ಚನಾವಿಧಿಕ್ರಮಃ ಧೂಪಮುಷ್ಣಾಧಿಕಂ ಸರ್ವಂ ಪ್ರಾತಃಕಾಲಾರ್ಚನಾವಿಧಿಃ ಪೂಜೋಪಚಾರಸ್ಸರ್ವೇಷಾಂ ಶೈತ್ಯಂ ಮಧ್ಯಾಹ್ನಸಂಧಿಷು ತ್ರಿಸಂಧ್ಯಾ ತ್ರಿಷು ಕಾಲೇಷು ಉಷ್ಣಂ ನೈವೇದ್ಯಮುತ್ತಮಂ ಯಥಾಸಂಭವಂ ಸಂಧ್ಯಾಯಾಂ ನಾದಾದೀನಿ ವಿಧಿಕ್ರಮಾತ್ ಶರಸಂಯುಕ್ತಪೂಜಾಯಾಂ ಕೇವಲಂ ನರಕಂ ಭವೇತ್ ನಿಶ್ಶಠಃ ಪೂಜಕಶ್ಚೈವ ಕೇವಲಂ ಮುಕ್ತಿಕಾರಣಂ ಅಷ್ಟಾದಶಾನಾಂ ಜಾತೀನಾಂ ಶಠಕರ್ಮಸ್ವಭಾವತಃ ನಿಶ್ಯಠಾಃ ಕುಲಮರ್ಯಾದಾಃ ಸದ್ಭಕ್ತಾಶ್ಚ ಶಿವಪ್ರಿಯಾಃ ಲಿಂಗಧಾರೀ ಮಹಾಲಿಂಗಂ ನ ಭೇದೋ ತತ್ರ ದೃಶ್ಯತೇ ಸದ್ವೈತ್ತೋ ಭೃತ್ಯರೂಪಶ್ಚ ಸತ್ಯಂ ಸತ್ಯಂ ಸಮೋ ನ ಚ ಕರ್ತೃಭೃತ್ಯಸ್ಯ ಸನ್ಮಾರ್ಗದುರ್ಮಾರ್ಗಸಮಭಾವತಃ ಅಹಂಕಾರೋ ಮಹಾಪಾಪಂ..... ಜನ್ಮಾಂತರಸಹಸ್ರೇಷು ತಪೋಧ್ಯಾನಪರಾಯಣೈಃ ನರಾಣಾಂ ಕ್ಷೀಣಪಾಪಾನಾಂ ಶಿವೇ ಭಕ್ತಿಃ ಪ್ರಜಾಯತೇ ತತೋ ವಿಷಯವೈರಾಗ್ಯಂ ವೈರಾಗ್ಯಾತ್ ಜ್ಞಾನಸಂಭವಃ ಜ್ಞಾನೇನ ತು ಪರಾ ಭಕ್ತಿಃ ಪ್ರಸಾದಸ್ತದನಂತರಂ ಪ್ರಸಾದಾನ್ಮುಚ್ಯತೇ ಜಂತುರ್ಮುಕ್ತಃ ಶಿವಸಮೋ ಭವೇತ್ ಅಸಾರೇ ದಗ್ಧಸಂಸಾರೇ ಸಾರಂ ದೇವಿ ಶಿವಾರ್ಚನಂ ಸತ್ಯಂ ವಚ್ಮಿ ಹಿತಂ ವಚ್ಮಿ ವಚ್ಮಿ ಪಥ್ಯಂ ಪುನಃ ಪುನಃ ಉಪಾಧಿಃ ಸ್ಯಾನ್ಮಹಾಭಕ್ತಿರುಪಾಧಿಸ್ಯಾತ್ಪ್ರಸಾದಕಃ ಉಪಾಧಿಃ ಸ್ಯಾತ್ಕ್ರಿಯಾಸ್ಸರ್ವಾಶ್ಯಿವಸ್ಯಾಸ್ಯಾ[s] ಪ್ರಸಾದತಃ ನಿುಪಾಧಿಕಮದ್ಭಕ್ತಿರ್ನಿರುಪಾಧಿಕಪ್ರಸಾದತಃ ನಿರೂಪಾಧಿಕ್ರಿಯಾಸ್ಸರ್ವಾಃ ಶಿವಃ ಶೀಘ್ರಂ ಪ್ರಸೀದತಿ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಮಹಾದ್ಭುತಂ ವತ್ಸರೇ ವತ್ಸರೇ ಚೋದ್ಯಂ ಸದ್ಭಕ್ತಸ್ಯಾಭಿವರ್ಧನಂ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಹಿ ದೃಶ್ಯತಾಂ ವತ್ಸರೇ ವತ್ಸರೇ ನಷ್ಟಾ ಮಹಾವಾಸಕ್ರಿಯಾಸ್ತಥಾ ದಾಸೋ[s]ಹಂ ಚ ಮಹಾಖ್ಯಾತಿರ್ದಾಸೋ[s]ಹಂ ಲಾಭ ಏವ ಚ ದಾಸೋ[s]ಹಂ ಚ ಮಹತ್ಪೂಜ್ಯಂ ದಾಸೋ[s]ಹಂ ಸತ್ಯಮುಕ್ತಿದಂ ಸದ್ಭಕ್ತಸಂಗಸಿದ್ಧಿಃ ಸ್ಯಾತ್ ಸರ್ವಸಿದ್ಧಿರ್ನ ಸಂಶಯಃ ಭಕ್ತಿಜ್ರ್ಞಾನಂ ಚ ವೈರಾಗ್ಯಂ ವರ್ಧತಾಂ ಚ ದಿನೇ ದಿನೇ ಮಹತ್ಸುಖಂ ಮಹಾತೋಷೋ ಲಿಂಗಭಕ್ತ್ಯಾ ಯಥಾ ಶಿವೇ ಪ್ರಾಣಲಿಂಗಪ್ರತೀಕಾರಂ ಕುರ್ವಂತೀಹ ದುರಾತ್ಮನಃ ಅತ್ಯುಗ್ರನರಕಂ ಯಾಂತಿ ಯುಗಾನಾಂ ಸಪ್ತವಿಂಶತಿ ಹುತಭುಗ್ಪತಿತಾಂಭೋಜಗತಿಃ ಪಾತಕಿನಾಂ ಭವೇತ್ ಸುಜ್ಞಾನ ಸದ್ಭಕ್ತಿ ಪರಮವೈರಾಗ್ಯಕ್ಕೆ ಶಿವನೊಲಿವನಲ್ಲದೆ ಸಾಮಾನ್ಯ ತಟ್ಟು ಮುಟ್ಟು ತಾಗು ನಿರೋಧದಲ್ಲಿ ಅನುಸರಿಸಿದಡೆ ಶಿವ ಮೆಚ್ಚುವನೆ ? ಸತ್ಯಶುದ್ಧ ನಿತ್ಯಮುಕ್ತ ಶರಣರು ಮೆಚ್ಚುವರೆ? ಶಿವನೊಲವು ಶರಣರೊಲವು ಸೂರೆಯೇ? ದೇವದಾನವ ಮಾನವರಂತೆ ಶಿವನಲ್ಲಿ ಭಕ್ತಿಯನು ಅನುಸರಿಸಿ ನಡೆವುದು ಭಕ್ತಿಯೇ ಅಲ್ಲ. ತಾಮಸ ರಾಜಸ ಉಳ್ಳುದು ಭಕ್ತಿಯ ಕುಳವಲ್ಲ, ಸದ್ಭಕ್ತಿಗೆ ಸಲ್ಲದು. ಗುರು ಲಿಂಗ ಜಂಗಮಕ್ಕೆ ಮರುಗಿ ತ್ರಿವಿಧಪದಾರ್ಥವ ಮನೋವಾಕ್ಕಾಯದಲ್ಲಿ ವಂಚನೆಯಿಲ್ಲದೆ ಮನ ಧನವನರ್ಪಿಸಿ ಮನ ಮುಟ್ಟಿದಡೆ ಗುರು ಲಿಂಗ ಜಂಗಮದ ಘನಮಹಿಮೆಯ ವೇದಪುರಾಣಾಗಮಂಗಳಿಂ ಗುರುವಾಕ್ಯದಿಂ ಪುರಾತನರ ಮತದಿಂದರಿದು ಮರೆವುದು ಜ್ಞಾನವಲ್ಲ. ಅರಿದು ಮರೆವುದು ಶ್ವಾನಜ್ಞಾನವಲ್ಲದೆ ಇಂತಪ್ಪ ಅಜ್ಞಾನಕ್ಕೆ ಒಲಿವನೇ ಶಿವನು? ಮೆಚ್ಚುವರೇ ಶರಣರು? ಶ್ರೀಗುರುಲಿಂಗಜಂಗಮವೊಂದೆಂಬರಿವು ಕರಿಗೊಂಡು ಸದ್ಭಾವದಿಂ ಭಾವಿಸಿ ಭಾವಶುದ್ಧಿಯಾದುದು ಸುಜ್ಞಾನ. ಗುರುಲಿಂಗಜಂಗಮದ ಅರ್ಚನೆ ಪೂಜನೆ ಅರ್ಪಿತ ದಾಸೋಹಕ್ರೀವಿಡಿದು ಸಂಸಾರಕ್ರೀ ಪರಧನ ಪರಸ್ತ್ರೀ ಅನ್ಯದೈವ ಭವಿಯನು