ಭಗಧ್ಯಾನವೆಂಬುವ ಬಂದಿಕಾನವ ಹೊಕ್ಕು,
ಸತಿಯರ ಸವಿನುಡಿಯೆಂಬ ಶಸ್ತ್ರವ ಹಾಯ್ದು,
ಅಂಗನೆಯರ ಶೃಂಗಾರವೆಂಬ ಕತ್ತಲೆಗವಿದು,
ಕಂಗಳು ಕೆಟ್ಟು, ಲಿಂಗನೆನಹೆಂಬ ಜ್ಯೋತಿ ನಂದಿತ್ತು ನೋಡಾ.
ಆ ಸ್ವಯಂ ಜ್ಯೋತಿ ಕೆಡದ ಮುನ್ನ, ಅಂಗವಿಕಾರವೆಂಬ ಅರಸು
ಅನಂತ ಹಿರಿಯರ ನುಂಗುವದ ಕಂಡು,
ಮಹಾಜ್ಞಾನಿಗಳು ಹೇಸಿ ಕಡೆಗೆ ತೊಲಗಿದರು ನೋಡಾ
ನಿಮ್ಮ ಪ್ರಮಥರು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.