ಅನುಸರಿಸಿ ಹಿಡಿದುದು ವೈರಾಗ್ಯವೇ ? ಅಲ್ಲ, ಅದು ಮರ್ಕಟ ವೈರಾಗ್ಯ. ಇವ ಬಿಟ್ಟು ಸದ್ಭಕ್ತಿ ಸಮ್ಯಗ್‍ಜ್ಞಾನ ಪರಮವೈರಾಗ್ಯಯುತನಾಗಿ ಗುರುಲಿಂಗಜಂಗಮಕ್ಕೊಲಿದು ಒಲಿಸುವುದು, ಸದ್ಭಕ್ತಿಪ್ರಸಾದಮುಕ್ತಿಯ ಹಡೆವುದು. ಈ ಸತ್ಕ್ರಿಯಾಭಕ್ತಿಯುಳ್ಳಡೆ ಲೇಸು, ಅಲ್ಲದಿದ್ದಡೆ ಸಾವುದೇ ಲೇಸಯ್ಯ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಗುರು ತನ್ನ ಲಿಂಗವನೆ ಅಂಗದ ಮೇಲೆ ಬಿಜಯಂಗೆಯ್ಸಿದನಾಗಿ, ಆ ಲಿಂಗಕ್ಕೆ ನಾನು ಅಷ್ಟವಿಧಾರ್ಚನೆ, ಷೋಡಶೋಪಚಾರಗಳ ಮಾಡಿ, ಚತುರ್ವಿಧಫಲಪದಪುರುಷಾರ್ಥವ ಪಡೆದು, ಆ ಪರಿಭವಕ್ಕೆ ಬರಲೊಲ್ಲದೆ, ನಾನು ನಿಷ್ಕಳವೆಂಬ ಹೊಲದಲ್ಲಿ ಒಂದು ನಿಧಾನವ ಕಂಡೆ. ಆ ನಿಧಾನದ ಹೆಸರಾವುದೆಂದಡೆ; ತ್ರೈಲಿಂಗದ ಆದಿಮೂಲಾಂಕುರವೊಂದಾದ ಚರಲಿಂಗವೆಂದು. ಆ ಚರಲಿಂಗದ ಪಾದಾಂಬುವ ತಂದೆನ್ನ ಇಷ್ಟಲಿಂಗದ ಚತುರ್ವಿಧಫಲಪದಪುರುಷಾರ್ಥವೆಂಬ ಕರಂಗಳಂ ತೊಳೆವೆ. ಅದೆಂತೆಂದೆಡೆ; ಸಾಲೋಕ್ಯಂ ಚ ತು ಸಾಮೀಪ್ಯಂ ಸಾರೂಪ್ಯಂ ಚ ಸಾಯುಜ್ಯತಾ ತದುಪೇಕ್ಷಕಭಕ್ತಶ್ಚ gõ್ಞರವಂ ನರಕಂ ವ್ರಜೇತ್ ಎಂದುದಾಗಿ, ಆ ಚರಲಿಂಗದ ಪ್ರಸಾದವ ತಂದೆನ್ನ ಇಷ್ಟಲಿಂಗದ ಜೀವಕಳೆಯ ಮಾಡುವೆ ಅದೆಂತೆಂದೆಡೆ; ಸ್ವಯಂಪ್ರಕಾಶರೂಪಶ್ಚ ಜಂಗಮೋ ಹಿ ನಿಗದ್ಯತೇ ಮತ್ತಂ, ಜಂಗಮಸ್ಯ ಪದೋದಂ ಚ ಯುಕ್ತಂ ಲಿಂಗಾಭಿಷೇಚನೇ ತತ್ಪ್ರಸಾದೋ ಮಹಾದೇವ ನೈವೇದ್ಯಂ ಮಂಗಲಂ ಪರಂ ಎಂದುದಾಗಿ, ಆ ಲಿಂಗವೆ ಅಂಗ, ಅಂಗವೆ ಲಿಂಗ, ಆ ಲಿಂಗವೆ ಪ್ರಾಣ, ಆ ಪ್ರಾಣ ಲಿಂಗವಾದುದು. ಇದು ಚತುರ್ವಿಧಫಲಪದಪುರುಷಾರ್ಥವ ಮೀರಿದ ಘನವು. ಕೂಡಲಸಂಗಮದೇವಯ್ಯಾ. ಈ ದ್ವಯದ ಪರಿಯ ನಿಮ್ಮ ಶರಣರನೆ ಬಲ್ಲ.
--------------
ಬಸವಣ್ಣ
ಇನ್ನಷ್ಟು ... -->